ಉಡುಪಿ: ಕಟಪಾಡಿ ಸಮೀಪದ ಮಣಿಪುರದಲ್ಲಿ ಪತ್ನಿಯೊಬ್ಬಳು ಪತಿಯ ಮೈಮೇಲೆ ಮೆಣಸಿನ ಹುಡಿ ಮಿಶ್ರಿತ ಕುದಿಯುವ ನೀರು ಎರಚಿದ ಪರಿಣಾಮ ಪತಿ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ.
ಮೊಹಮ್ಮದ್ ಅಶ್ರಫ್ (22) ಗಾಯಗೊಂಡ ವ್ಯಕ್ತಿ. ಮೊಹಮ್ಮದ್ ಅಶ್ರಫ್ ಗೆ ಅವರ ಪತ್ನಿ ಅಫ್ರೀನ್, ಅತ್ತೆ, ಮಾವ ಮತ್ತಿತರರು ಸೇರಿ ಈ ಕೃತ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಮೊಹಮ್ಮದ್ ಆಸೀಫ್ ಅವರ ಎಡ ಬದಿಯ ಮುಖ, ದೇಹ, ಎಡಗೈ, ಎಡ ಬದಿಯ ಎದೆ, ಬೆನ್ನು ಬಲಕೈ ಗೆ ಗುಳ್ಳೆ ಎದ್ದಿದ್ದು, ಇದೀಗ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮೊಹಮ್ಮದ್ ಆಸೀಫ್ ಕಾರ್ಕಳ ತಾಲೂಕಿನವರಾಗಿದ್ದು 11 ತಿಂಗಳ ಹಿಂದೆ ಉಡುಪಿ ತಾಲೂಕು ಮಣಿಪುರ ಗ್ರಾಮದ ಗುಜ್ಜಿ ಎಂಬಲ್ಲಿನ ನಿವಾಸಿ ಅಫ್ರೀನ್ ಅವರನ್ನು ಮದುವೆಯಾಗಿದ್ದರು. ಮದುವೆಯಾದ ಬಳಿಕ ಅಫ್ರೀನ್ ಳು ಒಂದೂವರೆ ತಿಂಗಳು ಗಂಡನ ಮನೆಯಲ್ಲಿದ್ದು, ಬಳಿಕ ಅಲ್ಲಿ ಇರಲು ಇಷ್ಟವಿಲ್ಲವೆಂದು ಮಣಿಪುರದ ತನ್ನ ತವರು ಮನೆಗೆ ಬಂದಿದ್ದಳು. ಗಂಡ ಮೊಹಮ್ಮದ್ ಆಸೀಫ್ ಕೂಡಾ ತನ್ನ ಮನೆಯಲ್ಲಿಯೇ ಇರ ಬಹುದೆಂದು ತಿಳಿಸಿದ ಮೇರೆಗೆ ಅವರು ಸುಮಾರು 9 ತಿಂಗಳುಗಳಿಂದ ಹೆಂಡತಿಯ ಮನೆಯಲ್ಲಿಯೇ ವಾಸವಿದ್ದಾರೆ. ಅಫ್ರೀನ್ ಳಿಗೆ ಗಂಡ ಮೊಹಮ್ಮದ್ ಆಸೀಫ್ ಗೆ ಬೇರೆ ಹುಡುಗಿಯ ಜತೆ ಸಂಬಂಧ ಇದೆ ಎಂಬ ಅನುಮಾನವಿದ್ದು, ಈ ಬಗ್ಗೆ ಯಾವಾಗಲೂ ಗಂಡನ ಜತೆ ಜಗಳವಾಡುತ್ತಿದ್ದಳು.
ಸೆ. 17 ರಂದು ಸಂಜೆ 6:45 ಗಂಟೆಗೆ ಮೊಹಮ್ಮದ್ ಆಸೀಫ್ ಬಾತ್ ರೂಮ್ ನಲ್ಲಿ ಸ್ನಾನ ಮಾಡುತ್ತಿದ್ದ ಸಮಯ ಪತ್ನಿ ಅಫ್ರೀನ್ ಹೊರಗಿನಿಂದ ಬಾಗಿಲು ಬಡಿದಿದ್ದು, ಮೊಹಮ್ಮದ್ ಆಸೀಫ್ ಬಾಗಿಲನ್ನು ತೆರೆದಾಗ ಆಕೆ ತನ್ನ ಕೈಯಲ್ಲಿದ್ದ ಸ್ಟೀಲಿನ ಪಾತ್ರೆಯಲ್ಲಿದ್ದ ಮೆಣಸಿನ ಹುಡಿ ಮಿಶ್ರಿತ ಬಿಸಿ ನೀರನ್ನು ಗಂಡನ ಮೈ ಮೇಲೆ ಎರಚಿದ್ದಾಳೆ. ಮೊಹಮ್ಮದ್ ಆಸೀಫ್ ಕೂಗಾಡುತ್ತಾ ಮನೆಯಿಂದ ಹೊರಗಡೆ ಓಡಿದ್ದು, ಆಗ ಮಾವ ಹುಸೈನ್ ಅವರು ಮೊಹಮ್ಮದ್ ಆಸೀಫ್ ಅವರನ್ನು ಸಮಧಾನಪಡಿಸಿ ಮನೆಯೊಳಗೆ ಕರೆದುಕೊಂಡು ಹೋಗಿದ್ದಾರೆ.
