ದಕ್ಷಿಣ ಕನ್ನಡ ; ಜಿಲ್ಲಾ ಕಂಬಳ ಸಮಿತಿಯು ಕಂಬಳವನ್ನ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಹೊಸ ಹೆಜ್ಜೆಯನ್ನ ತೆಗೆದುಕೊಂಡಿದೆ, ಹೊಸ ಅಧ್ಯಕ್ಷರ ಅವಧಿಯಲ್ಲಿ ಕಂಬಳವನ್ನು ಇನ್ನೂ ಹೆಚ್ಚು ಪ್ರೋತ್ಸಾಹಿಸುವ ದೃಷ್ಟಿಯಿಂದ ಜಿಲ್ಲಾ ಕಂಬಳ ಸಮಿತಿಯು ನೂತನ ಹೆಜ್ಜೆಯನ್ನ ಇಟ್ಟಿದೆ. ಈ ನಿಟ್ಟಿನಲ್ಲಿ ಜಿಲ್ಲಾ ಕಂಬಳ ಸಮಿತಿಯ ವತಿಯಿಂದ ಮೂಡಬಿದಿರೆಯ ಕಡಲಕೆರೆ ಬಳಿ ಇರುವ ಸೃಷ್ಠಿ ಗಾರ್ಡನ್ನಲ್ಲಿ ಕಂಬಳದ ಈ ಋತುವಿನ ಸಮಾಲೋಚನಾ ಸಭೆ ನಡೆದಿದೆ.
ಜಿಲ್ಲಾ ಕಂಬಳ ಸಮಿತಿಯ ಅಧ್ಯಕ್ಷ ಡಾ. ಬೆಳಪು ದೇವಿಪ್ರಸಾದ್ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕಂಬಳ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಕೋಣದ ಯಜಮಾನರು, ವ್ಯವಸ್ಥಾಪಕರು ಹಾಗೂ ತೀರ್ಪುಗಾರರನ್ನು ಗೌರವಿಸಲಾಗಿದೆ.
ಕಂಬಳ ಸುಸಜ್ಜಿತವಾಗಿ ನಡೆಯಬೇಕಾದರೆ ಕಂಬಳದ ಕೋಣಗಳ ಯಜಮಾನರುಗಳು, ಕೋಣಗಳನ್ನು ಬಿಡುವವರ ಮತ್ತು ಓಡಿಸುವವರ ಸಹಕಾರವೂ ಮುಖ್ಯವಾಗಿಬೇಕು. ಯಾವುದೇ ಗೊಂದಲಗಳಿಲ್ಲದೆ ಎಲ್ಲರೂ ಒಟ್ಟಾಗಿ ಸೇರಿ ಏಕ ಮನಸ್ಸಿನಿಂದ ಕಂಬಳವನ್ನು ಮುನ್ನಡೆಸಬೇಕಾಗಿದೆ. ವೈಯಕ್ತಿಕವಾಗಿ ಕಂಬಳದ ಬಗ್ಗೆ ಯಾರೂ ಕೂಡಾ ಮಾಧ್ಯಮದ ಮುಂದೆ ಹೇಳಿಕೆಗಳನ್ನು ನೀಡಿ ಗೊಂದಲ ಸೃಷ್ಠಿಸಬಾರದು ಎಂದು ಡಾ.ಬೆಳಪು ದೇವಿಪ್ರಸಾದ್ ಶೆಟ್ಟಿ ವಿನಂತಿಸಿಕೊಂಡಿದ್ದಾರೆ.
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…