ಸಂಪ್ರದಾಯದಂತೆ ತೆನೆ ಹಬ್ಬ ಆಚರಣೆಯ ಹಿನ್ನೆಲೆಯಲ್ಲಿ ಕಾರಿಂಜ ದೇವಸ್ಥಾನದಿಂದ ಶ್ರೀ ದೇವರು ವಿವಿಧ ಕಟ್ಟೆಗಳಲ್ಲಿ ಪೂಜೆ ನಡೆದಿದೆ.
ಸುಮಾರು 9 ಕಿಮೀ ದೂರದ ಸರಪಾಡಿಯ ಹಲ್ಲಂಗಾರು ಕಟ್ಟೆಯಲ್ಲಿ ದೇವರ ದರ್ಶನ ಬಲಿ ಸಹಿತ ವಿಶೇಷ ಪೂಜೆ ನಡೆದು ಭತ್ತದ ತೆನೆಯನ್ನು ಕ್ಷೇತ್ರಕ್ಕೆ ಕೊಂಡೊಯ್ಯಲಾಗಿದೆ. ಮುಂಜಾನೆ ಸೂರ್ಯೋದಯಕ್ಕೆ ಮುನ್ನಾ ಕಾರಿಂಜದಿಂದ ವಾದ್ಯ ವೃಂದ ಸಹಿತವಾಗಿ ಅರ್ಚಕರು, ತಂತ್ರಿಗಳು, ಗ್ರಾಮಣಿಗಳು, ಮುಖ್ಯಸ್ಥರು ಕಾಲ್ನಡಿಗೆಯಲ್ಲಿ ಮೆರವಣಿಗೆಯ ಮೂಲಕ ಶೇಡಿಮೆ ಕಟ್ಟೆ, ದಂಡ್ಯೊಟ್ಟು ಕಟ್ಟೆ, ದೇವಶ್ಯ ಕಟ್ಟೆ, ಸೂಳ್ದುಕ್ಕು ಕಟ್ಟೆ, ಭಂಡಾರಿಕಟ್ಟೆ, ಸಮಗಾರನ ಕಟ್ಟೆ ಹಾಗೂ ಹಲ್ಲಂಗಾರು ಕಟ್ಟೆಯಲ್ಲಿ ಹೀಗೆ 7 ಕಟ್ಟೆಗಳಲ್ಲಿ ದೇವರಿಗೆ ಪೂಜೆ ಸಲ್ಲಿಸಲಾಗುತ್ತದೆ.
ಕಾಲ್ನಡಿಗೆಯಲ್ಲಿ ಮೆರವಣಿಗೆಯ ಮೂಲಕ ಕಟ್ಟೆಗಳಲ್ಲಿ ದೇವರಿಗೆ ಪೂಜೆ ಸಲ್ಲಿಸಲಾಯಿತು. ಬಳಿಕ ಕಂಬಳದ ಗದ್ದೆಯಿಂದ ತೆನೆಯನ್ನು ಕ್ಷೇತ್ರಕ್ಕೆ ತೆಗೆದುಕೊಂಡು ಹೋಗಿ, ನಂತರ ಭಕ್ತರು ಅದನ್ನು ಪಡೆದು ಮನೆ ತುಂಬಿಸಿಕೊಂಡು, ಮನೆಯಲ್ಲಿ ಸಂಪ್ರದಾಯವಾಗಿ ಹೊಸ ಅಕ್ಕಿ ಊಟವನ್ನು ಮಾಡಿದ್ದಾರೆ.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…