ದಕ್ಷಿಣ ಕನ್ನಡ ; ಜಿಲ್ಲಾ ಕಂಬಳ ಸಮಿತಿಯು ಕಂಬಳವನ್ನ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಹೊಸ ಹೆಜ್ಜೆಯನ್ನ ತೆಗೆದುಕೊಂಡಿದೆ, ಹೊಸ ಅಧ್ಯಕ್ಷರ ಅವಧಿಯಲ್ಲಿ ಕಂಬಳವನ್ನು ಇನ್ನೂ ಹೆಚ್ಚು ಪ್ರೋತ್ಸಾಹಿಸುವ ದೃಷ್ಟಿಯಿಂದ ಜಿಲ್ಲಾ ಕಂಬಳ ಸಮಿತಿಯು ನೂತನ ಹೆಜ್ಜೆಯನ್ನ ಇಟ್ಟಿದೆ. ಈ ನಿಟ್ಟಿನಲ್ಲಿ ಜಿಲ್ಲಾ ಕಂಬಳ ಸಮಿತಿಯ ವತಿಯಿಂದ ಮೂಡಬಿದಿರೆಯ ಕಡಲಕೆರೆ ಬಳಿ ಇರುವ ಸೃಷ್ಠಿ ಗಾರ್ಡನ್ನಲ್ಲಿ ಕಂಬಳದ ಈ ಋತುವಿನ ಸಮಾಲೋಚನಾ ಸಭೆ ನಡೆದಿದೆ.
ಜಿಲ್ಲಾ ಕಂಬಳ ಸಮಿತಿಯ ಅಧ್ಯಕ್ಷ ಡಾ. ಬೆಳಪು ದೇವಿಪ್ರಸಾದ್ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕಂಬಳ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಕೋಣದ ಯಜಮಾನರು, ವ್ಯವಸ್ಥಾಪಕರು ಹಾಗೂ ತೀರ್ಪುಗಾರರನ್ನು ಗೌರವಿಸಲಾಗಿದೆ.
ಕಂಬಳ ಸುಸಜ್ಜಿತವಾಗಿ ನಡೆಯಬೇಕಾದರೆ ಕಂಬಳದ ಕೋಣಗಳ ಯಜಮಾನರುಗಳು, ಕೋಣಗಳನ್ನು ಬಿಡುವವರ ಮತ್ತು ಓಡಿಸುವವರ ಸಹಕಾರವೂ ಮುಖ್ಯವಾಗಿಬೇಕು. ಯಾವುದೇ ಗೊಂದಲಗಳಿಲ್ಲದೆ ಎಲ್ಲರೂ ಒಟ್ಟಾಗಿ ಸೇರಿ ಏಕ ಮನಸ್ಸಿನಿಂದ ಕಂಬಳವನ್ನು ಮುನ್ನಡೆಸಬೇಕಾಗಿದೆ. ವೈಯಕ್ತಿಕವಾಗಿ ಕಂಬಳದ ಬಗ್ಗೆ ಯಾರೂ ಕೂಡಾ ಮಾಧ್ಯಮದ ಮುಂದೆ ಹೇಳಿಕೆಗಳನ್ನು ನೀಡಿ ಗೊಂದಲ ಸೃಷ್ಠಿಸಬಾರದು ಎಂದು ಡಾ.ಬೆಳಪು ದೇವಿಪ್ರಸಾದ್ ಶೆಟ್ಟಿ ವಿನಂತಿಸಿಕೊಂಡಿದ್ದಾರೆ.
ಪುತ್ತೂರಿನ ಸಮಾಜ ಸೇವಕಿ ಧಾರ್ಮಿಕ ಮುಂದಾಳು ನರಿಮೊಗರು ಗ್ರಾಮದ ಮುಂಡೂರು ಕೆರೆಮನೆ ನಳಿನಿ ಲೋಕಪ್ಪ ಗೌಡ (74ವ)ರವರು ಅಲ್ಪಕಾಲದ ಅಸೌಖ್ಯದಿಂದ…
ಮಂಗಳೂರು ಮುಂಬೈ, ಉಡುಪಿ, ಬೆಂಗಳೂರು, ಕಾರ್ಕಳದಲ್ಲಿ ಯುವತಿಯರನ್ನು ನಂಬಿಸಿ ಕೈಕೊಟ್ಟ ಭೂಪನೊಬ್ಬ ಪೊಲೀಸರ ಅತಿಥಿಯಾಗಿದ್ದಾನೆ. ಮ್ಯಾಟ್ರಿಮನಿ ಸೈಟ್ನಲ್ಲಿ ನಂಬಿಸಿ ಉಂಡೂ…
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…