ಜನ ಮನದ ನಾಡಿ ಮಿಡಿತ

Advertisement

ಸರಪಾಡಿ ಹಲ್ಲಂಗಾರು ಕಟ್ಟೆಗೆ ಕಾರಿಂಜದ ದೇವರ ಆಗಮನ

ಸಂಪ್ರದಾಯದಂತೆ ತೆನೆ ಹಬ್ಬ ಆಚರಣೆಯ ಹಿನ್ನೆಲೆಯಲ್ಲಿ ಕಾರಿಂಜ ದೇವಸ್ಥಾನದಿಂದ ಶ್ರೀ ದೇವರು ವಿವಿಧ ಕಟ್ಟೆಗಳಲ್ಲಿ ಪೂಜೆ ನಡೆದಿದೆ.

ಸುಮಾರು 9 ಕಿಮೀ ದೂರದ ಸರಪಾಡಿಯ ಹಲ್ಲಂಗಾರು ಕಟ್ಟೆಯಲ್ಲಿ ದೇವರ ದರ್ಶನ ಬಲಿ ಸಹಿತ ವಿಶೇಷ ಪೂಜೆ ನಡೆದು ಭತ್ತದ ತೆನೆಯನ್ನು ಕ್ಷೇತ್ರಕ್ಕೆ ಕೊಂಡೊಯ್ಯಲಾಗಿದೆ. ಮುಂಜಾನೆ ಸೂರ್ಯೋದಯಕ್ಕೆ ಮುನ್ನಾ ಕಾರಿಂಜದಿಂದ ವಾದ್ಯ ವೃಂದ ಸಹಿತವಾಗಿ ಅರ್ಚಕರು, ತಂತ್ರಿಗಳು, ಗ್ರಾಮಣಿಗಳು, ಮುಖ್ಯಸ್ಥರು ಕಾಲ್ನಡಿಗೆಯಲ್ಲಿ ಮೆರವಣಿಗೆಯ ಮೂಲಕ ಶೇಡಿಮೆ ಕಟ್ಟೆ, ದಂಡ್ಯೊಟ್ಟು ಕಟ್ಟೆ, ದೇವಶ್ಯ ಕಟ್ಟೆ, ಸೂಳ್ದುಕ್ಕು ಕಟ್ಟೆ, ಭಂಡಾರಿಕಟ್ಟೆ, ಸಮಗಾರನ ಕಟ್ಟೆ ಹಾಗೂ ಹಲ್ಲಂಗಾರು ಕಟ್ಟೆಯಲ್ಲಿ ಹೀಗೆ 7 ಕಟ್ಟೆಗಳಲ್ಲಿ ದೇವರಿಗೆ ಪೂಜೆ ಸಲ್ಲಿಸಲಾಗುತ್ತದೆ.

ಕಾಲ್ನಡಿಗೆಯಲ್ಲಿ ಮೆರವಣಿಗೆಯ ಮೂಲಕ ಕಟ್ಟೆಗಳಲ್ಲಿ ದೇವರಿಗೆ ಪೂಜೆ ಸಲ್ಲಿಸಲಾಯಿತು. ಬಳಿಕ ಕಂಬಳದ ಗದ್ದೆಯಿಂದ ತೆನೆಯನ್ನು ಕ್ಷೇತ್ರಕ್ಕೆ ತೆಗೆದುಕೊಂಡು ಹೋಗಿ, ನಂತರ ಭಕ್ತರು ಅದನ್ನು ಪಡೆದು ಮನೆ ತುಂಬಿಸಿಕೊಂಡು, ಮನೆಯಲ್ಲಿ ಸಂಪ್ರದಾಯವಾಗಿ ಹೊಸ ಅಕ್ಕಿ ಊಟವನ್ನು ಮಾಡಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಅಪಾರ್ಟ್‌ಮೆಂಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆ

ಮಂಗಳೂರು: ಮಂಗಳೂರಿನಲ್ಲಿ ಆ.13ರಂದು ಡೋಲ್ಚೆ ಎಸ್ಥೆಟಿಕಾ ಸಂಸ್ಥೆಯ ಮೊದಲ ಶಾಖೆ ಆರಂಭ

ಮಂಗಳೂರು: ಕದ್ರಿ ಬಂಜನ್‌ ಕ್ಷೇತ್ರದಲ್ಲಿ ನಿವೃತ್ತ ವೀರ ಯೋಧರು, ವೀರನಾರಿಯರಿಗೆ ಸನ್ಮಾನ…!

ಮಂಗಳೂರು: ಡಿಸಿ ಮನ್ನಾ ಭೂಮಿ ಹಂಚಿಕೆಗೆ ಆಗ್ರಹ: ಒಂದು ತಿಂಗಳಲ್ಲಿ ಸಮಸ್ಯೆ ಬಗೆಹರಿಸದಿದ್ದರೆ ಉಗ್ರ ಹೋರಾಟ…!

ವಿಟ್ಲ: ಗ್ಯಾಸ್ ಸಿಲಿಂಡರ್ ಸ್ಫೋಟ, ಮನೆ ಸಂಪೂರ್ಣ ಜಖಂ; ಲಕ್ಷಾಂತರ ರೂ. ನಷ್ಟ

ತೊಕ್ಕೊಟ್ಟು: ಬಾರ್ ಬಳಿ ತಲವಾರು ಬೀಸಿ ಆತಂಕ ಸೃಷ್ಟಿಸಿದ ರೌಡಿಶೀಟರ್ ಬಂಧನ…!

ಟೆಹ್ರಾನ್: ಖಮೇನಿ ಭೇಟಿಯಲ್ಲೇ ಹೊಸ ರಹಸ್ಯ! ‘ನೀವೇ ಖಮೇನಿಯೇ?’ ಎಂದು ಪ್ರಶ್ನಿಸಿದ ಇರಾನ್ ಅಧ್ಯಕ್ಷ…!

ಬ್ಯಾಂಕಾಕ್: ಥೈಲ್ಯಾಂಡ್ ಶಾಲೆಯಲ್ಲಿ ಗುಂಡಿನ ದಾಳಿ: ಶಿಕ್ಷಕ ಸಾವು, 15 ಮಂದಿಗೆ ಗಾಯ…!

ಬಂಟ್ವಾಳ: ಆಳ್ವಾಸ್ ಪ್ರಗತಿ-2026 ಉದ್ಯೋಗ ಮೇಳಕ್ಕೆ ಬಂಟ್ವಾಳದಿಂದ ಉಚಿತ ಬಸ್…!

error: Content is protected !!