ಮುಲ್ಕಿ:2023ನೇ ಸಾಲಿನ ಮುಲ್ಕಿ ಸೀಮೆ ಅರಸು ಕಂಬಳದ ದಿನಾಂಕವನ್ನು ನಿರ್ಧರಿಸುವ ಬಗ್ಗೆ ಪಡುಪಣಂಬೂರಿನ ಮುಲ್ಕಿ ಅರಮನೆ ಧರ್ಮ ಚಾವಡಿಯಲ್ಲಿ ಸೀಮೆಯ ಅರಸು ಕಂಬಳ ಸಮಿತಿ ಹಾಗೂ ಗ್ರಾಮಸ್ಥರ ಸಭೆ ನಡೆಯಿತು.
ಸಭೆಯಲ್ಲಿ ಡಿ. 24ರಂದು ಸೀಮೆಯ ಅರಸು ಕಂಬಳ ನಡೆಸಲು ನಿರ್ಧರಿಸಲಾಯಿತು. ನವೆಂಬರ್ 19ರಂದು ಕಂಬಳಗದ್ದೆಯಲ್ಲಿ ಕೋಣಗಳನ್ನು ಇಳಿಸುವ ಕಾರ್ಯಕ್ರಮ,ಡಿಸೆಂಬರ್ 17ರಂದು ಕುದಿ ಕಂಬಳ, ನಡೆಸುವುದಾಗಿ ನಿರ್ಧರಿಸಲಾಯಿತು. ಸಭೆಯ ಅಧ್ಯಕ್ಷತೆಯನ್ನು ಮುಲ್ಕಿ ಸೀಮೆ ಅರಸರಾದ ದುಗ್ಗಣ್ಣ ಸಾವಂತರು ವಹಿಸಿ ಮಾತನಾಡಿ ಸುಮಾರು 400 ವರ್ಷ ಇತಿಹಾಸದ ಸೀಮೆಯ ಅರಸು ಕಂಬಳವನ್ನು ಯಶಸ್ವಿಗೊಳಿಸಿ ಎಂದು ಕರೆ ನೀಡಿದರು.
ಸಭೆಯಲ್ಲಿ ಕಂಬಳ ಸಮಿತಿಯ ಅಧ್ಯಕ್ಷ ಕಿರಣ್ ಶೆಟ್ಟಿ ಕೋಲ್ನಾಡ್ ಗುತ್ತು, ವಕೀಲರಾದ ಚಂದ್ರಶೇಖರ್, ಸಮಿತಿಯ ಶ್ಯಾಮ್ ಪ್ರಸಾದ್, ಬಂಕಿ ನಾಯಕರು, ಅನಿಲ್ ಶೆಟ್ಟಿ, ಪ್ರಮೋದ್ ಶೆಟ್ಟಿ, ಸತೀಶ್ ಶೆಟ್ಟಿ, ಹೇಮನಾಥ ಅಮೀನ್ ಮತ್ತಿತರರು ಉಪಸ್ಥಿತರಿದ್ದರು.
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…
ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾ ಸಮೀಪದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಮೀಥೇನ್ ಅನಿಲ ಸ್ಫೋಟದಲ್ಲಿ ಕನಿಷ್ಠ 32 ಕಾರ್ಮಿಕರು…
ಬೀರತಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರತಮ್ಮನಹಳ್ಳಿ ಕೆರೆಗೆ ಕಿಡಿಗೇಡಿಗಳು ಕ್ರಿಮಿನಾಶಕ ವಸ್ತು ಹಾಕಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳ…