ಬಂಟ್ವಾಳ: ಪಾಣೆಮಂಗಳೂರು ಸೇತುವೆಯಲ್ಲಿ ಕಾರು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸುಮಾರು ಒಂದು ತಾಸಿಗಿಂತಲೂ ಅಧಿಕವಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರಕ್ಕೆ ತೊಂದರೆಯಾದ ಘಟನೆ ನಡೆದಿದೆ.
ಪಾಣೆಮಂಗಳೂರು ಸೇತುವೆಯಲ್ಲಿ ಎರಡು ಕಾರುಗಳು ಡಿಕ್ಕಿಯಾಗಿದ್ದು, ಇದರ ಹಿಂಬದಿಯಿಂದ ಬಂದ ಮತ್ತೆ ಎರಡು ವಾಹನಗಳು ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಎರಡು ಕಾರುಗಳು ಜಖಂಗೊಂಡಿದೆ.ಆದರೆ ಅದೃಷ್ಟವಶಾತ್ ಕಾರಿನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ಗಾಯವಾಗದೆ ಪಾರಾಗಿದ್ದಾರೆ.
ಇದರ ಜೊತೆಗೆ ಸೇತುವೆ ಸಮೀಪ ನೆಹರು ನಗರ ಎಂಬಲ್ಲಿ ಲಾರಿಯೊಂದರ ಟಯರ್ ಕೆಟ್ಟು ಹೋಗಿ ನಿಂತಿತ್ತು. ಹೀಗಾಗಿ ತಾಸುಗಟ್ಟಲೆ ವಾಹನಗಳು ಸಾಲಾಗಿ ನಿಂತಿದ್ದವು. ಸೇತುವೆಯಲ್ಲಿ ಅಪಘಾತ ಸಂಭವಿಸಿದ ಪರಿಣಾಮ ವಾಹನಗಳ ಸಂಚಾರಕ್ಕೆ ಅಡ್ಡಿಯಾಯಿತು.
ಡಿಕ್ಕಿಯಾಗಿ ಸೇತುವೆ ಮೇಲಿದ್ದ ವಾಹನಗಳನ್ನು ಕ್ಲಿಯರ್ ಮಾಡಲು ಟ್ರಾಫಿಕ್ ಪೋಲೀಸರು ಹರಸಹಾಸ ಪಟ್ಟರು. ಅಪಘಾತ ನಡೆದು ಕೆಲವೇ ಹೊತ್ತಿನಲ್ಲಿ ವಾಹನಗಳ ಸಾಲು ಸುಮಾರು ಉದ್ದಕ್ಕೆ ತಲುಪಿತ್ತು. ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾದ ಹಿನ್ನೆಲೆಯಲ್ಲಿ ವಾಹನ ಸವಾರರು ಪಾಣೆಮಂಗಳೂರು ಪೇಟೆ ಮೂಲಕ ಹಳೆ ಸೇತುವೆ ಮೂಲಕ ಸಂಚಾರಕ್ಕೆ ಪ್ರಯತ್ನ ಮಾಡಿದರಾದರೂ ಅಲ್ಲಿಯೂ ಟ್ರಾಫಿಕ್ ಸಮಸ್ಯೆ ಉಂಟಾಯಿತು. ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ವಾಹನಗಳು ಹೋಗಿ ಸಾಲು ಸಾಲಾಗಿ ನಿಂತಿರುವ ಪೋಟೋ ವೈರಲ್ ಆಗಿದೆ.
ರಾತ್ರಿ ಹೊತ್ತು ವಾಹನಗಳ ಲೈಟ್ ಮತ್ತು ನೇತ್ರಾವತಿ ನದಿಯ ನೀರು ಕಂಗೊಳಿಸುವ ಚಿತ್ರವನ್ನು ಪಾಣೆಮಂಗಳೂರು ಮಂಗಳೂರು ಹೊಸ ಸೇತುವೆಯಿಂದ ಕ್ಲಿಕ್ ಮಾಡಿದ್ದಾರೆ. ಟ್ರಾಫಿಕ್ ಎಸ್.ಐ.ಸುತೇಶ್, ಎ.ಎಸ್.ಐ.ಸುರೇಶ್ ಹಾಗೂ ಟ್ರಾಫಿಕ್ ಪೋಲೀಸ್ ಠಾಣೆಯ ಸಿಬ್ಬಂದಿಗಳು ಸ್ಥಳದಲ್ಲಿದ್ದು ಸಮಸ್ಯೆ ಪರಿಹಾರಕ್ಕೆ ಪ್ರಯತ್ನ ಮಾಡಿದರು.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…