ಜನ ಮನದ ನಾಡಿ ಮಿಡಿತ

Advertisement

ಬಂಟರ ಮಾತೃ ಸಂಘದ ಗಣೇಶೋತ್ಸವ ಕಾರ್ಯಕ್ರಮದ ಉದ್ಘಾಟನೆ; ಸಾರ್ವಜನಿಕರಿಗೆ ತೆನೆ ವಿತರಣೆ

ಮಂಗಳೂರು: ಬಂಟರ ಯಾನೆ ನಾಡವರ ಮಾತೃ ಸಂಘ, ಶ್ರೀ ಸಿದ್ಧಿವಿನಾಯಕ ಪ್ರತಿಷ್ಠಾನ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ದ.ಕ., ಉಡುಪಿ ಹಾಗೂ ಕಾಸರಗೋಡಿನ ವಿವಿಧ ಬಂಟರ ಸಂಘಗಳ ಸಹಭಾಗಿತ್ವದಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಅಂಗವಾಗಿ ಬಂಟ್ಸ್ ಹಾಸ್ಟೇಲ್ ನ ಓಂಕಾರ‌ ನಗರದಲ್ಲಿ ನಡೆದ ಗಣೇಶೋತ್ಸವ ಕಾರ್ಯಕ್ರಮದ ಉದ್ಘಾಟನೆ ನಡೆಯಿತು.


ರಾಮಕೃಷ್ಣ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಕೆ ಜೈರಾಜ್ ಬಿ ರೈ ಮತ್ತು ಸೌಮ್ಯ ಜೆ ರೈ ಕಾರ್ಯಕ್ರಮ ಉದ್ಘಾಟಿಸಿದರು. ಸಮಾಜವನ್ನು ಒಂದುಗೂಡಿಸಲು ಇಂತಹ ಸಾರ್ವಜನಿಕ ಗಣೇಶೋತ್ಸವ ಪ್ರೇರಣೆಯಾಗುತ್ತದೆ ಎಂದರು. ಅಜಿತ್ ಕುಮಾರ್ ರೈ ಮಾಲಾಡಿ ಹಲವಾರು ಯೋಜನೆಗಳನ್ನು ಕೈಗೆತ್ತಿಕೊಂಡಿದ್ದಾರೆ. ಅದೆಲ್ಲವೂ ಕಾರ್ಯಗತಗೊಳ್ಳಲಿ ಎಂದವರು ತಿಳಿಸಿದರು.‌


ಶ್ರೀ ವೈಷ್ಣವಿ ದುರ್ಗಾ ದೇವಸ್ಥಾನ ದಶರಥ ನಗರ ಮಣಿಪಾಲದ ಆಡಳಿತ ಮೊಕ್ತೇಸರ ಬಿ ಜಯರಾಜ್ ಹೆಗ್ಡೆ, ಅಮ್ಮಣ್ಣಿ ಜೆ ಹೆಗ್ಡೆ ತೆನೆ ವಿತರಿಸಿದರು. ಈಎಸ್ ಎಂ ಸಬ್ ಮೇಜರ್ ಶಶಿಧರ ಆಳ್ವ ಧ್ವಜಾರೋಹಣಗೈದರು. ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ, ಸಿದ್ದಿ ವಿನಾಯಕ ಪ್ರತಿಷ್ಠಾನದ ಟ್ರಸ್ಟಿ ಅಜಿತ್ ಕುಮಾರ್ ರೈ ಮಾಲಾಡಿ ಅಧ್ಯಕ್ಷತೆ ವಹಿಸಿದ್ದರು. ಗಣೇಶೋತ್ಸವ ಆಚರಣೆಯ ಸಂದರ್ಭದಲ್ಲಿ ಒಂದು ಕ್ರೀಯಾಶೀಲ ತಂಡವು ಕೆಲಸ ಮಾಡುತ್ತಿದೆ. ಇದರಿಂದ ಸಮಾರಂಭವು ಯಶಸ್ವಿಯಾಗುತ್ತಿದೆ ಎಂದು ಅಜಿತ್ ಕುಮಾರ್ ರೈ ಮಾಲಾಡಿ ತಿಳಿಸಿದರು.


