ಜೂನ್ 2024ರಲ್ಲಿ ನಡೆಯುವ ವಿಧಾನಪರಿಷತ್ ನೈರುತ್ಯ ಕ್ಷೇತ್ರಕ್ಕೆ ಮತದಾರರ ನೋಂದಣಿ ಅಭಿಯಾನಕ್ಕೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮತ್ತು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ . ಮಧುಬಂಗಾರಪ್ಪನವರು ಚಾಲನೆ ನೀಡಿದರು.
ಬಳಿಕ ಮಾತಾನಾಡಿದ ಇವರು, ಮತದಾನಕ್ಕೆ ಅರ್ಹರಿರುವ ಎಲ್ಲಾ ಶಿಕ್ಷಕರು, ಉಪನ್ಯಾಸಕರು, ಅಧ್ಯಾಪಕರುಗಳು ತಮ್ಮ ಹೆಸರನ್ನು ಮತದಾರರ ಪಟ್ಟಿಗೆ ನೋಂದಣಿ ಮಾಡುವ ಮೂಲಕ ಶೈಕ್ಷಣಿಕ ಬೆಳವಣಿಗೆಗೆ ಸಹಕಾರಿಯಾಗುವ ಉತ್ತಮ ಪ್ರತಿನಿಧಿಯನ್ನು ಆಯ್ಕೆ ಮಾಡುವ ಮೂಲಕ ತಮ್ಮ ಹಕ್ಕನ್ನು ಚಲಾಯಿಸಬೇಕೆಂದು ಶಿಕ್ಷಕರಿಗೆ ಕರೆ ನೀಡಿದರು.
ಈ ಕಾರ್ಯಕ್ರಮದಲ್ಲಿ ಮಾಜಿ ಶಿಕ್ಷಣ ಸಚಿವರಾದ ಕಿಮ್ಮನೆ ರತ್ನಾಕರ್, ರಾಜ್ಯ ಕೆಪಿಸಿಸಿ ಸಹಕಾರ ವಿಭಾಗದ ರಾಜ್ಯ ಸಂಚಾಲಕರಾದ ಡಾ.ಆರ್. ಎಂ.ಮಂಜುನಾಥಗೌಡ, ನೈರುತ್ಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿ ಶಂಕರಘಟ್ಟ ರಮೇಶ್ ಶೆಟ್ಟಿ, ರಾಜ್ಯ ಹಿಂದುಳಿದ ವರ್ಗಗಳ ಕೋಆರ್ಡಿನೇಟರ್ ಜಿ.ಡಿ.ಮಂಜುನಾಥ್, ಆರ್ಯ ಈಡಿಗರ ಸಂಘದ ಅಧ್ಯಕ್ಷರ ರಾಮಚಂದ್ರ ಮಟ್ಟಿನಮನೆ, ಮುಖಂಡರುಗಳಾದ ಡಾ.ಸುಂದರೇಶ್, ರಾಘವೇಂದ್ರ ಶೆಟ್ಟಿ, ರತ್ನಾಕರ್ ಶೆಟ್ಟಿ, ಸುಕೇಶ್, ಮುಡುಬ ಮಂಜುನಾಥ್, ಅಸಾದಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…
ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…
ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು…
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…