ಸಂಪ್ರದಾಯದಂತೆ ತೆನೆ ಹಬ್ಬ ಆಚರಣೆಯ ಹಿನ್ನೆಲೆಯಲ್ಲಿ ಕಾರಿಂಜ ದೇವಸ್ಥಾನದಿಂದ ಶ್ರೀ ದೇವರು ವಿವಿಧ ಕಟ್ಟೆಗಳಲ್ಲಿ ಪೂಜೆ ನಡೆದಿದೆ.
ಸುಮಾರು 9 ಕಿಮೀ ದೂರದ ಸರಪಾಡಿಯ ಹಲ್ಲಂಗಾರು ಕಟ್ಟೆಯಲ್ಲಿ ದೇವರ ದರ್ಶನ ಬಲಿ ಸಹಿತ ವಿಶೇಷ ಪೂಜೆ ನಡೆದು ಭತ್ತದ ತೆನೆಯನ್ನು ಕ್ಷೇತ್ರಕ್ಕೆ ಕೊಂಡೊಯ್ಯಲಾಗಿದೆ. ಮುಂಜಾನೆ ಸೂರ್ಯೋದಯಕ್ಕೆ ಮುನ್ನಾ ಕಾರಿಂಜದಿಂದ ವಾದ್ಯ ವೃಂದ ಸಹಿತವಾಗಿ ಅರ್ಚಕರು, ತಂತ್ರಿಗಳು, ಗ್ರಾಮಣಿಗಳು, ಮುಖ್ಯಸ್ಥರು ಕಾಲ್ನಡಿಗೆಯಲ್ಲಿ ಮೆರವಣಿಗೆಯ ಮೂಲಕ ಶೇಡಿಮೆ ಕಟ್ಟೆ, ದಂಡ್ಯೊಟ್ಟು ಕಟ್ಟೆ, ದೇವಶ್ಯ ಕಟ್ಟೆ, ಸೂಳ್ದುಕ್ಕು ಕಟ್ಟೆ, ಭಂಡಾರಿಕಟ್ಟೆ, ಸಮಗಾರನ ಕಟ್ಟೆ ಹಾಗೂ ಹಲ್ಲಂಗಾರು ಕಟ್ಟೆಯಲ್ಲಿ ಹೀಗೆ 7 ಕಟ್ಟೆಗಳಲ್ಲಿ ದೇವರಿಗೆ ಪೂಜೆ ಸಲ್ಲಿಸಲಾಗುತ್ತದೆ.
ಕಾಲ್ನಡಿಗೆಯಲ್ಲಿ ಮೆರವಣಿಗೆಯ ಮೂಲಕ ಕಟ್ಟೆಗಳಲ್ಲಿ ದೇವರಿಗೆ ಪೂಜೆ ಸಲ್ಲಿಸಲಾಯಿತು. ಬಳಿಕ ಕಂಬಳದ ಗದ್ದೆಯಿಂದ ತೆನೆಯನ್ನು ಕ್ಷೇತ್ರಕ್ಕೆ ತೆಗೆದುಕೊಂಡು ಹೋಗಿ, ನಂತರ ಭಕ್ತರು ಅದನ್ನು ಪಡೆದು ಮನೆ ತುಂಬಿಸಿಕೊಂಡು, ಮನೆಯಲ್ಲಿ ಸಂಪ್ರದಾಯವಾಗಿ ಹೊಸ ಅಕ್ಕಿ ಊಟವನ್ನು ಮಾಡಿದ್ದಾರೆ.
ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಅಂಬಲಪಾಡಿ ಸಮೀಪದ ಬಿಆರ್ ಮೆಡೋಸ್ ಅಪಾರ್ಟ್ಮೆಂಟ್ನಲ್ಲಿ ನಡೆದಿದೆ. ಮೃತರನ್ನು ಉಡುಪಿಯ…
ಅಂತರರಾಷ್ಟ್ರೀಯ ಮಟ್ಟದಲ್ಲಿ ಆರೋಗ್ಯ ಸೇವೆ ನೀಡುತ್ತಿರುವ ಡೋಲ್ಚೆ ಎಸ್ಥೆಟಿಕಾ ಸಂಸ್ಥೆಯ ಕರ್ನಾಟಕದ ಮೊದಲ ಶಾಖೆ ಆಗಸ್ಟ್ 13ರಂದು ಮಂಗಳೂರಿನಲ್ಲಿ ಕಾರ್ಯಾರಂಭಗೊಳ್ಳಲಿದೆ.…
ಕದ್ರಿ ಬಂಜನ್ ಆದಿ ಮೂಲಸ್ಥಾನ ಶ್ರೀ ನಾಗಬ್ರಹ್ಮ ಕ್ಷೇತ್ರದ ವತಿಯಿಂದ ನಿವೃತ್ತ ವೀರ ಯೋಧರು ಹಾಗೂ ವೀರನಾರಿಯರನ್ನು ಗೌರವಿಸುವ ವಿಶೇಷ…
ಡಿಸಿ ಮನ್ನಾ ಭೂಮಿಯನ್ನು ಅರ್ಹ ಬಡ ಹಾಗೂ ಶೋಷಿತ ಕುಟುಂಬಗಳಿಗೆ ಹಂಚಿಕೆ ಮಾಡುವಂತೆ ಆಗ್ರಹಿಸಿರುವ ಕರ್ನಾಟಕ ದಲಿತ ಸಂಘರ್ಷ ಸಮಿತಿ,…
ಕಸಬಾ ಗ್ರಾಮದ ಕುರುಂಬಳ ನಿವಾಸಿ ಹಮೀದ್ ಅವರ ಮನೆಯಲ್ಲಿ ಭಾನುವಾರ ಬೆಳಗ್ಗೆ ಗ್ಯಾಸ್ ಸಿಲಿಂಡರ್ ಏಕಾಏಕಿ ಸ್ಫೋಟಗೊಂಡು ಮನೆ ಸಂಪೂರ್ಣ…
ತೊಕ್ಕೊಟ್ಟು ವಿನಮ್ರ ಬಾರ್ ಬಳಿ ತಲವಾರು ಬೀಸಿ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದ ಆರೋಪದ ಮೇಲೆ ರೌಡಿಶೀಟರ್ವೊಬ್ಬನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.…