ದಕ್ಷಿಣ ಕನ್ನಡ ; ಜಿಲ್ಲಾ ಕಂಬಳ ಸಮಿತಿಯು ಕಂಬಳವನ್ನ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಹೊಸ ಹೆಜ್ಜೆಯನ್ನ ತೆಗೆದುಕೊಂಡಿದೆ, ಹೊಸ ಅಧ್ಯಕ್ಷರ ಅವಧಿಯಲ್ಲಿ ಕಂಬಳವನ್ನು ಇನ್ನೂ ಹೆಚ್ಚು ಪ್ರೋತ್ಸಾಹಿಸುವ ದೃಷ್ಟಿಯಿಂದ ಜಿಲ್ಲಾ ಕಂಬಳ ಸಮಿತಿಯು ನೂತನ ಹೆಜ್ಜೆಯನ್ನ ಇಟ್ಟಿದೆ. ಈ ನಿಟ್ಟಿನಲ್ಲಿ ಜಿಲ್ಲಾ ಕಂಬಳ ಸಮಿತಿಯ ವತಿಯಿಂದ ಮೂಡಬಿದಿರೆಯ ಕಡಲಕೆರೆ ಬಳಿ ಇರುವ ಸೃಷ್ಠಿ ಗಾರ್ಡನ್ನಲ್ಲಿ ಕಂಬಳದ ಈ ಋತುವಿನ ಸಮಾಲೋಚನಾ ಸಭೆ ನಡೆದಿದೆ.
ಜಿಲ್ಲಾ ಕಂಬಳ ಸಮಿತಿಯ ಅಧ್ಯಕ್ಷ ಡಾ. ಬೆಳಪು ದೇವಿಪ್ರಸಾದ್ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕಂಬಳ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಕೋಣದ ಯಜಮಾನರು, ವ್ಯವಸ್ಥಾಪಕರು ಹಾಗೂ ತೀರ್ಪುಗಾರರನ್ನು ಗೌರವಿಸಲಾಗಿದೆ.
ಕಂಬಳ ಸುಸಜ್ಜಿತವಾಗಿ ನಡೆಯಬೇಕಾದರೆ ಕಂಬಳದ ಕೋಣಗಳ ಯಜಮಾನರುಗಳು, ಕೋಣಗಳನ್ನು ಬಿಡುವವರ ಮತ್ತು ಓಡಿಸುವವರ ಸಹಕಾರವೂ ಮುಖ್ಯವಾಗಿಬೇಕು. ಯಾವುದೇ ಗೊಂದಲಗಳಿಲ್ಲದೆ ಎಲ್ಲರೂ ಒಟ್ಟಾಗಿ ಸೇರಿ ಏಕ ಮನಸ್ಸಿನಿಂದ ಕಂಬಳವನ್ನು ಮುನ್ನಡೆಸಬೇಕಾಗಿದೆ. ವೈಯಕ್ತಿಕವಾಗಿ ಕಂಬಳದ ಬಗ್ಗೆ ಯಾರೂ ಕೂಡಾ ಮಾಧ್ಯಮದ ಮುಂದೆ ಹೇಳಿಕೆಗಳನ್ನು ನೀಡಿ ಗೊಂದಲ ಸೃಷ್ಠಿಸಬಾರದು ಎಂದು ಡಾ.ಬೆಳಪು ದೇವಿಪ್ರಸಾದ್ ಶೆಟ್ಟಿ ವಿನಂತಿಸಿಕೊಂಡಿದ್ದಾರೆ.
ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಅಂಬಲಪಾಡಿ ಸಮೀಪದ ಬಿಆರ್ ಮೆಡೋಸ್ ಅಪಾರ್ಟ್ಮೆಂಟ್ನಲ್ಲಿ ನಡೆದಿದೆ. ಮೃತರನ್ನು ಉಡುಪಿಯ…
ಅಂತರರಾಷ್ಟ್ರೀಯ ಮಟ್ಟದಲ್ಲಿ ಆರೋಗ್ಯ ಸೇವೆ ನೀಡುತ್ತಿರುವ ಡೋಲ್ಚೆ ಎಸ್ಥೆಟಿಕಾ ಸಂಸ್ಥೆಯ ಕರ್ನಾಟಕದ ಮೊದಲ ಶಾಖೆ ಆಗಸ್ಟ್ 13ರಂದು ಮಂಗಳೂರಿನಲ್ಲಿ ಕಾರ್ಯಾರಂಭಗೊಳ್ಳಲಿದೆ.…
ಕದ್ರಿ ಬಂಜನ್ ಆದಿ ಮೂಲಸ್ಥಾನ ಶ್ರೀ ನಾಗಬ್ರಹ್ಮ ಕ್ಷೇತ್ರದ ವತಿಯಿಂದ ನಿವೃತ್ತ ವೀರ ಯೋಧರು ಹಾಗೂ ವೀರನಾರಿಯರನ್ನು ಗೌರವಿಸುವ ವಿಶೇಷ…
ಡಿಸಿ ಮನ್ನಾ ಭೂಮಿಯನ್ನು ಅರ್ಹ ಬಡ ಹಾಗೂ ಶೋಷಿತ ಕುಟುಂಬಗಳಿಗೆ ಹಂಚಿಕೆ ಮಾಡುವಂತೆ ಆಗ್ರಹಿಸಿರುವ ಕರ್ನಾಟಕ ದಲಿತ ಸಂಘರ್ಷ ಸಮಿತಿ,…
ಕಸಬಾ ಗ್ರಾಮದ ಕುರುಂಬಳ ನಿವಾಸಿ ಹಮೀದ್ ಅವರ ಮನೆಯಲ್ಲಿ ಭಾನುವಾರ ಬೆಳಗ್ಗೆ ಗ್ಯಾಸ್ ಸಿಲಿಂಡರ್ ಏಕಾಏಕಿ ಸ್ಫೋಟಗೊಂಡು ಮನೆ ಸಂಪೂರ್ಣ…
ತೊಕ್ಕೊಟ್ಟು ವಿನಮ್ರ ಬಾರ್ ಬಳಿ ತಲವಾರು ಬೀಸಿ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದ ಆರೋಪದ ಮೇಲೆ ರೌಡಿಶೀಟರ್ವೊಬ್ಬನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.…