ಬಂಟರ ಯಾನೆ ನಾಡವರ ಮಾತೃ ಸಂಘದ ಪ್ರಧಾನ ಕಾರ್ಯದರ್ಶಿ ಕೆ ಎಂ ಶೆಟ್ಟಿ, ಕೋಶಾಧಿಕಾರಿ ರಾಮಮೋಹನ್ ರೈ, ಶ್ರೀ ಸಿದ್ದಿ ವಿನಾಯಕ ಪ್ರತಿಷ್ಠಾನದ ಟ್ರಸ್ಟಿಗಳಾದ ಕೃಷ್ಣ ಪ್ರಸಾದ್ ರೈ, ನಿಟ್ಟೆಗುತ್ತು ರವಿರಾಜ ಶೆಟ್ಟಿ, ಜಿಲ್ಲಾ ಸಂಚಾಲಕ ಬಿ ನಾಗರಾಜ ಶೆಟ್ಟಿ, ಬಿ ಶೇಖರ ಶೆಟ್ಟಿ, ಸುಧಾಕರ ಎಸ್ ಪೂಂಜ, , ವಸಂತ ಶೆಟ್ಟಿ, ಶರ್ಮಿಳಾ ಎಸ್ ಆಳ್ವ, ಭಾರತಿ ಜಿ ಶೆಟ್ಟಿ, ಅರುಣಾ ಎಸ್ ಶೆಟ್ಟಿ, ಆಶಾ ಜ್ಯೋತಿ ರೈ ಮೊದಲಾದವರು ಉಪಸ್ಥಿತರಿದ್ದರು.
ಬಳಿಕ ಸಾರ್ವಜನಿಕರಿಗೆ ತೆನೆ ವಿತರಿಸಲಾಯಿತು. ಮಂಗಳೂರು ತಾಲೂಕು ಸಮಿತಿ ಸಂಚಾಲಕ ವಸಂತ ಶೆಟ್ಟಿ ಸ್ವಾಗತಿಸಿದರು. ಉಮೇಶ್ ರೈ ಪದವು ಮೇಗಿನಮನೆ ವಂದಿಸಿದರು. ಸತೀಶ್ ಶೆಟ್ಟಿ ಕೊಡಿಯಾಲ್ ಬೈಲ್, ಕವಿತಾ ಪಕ್ಕಳ ಕಾರ್ಯಕ್ರಮ ನಿರ್ವಹಿಸಿದರು.

Leave a Reply

Your email address will not be published. Required fields are marked *

ಉಡುಪಿ: ಅಪಾರ್ಟ್‌ಮೆಂಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆ

ಮಂಗಳೂರು: ಮಂಗಳೂರಿನಲ್ಲಿ ಆ.13ರಂದು ಡೋಲ್ಚೆ ಎಸ್ಥೆಟಿಕಾ ಸಂಸ್ಥೆಯ ಮೊದಲ ಶಾಖೆ ಆರಂಭ

ಮಂಗಳೂರು: ಕದ್ರಿ ಬಂಜನ್‌ ಕ್ಷೇತ್ರದಲ್ಲಿ ನಿವೃತ್ತ ವೀರ ಯೋಧರು, ವೀರನಾರಿಯರಿಗೆ ಸನ್ಮಾನ…!

ಮಂಗಳೂರು: ಡಿಸಿ ಮನ್ನಾ ಭೂಮಿ ಹಂಚಿಕೆಗೆ ಆಗ್ರಹ: ಒಂದು ತಿಂಗಳಲ್ಲಿ ಸಮಸ್ಯೆ ಬಗೆಹರಿಸದಿದ್ದರೆ ಉಗ್ರ ಹೋರಾಟ…!

ವಿಟ್ಲ: ಗ್ಯಾಸ್ ಸಿಲಿಂಡರ್ ಸ್ಫೋಟ, ಮನೆ ಸಂಪೂರ್ಣ ಜಖಂ; ಲಕ್ಷಾಂತರ ರೂ. ನಷ್ಟ

ತೊಕ್ಕೊಟ್ಟು: ಬಾರ್ ಬಳಿ ತಲವಾರು ಬೀಸಿ ಆತಂಕ ಸೃಷ್ಟಿಸಿದ ರೌಡಿಶೀಟರ್ ಬಂಧನ…!

ಟೆಹ್ರಾನ್: ಖಮೇನಿ ಭೇಟಿಯಲ್ಲೇ ಹೊಸ ರಹಸ್ಯ! ‘ನೀವೇ ಖಮೇನಿಯೇ?’ ಎಂದು ಪ್ರಶ್ನಿಸಿದ ಇರಾನ್ ಅಧ್ಯಕ್ಷ…!

ಬ್ಯಾಂಕಾಕ್: ಥೈಲ್ಯಾಂಡ್ ಶಾಲೆಯಲ್ಲಿ ಗುಂಡಿನ ದಾಳಿ: ಶಿಕ್ಷಕ ಸಾವು, 15 ಮಂದಿಗೆ ಗಾಯ…!

ಬಂಟ್ವಾಳ: ಆಳ್ವಾಸ್ ಪ್ರಗತಿ-2026 ಉದ್ಯೋಗ ಮೇಳಕ್ಕೆ ಬಂಟ್ವಾಳದಿಂದ ಉಚಿತ ಬಸ್…!

error: Content is protected !!