ಮೈಮೇಲೆ ಬಿಸಿ ನೀರನ್ನು ಹಾಕಿದ ಪರಿಣಾಮ ಮೊಹಮ್ಮದ್ ಆಸೀಫ್ ಅವರ ದೇಹದಲ್ಲಿ ಗುಳ್ಳೆ ಎದ್ದಿದ್ದು, ಈ ಬಗ್ಗೆ ಆಸ್ಪತ್ರೆಗೆ ಹೋಗುತ್ತೇನೆಂದು ತಿಳಿಸಿದಾಗ ಅಫ್ರೀನ್, ಅತ್ತೆ ಮೈಮುನಾ, ಮಾವ ಹುಸೈನ್ ಹಾಗೂ ನೆರೆಮನೆಯ ಲತೀಫ್ ಆವರು ಸೇರಿ ಹೊರಗಡೆ ಹೋಗಲು ಬಿಡದೆ ಅವರನ್ನು ಮನೆಯ ರೂಮಿನಲ್ಲಿಯೇ ಕೂಡಿ ಹಾಕಿರುತ್ತಾರೆ. ಅಲ್ಲದೆ ಅಫ್ರೀನ್ಳು ಮೊಹಮ್ಮದ್ ಆಸೀಫ್ ರವರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾಳೆ.
ಕಾಪು ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.
ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಅಂಬಲಪಾಡಿ ಸಮೀಪದ ಬಿಆರ್ ಮೆಡೋಸ್ ಅಪಾರ್ಟ್ಮೆಂಟ್ನಲ್ಲಿ ನಡೆದಿದೆ. ಮೃತರನ್ನು ಉಡುಪಿಯ…
ಅಂತರರಾಷ್ಟ್ರೀಯ ಮಟ್ಟದಲ್ಲಿ ಆರೋಗ್ಯ ಸೇವೆ ನೀಡುತ್ತಿರುವ ಡೋಲ್ಚೆ ಎಸ್ಥೆಟಿಕಾ ಸಂಸ್ಥೆಯ ಕರ್ನಾಟಕದ ಮೊದಲ ಶಾಖೆ ಆಗಸ್ಟ್ 13ರಂದು ಮಂಗಳೂರಿನಲ್ಲಿ ಕಾರ್ಯಾರಂಭಗೊಳ್ಳಲಿದೆ.…
ಕದ್ರಿ ಬಂಜನ್ ಆದಿ ಮೂಲಸ್ಥಾನ ಶ್ರೀ ನಾಗಬ್ರಹ್ಮ ಕ್ಷೇತ್ರದ ವತಿಯಿಂದ ನಿವೃತ್ತ ವೀರ ಯೋಧರು ಹಾಗೂ ವೀರನಾರಿಯರನ್ನು ಗೌರವಿಸುವ ವಿಶೇಷ…
ಡಿಸಿ ಮನ್ನಾ ಭೂಮಿಯನ್ನು ಅರ್ಹ ಬಡ ಹಾಗೂ ಶೋಷಿತ ಕುಟುಂಬಗಳಿಗೆ ಹಂಚಿಕೆ ಮಾಡುವಂತೆ ಆಗ್ರಹಿಸಿರುವ ಕರ್ನಾಟಕ ದಲಿತ ಸಂಘರ್ಷ ಸಮಿತಿ,…
ಕಸಬಾ ಗ್ರಾಮದ ಕುರುಂಬಳ ನಿವಾಸಿ ಹಮೀದ್ ಅವರ ಮನೆಯಲ್ಲಿ ಭಾನುವಾರ ಬೆಳಗ್ಗೆ ಗ್ಯಾಸ್ ಸಿಲಿಂಡರ್ ಏಕಾಏಕಿ ಸ್ಫೋಟಗೊಂಡು ಮನೆ ಸಂಪೂರ್ಣ…
ತೊಕ್ಕೊಟ್ಟು ವಿನಮ್ರ ಬಾರ್ ಬಳಿ ತಲವಾರು ಬೀಸಿ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದ ಆರೋಪದ ಮೇಲೆ ರೌಡಿಶೀಟರ್ವೊಬ್ಬನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.…