ಮಂಗಳೂರು: ಬಂಟರ ಯಾನೆ ನಾಡವರ ಮಾತೃ ಸಂಘ, ಶ್ರೀ ಸಿದ್ಧಿವಿನಾಯಕ ಪ್ರತಿಷ್ಠಾನ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ದ.ಕ., ಉಡುಪಿ ಹಾಗೂ ಕಾಸರಗೋಡಿನ ವಿವಿಧ ಬಂಟರ ಸಂಘಗಳ ಸಹಭಾಗಿತ್ವದಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಅಂಗವಾಗಿ ಬಂಟ್ಸ್ ಹಾಸ್ಟೇಲ್ ನ ಓಂಕಾರ ನಗರದಲ್ಲಿ ನಡೆದ ಗಣೇಶೋತ್ಸವ ಕಾರ್ಯಕ್ರಮದ ಉದ್ಘಾಟನೆ ನಡೆಯಿತು.
ರಾಮಕೃಷ್ಣ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಕೆ ಜೈರಾಜ್ ಬಿ ರೈ ಮತ್ತು ಸೌಮ್ಯ ಜೆ ರೈ ಕಾರ್ಯಕ್ರಮ ಉದ್ಘಾಟಿಸಿದರು. ಸಮಾಜವನ್ನು ಒಂದುಗೂಡಿಸಲು ಇಂತಹ ಸಾರ್ವಜನಿಕ ಗಣೇಶೋತ್ಸವ ಪ್ರೇರಣೆಯಾಗುತ್ತದೆ ಎಂದರು. ಅಜಿತ್ ಕುಮಾರ್ ರೈ ಮಾಲಾಡಿ ಹಲವಾರು ಯೋಜನೆಗಳನ್ನು ಕೈಗೆತ್ತಿಕೊಂಡಿದ್ದಾರೆ. ಅದೆಲ್ಲವೂ ಕಾರ್ಯಗತಗೊಳ್ಳಲಿ ಎಂದವರು ತಿಳಿಸಿದರು.
ಶ್ರೀ ವೈಷ್ಣವಿ ದುರ್ಗಾ ದೇವಸ್ಥಾನ ದಶರಥ ನಗರ ಮಣಿಪಾಲದ ಆಡಳಿತ ಮೊಕ್ತೇಸರ ಬಿ ಜಯರಾಜ್ ಹೆಗ್ಡೆ, ಅಮ್ಮಣ್ಣಿ ಜೆ ಹೆಗ್ಡೆ ತೆನೆ ವಿತರಿಸಿದರು. ಈಎಸ್ ಎಂ ಸಬ್ ಮೇಜರ್ ಶಶಿಧರ ಆಳ್ವ ಧ್ವಜಾರೋಹಣಗೈದರು. ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ, ಸಿದ್ದಿ ವಿನಾಯಕ ಪ್ರತಿಷ್ಠಾನದ ಟ್ರಸ್ಟಿ ಅಜಿತ್ ಕುಮಾರ್ ರೈ ಮಾಲಾಡಿ ಅಧ್ಯಕ್ಷತೆ ವಹಿಸಿದ್ದರು. ಗಣೇಶೋತ್ಸವ ಆಚರಣೆಯ ಸಂದರ್ಭದಲ್ಲಿ ಒಂದು ಕ್ರೀಯಾಶೀಲ ತಂಡವು ಕೆಲಸ ಮಾಡುತ್ತಿದೆ. ಇದರಿಂದ ಸಮಾರಂಭವು ಯಶಸ್ವಿಯಾಗುತ್ತಿದೆ ಎಂದು ಅಜಿತ್ ಕುಮಾರ್ ರೈ ಮಾಲಾಡಿ ತಿಳಿಸಿದರು.
ಬಂಟರ ಯಾನೆ ನಾಡವರ ಮಾತೃ ಸಂಘದ ಪ್ರಧಾನ ಕಾರ್ಯದರ್ಶಿ ಕೆ ಎಂ ಶೆಟ್ಟಿ, ಕೋಶಾಧಿಕಾರಿ ರಾಮಮೋಹನ್ ರೈ, ಶ್ರೀ ಸಿದ್ದಿ ವಿನಾಯಕ ಪ್ರತಿಷ್ಠಾನದ ಟ್ರಸ್ಟಿಗಳಾದ ಕೃಷ್ಣ ಪ್ರಸಾದ್ ರೈ, ನಿಟ್ಟೆಗುತ್ತು ರವಿರಾಜ ಶೆಟ್ಟಿ, ಜಿಲ್ಲಾ ಸಂಚಾಲಕ ಬಿ ನಾಗರಾಜ ಶೆಟ್ಟಿ, ಬಿ ಶೇಖರ ಶೆಟ್ಟಿ, ಸುಧಾಕರ ಎಸ್ ಪೂಂಜ, , ವಸಂತ ಶೆಟ್ಟಿ, ಶರ್ಮಿಳಾ ಎಸ್ ಆಳ್ವ, ಭಾರತಿ ಜಿ ಶೆಟ್ಟಿ, ಅರುಣಾ ಎಸ್ ಶೆಟ್ಟಿ, ಆಶಾ ಜ್ಯೋತಿ ರೈ ಮೊದಲಾದವರು ಉಪಸ್ಥಿತರಿದ್ದರು.
ಬಳಿಕ ಸಾರ್ವಜನಿಕರಿಗೆ ತೆನೆ ವಿತರಿಸಲಾಯಿತು. ಮಂಗಳೂರು ತಾಲೂಕು ಸಮಿತಿ ಸಂಚಾಲಕ ವಸಂತ ಶೆಟ್ಟಿ ಸ್ವಾಗತಿಸಿದರು. ಉಮೇಶ್ ರೈ ಪದವು ಮೇಗಿನಮನೆ ವಂದಿಸಿದರು. ಸತೀಶ್ ಶೆಟ್ಟಿ ಕೊಡಿಯಾಲ್ ಬೈಲ್, ಕವಿತಾ ಪಕ್ಕಳ ಕಾರ್ಯಕ್ರಮ ನಿರ್ವಹಿಸಿದರು.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…