ಉಡುಪಿ: ಕಟಪಾಡಿ ಸಮೀಪದ ಮಣಿಪುರದಲ್ಲಿ ಪತ್ನಿಯೊಬ್ಬಳು ಪತಿಯ ಮೈಮೇಲೆ ಮೆಣಸಿನ ಹುಡಿ ಮಿಶ್ರಿತ ಕುದಿಯುವ ನೀರು ಎರಚಿದ ಪರಿಣಾಮ ಪತಿ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ.
ಮೊಹಮ್ಮದ್ ಅಶ್ರಫ್ (22) ಗಾಯಗೊಂಡ ವ್ಯಕ್ತಿ. ಮೊಹಮ್ಮದ್ ಅಶ್ರಫ್ ಗೆ ಅವರ ಪತ್ನಿ ಅಫ್ರೀನ್, ಅತ್ತೆ, ಮಾವ ಮತ್ತಿತರರು ಸೇರಿ ಈ ಕೃತ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಮೊಹಮ್ಮದ್ ಆಸೀಫ್ ಅವರ ಎಡ ಬದಿಯ ಮುಖ, ದೇಹ, ಎಡಗೈ, ಎಡ ಬದಿಯ ಎದೆ, ಬೆನ್ನು ಬಲಕೈ ಗೆ ಗುಳ್ಳೆ ಎದ್ದಿದ್ದು, ಇದೀಗ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮೊಹಮ್ಮದ್ ಆಸೀಫ್ ಕಾರ್ಕಳ ತಾಲೂಕಿನವರಾಗಿದ್ದು 11 ತಿಂಗಳ ಹಿಂದೆ ಉಡುಪಿ ತಾಲೂಕು ಮಣಿಪುರ ಗ್ರಾಮದ ಗುಜ್ಜಿ ಎಂಬಲ್ಲಿನ ನಿವಾಸಿ ಅಫ್ರೀನ್ ಅವರನ್ನು ಮದುವೆಯಾಗಿದ್ದರು. ಮದುವೆಯಾದ ಬಳಿಕ ಅಫ್ರೀನ್ ಳು ಒಂದೂವರೆ ತಿಂಗಳು ಗಂಡನ ಮನೆಯಲ್ಲಿದ್ದು, ಬಳಿಕ ಅಲ್ಲಿ ಇರಲು ಇಷ್ಟವಿಲ್ಲವೆಂದು ಮಣಿಪುರದ ತನ್ನ ತವರು ಮನೆಗೆ ಬಂದಿದ್ದಳು. ಗಂಡ ಮೊಹಮ್ಮದ್ ಆಸೀಫ್ ಕೂಡಾ ತನ್ನ ಮನೆಯಲ್ಲಿಯೇ ಇರ ಬಹುದೆಂದು ತಿಳಿಸಿದ ಮೇರೆಗೆ ಅವರು ಸುಮಾರು 9 ತಿಂಗಳುಗಳಿಂದ ಹೆಂಡತಿಯ ಮನೆಯಲ್ಲಿಯೇ ವಾಸವಿದ್ದಾರೆ. ಅಫ್ರೀನ್ ಳಿಗೆ ಗಂಡ ಮೊಹಮ್ಮದ್ ಆಸೀಫ್ ಗೆ ಬೇರೆ ಹುಡುಗಿಯ ಜತೆ ಸಂಬಂಧ ಇದೆ ಎಂಬ ಅನುಮಾನವಿದ್ದು, ಈ ಬಗ್ಗೆ ಯಾವಾಗಲೂ ಗಂಡನ ಜತೆ ಜಗಳವಾಡುತ್ತಿದ್ದಳು.
ಸೆ. 17 ರಂದು ಸಂಜೆ 6:45 ಗಂಟೆಗೆ ಮೊಹಮ್ಮದ್ ಆಸೀಫ್ ಬಾತ್ ರೂಮ್ ನಲ್ಲಿ ಸ್ನಾನ ಮಾಡುತ್ತಿದ್ದ ಸಮಯ ಪತ್ನಿ ಅಫ್ರೀನ್ ಹೊರಗಿನಿಂದ ಬಾಗಿಲು ಬಡಿದಿದ್ದು, ಮೊಹಮ್ಮದ್ ಆಸೀಫ್ ಬಾಗಿಲನ್ನು ತೆರೆದಾಗ ಆಕೆ ತನ್ನ ಕೈಯಲ್ಲಿದ್ದ ಸ್ಟೀಲಿನ ಪಾತ್ರೆಯಲ್ಲಿದ್ದ ಮೆಣಸಿನ ಹುಡಿ ಮಿಶ್ರಿತ ಬಿಸಿ ನೀರನ್ನು ಗಂಡನ ಮೈ ಮೇಲೆ ಎರಚಿದ್ದಾಳೆ. ಮೊಹಮ್ಮದ್ ಆಸೀಫ್ ಕೂಗಾಡುತ್ತಾ ಮನೆಯಿಂದ ಹೊರಗಡೆ ಓಡಿದ್ದು, ಆಗ ಮಾವ ಹುಸೈನ್ ಅವರು ಮೊಹಮ್ಮದ್ ಆಸೀಫ್ ಅವರನ್ನು ಸಮಧಾನಪಡಿಸಿ ಮನೆಯೊಳಗೆ ಕರೆದುಕೊಂಡು ಹೋಗಿದ್ದಾರೆ.
ಮೈಮೇಲೆ ಬಿಸಿ ನೀರನ್ನು ಹಾಕಿದ ಪರಿಣಾಮ ಮೊಹಮ್ಮದ್ ಆಸೀಫ್ ಅವರ ದೇಹದಲ್ಲಿ ಗುಳ್ಳೆ ಎದ್ದಿದ್ದು, ಈ ಬಗ್ಗೆ ಆಸ್ಪತ್ರೆಗೆ ಹೋಗುತ್ತೇನೆಂದು ತಿಳಿಸಿದಾಗ ಅಫ್ರೀನ್, ಅತ್ತೆ ಮೈಮುನಾ, ಮಾವ ಹುಸೈನ್ ಹಾಗೂ ನೆರೆಮನೆಯ ಲತೀಫ್ ಆವರು ಸೇರಿ ಹೊರಗಡೆ ಹೋಗಲು ಬಿಡದೆ ಅವರನ್ನು ಮನೆಯ ರೂಮಿನಲ್ಲಿಯೇ ಕೂಡಿ ಹಾಕಿರುತ್ತಾರೆ. ಅಲ್ಲದೆ ಅಫ್ರೀನ್ಳು ಮೊಹಮ್ಮದ್ ಆಸೀಫ್ ರವರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾಳೆ.
ಕಾಪು ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…