ಬಂಟ್ವಾಳ: ಪಾಣೆಮಂಗಳೂರು ಸೇತುವೆಯಲ್ಲಿ ಕಾರು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸುಮಾರು ಒಂದು ತಾಸಿಗಿಂತಲೂ ಅಧಿಕವಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರಕ್ಕೆ ತೊಂದರೆಯಾದ ಘಟನೆ ನಡೆದಿದೆ.
ಪಾಣೆಮಂಗಳೂರು ಸೇತುವೆಯಲ್ಲಿ ಎರಡು ಕಾರುಗಳು ಡಿಕ್ಕಿಯಾಗಿದ್ದು, ಇದರ ಹಿಂಬದಿಯಿಂದ ಬಂದ ಮತ್ತೆ ಎರಡು ವಾಹನಗಳು ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಎರಡು ಕಾರುಗಳು ಜಖಂಗೊಂಡಿದೆ.ಆದರೆ ಅದೃಷ್ಟವಶಾತ್ ಕಾರಿನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ಗಾಯವಾಗದೆ ಪಾರಾಗಿದ್ದಾರೆ.
ಇದರ ಜೊತೆಗೆ ಸೇತುವೆ ಸಮೀಪ ನೆಹರು ನಗರ ಎಂಬಲ್ಲಿ ಲಾರಿಯೊಂದರ ಟಯರ್ ಕೆಟ್ಟು ಹೋಗಿ ನಿಂತಿತ್ತು. ಹೀಗಾಗಿ ತಾಸುಗಟ್ಟಲೆ ವಾಹನಗಳು ಸಾಲಾಗಿ ನಿಂತಿದ್ದವು. ಸೇತುವೆಯಲ್ಲಿ ಅಪಘಾತ ಸಂಭವಿಸಿದ ಪರಿಣಾಮ ವಾಹನಗಳ ಸಂಚಾರಕ್ಕೆ ಅಡ್ಡಿಯಾಯಿತು.
ಡಿಕ್ಕಿಯಾಗಿ ಸೇತುವೆ ಮೇಲಿದ್ದ ವಾಹನಗಳನ್ನು ಕ್ಲಿಯರ್ ಮಾಡಲು ಟ್ರಾಫಿಕ್ ಪೋಲೀಸರು ಹರಸಹಾಸ ಪಟ್ಟರು. ಅಪಘಾತ ನಡೆದು ಕೆಲವೇ ಹೊತ್ತಿನಲ್ಲಿ ವಾಹನಗಳ ಸಾಲು ಸುಮಾರು ಉದ್ದಕ್ಕೆ ತಲುಪಿತ್ತು. ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾದ ಹಿನ್ನೆಲೆಯಲ್ಲಿ ವಾಹನ ಸವಾರರು ಪಾಣೆಮಂಗಳೂರು ಪೇಟೆ ಮೂಲಕ ಹಳೆ ಸೇತುವೆ ಮೂಲಕ ಸಂಚಾರಕ್ಕೆ ಪ್ರಯತ್ನ ಮಾಡಿದರಾದರೂ ಅಲ್ಲಿಯೂ ಟ್ರಾಫಿಕ್ ಸಮಸ್ಯೆ ಉಂಟಾಯಿತು. ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ವಾಹನಗಳು ಹೋಗಿ ಸಾಲು ಸಾಲಾಗಿ ನಿಂತಿರುವ ಪೋಟೋ ವೈರಲ್ ಆಗಿದೆ.
ರಾತ್ರಿ ಹೊತ್ತು ವಾಹನಗಳ ಲೈಟ್ ಮತ್ತು ನೇತ್ರಾವತಿ ನದಿಯ ನೀರು ಕಂಗೊಳಿಸುವ ಚಿತ್ರವನ್ನು ಪಾಣೆಮಂಗಳೂರು ಮಂಗಳೂರು ಹೊಸ ಸೇತುವೆಯಿಂದ ಕ್ಲಿಕ್ ಮಾಡಿದ್ದಾರೆ. ಟ್ರಾಫಿಕ್ ಎಸ್.ಐ.ಸುತೇಶ್, ಎ.ಎಸ್.ಐ.ಸುರೇಶ್ ಹಾಗೂ ಟ್ರಾಫಿಕ್ ಪೋಲೀಸ್ ಠಾಣೆಯ ಸಿಬ್ಬಂದಿಗಳು ಸ್ಥಳದಲ್ಲಿದ್ದು ಸಮಸ್ಯೆ ಪರಿಹಾರಕ್ಕೆ ಪ್ರಯತ್ನ ಮಾಡಿದರು.
ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಅಂಬಲಪಾಡಿ ಸಮೀಪದ ಬಿಆರ್ ಮೆಡೋಸ್ ಅಪಾರ್ಟ್ಮೆಂಟ್ನಲ್ಲಿ ನಡೆದಿದೆ. ಮೃತರನ್ನು ಉಡುಪಿಯ…
ಅಂತರರಾಷ್ಟ್ರೀಯ ಮಟ್ಟದಲ್ಲಿ ಆರೋಗ್ಯ ಸೇವೆ ನೀಡುತ್ತಿರುವ ಡೋಲ್ಚೆ ಎಸ್ಥೆಟಿಕಾ ಸಂಸ್ಥೆಯ ಕರ್ನಾಟಕದ ಮೊದಲ ಶಾಖೆ ಆಗಸ್ಟ್ 13ರಂದು ಮಂಗಳೂರಿನಲ್ಲಿ ಕಾರ್ಯಾರಂಭಗೊಳ್ಳಲಿದೆ.…
ಕದ್ರಿ ಬಂಜನ್ ಆದಿ ಮೂಲಸ್ಥಾನ ಶ್ರೀ ನಾಗಬ್ರಹ್ಮ ಕ್ಷೇತ್ರದ ವತಿಯಿಂದ ನಿವೃತ್ತ ವೀರ ಯೋಧರು ಹಾಗೂ ವೀರನಾರಿಯರನ್ನು ಗೌರವಿಸುವ ವಿಶೇಷ…
ಡಿಸಿ ಮನ್ನಾ ಭೂಮಿಯನ್ನು ಅರ್ಹ ಬಡ ಹಾಗೂ ಶೋಷಿತ ಕುಟುಂಬಗಳಿಗೆ ಹಂಚಿಕೆ ಮಾಡುವಂತೆ ಆಗ್ರಹಿಸಿರುವ ಕರ್ನಾಟಕ ದಲಿತ ಸಂಘರ್ಷ ಸಮಿತಿ,…
ಕಸಬಾ ಗ್ರಾಮದ ಕುರುಂಬಳ ನಿವಾಸಿ ಹಮೀದ್ ಅವರ ಮನೆಯಲ್ಲಿ ಭಾನುವಾರ ಬೆಳಗ್ಗೆ ಗ್ಯಾಸ್ ಸಿಲಿಂಡರ್ ಏಕಾಏಕಿ ಸ್ಫೋಟಗೊಂಡು ಮನೆ ಸಂಪೂರ್ಣ…
ತೊಕ್ಕೊಟ್ಟು ವಿನಮ್ರ ಬಾರ್ ಬಳಿ ತಲವಾರು ಬೀಸಿ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದ ಆರೋಪದ ಮೇಲೆ ರೌಡಿಶೀಟರ್ವೊಬ್ಬನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.…