ಕೆನಡಾದಲ್ಲಿ ನಡೆಯುತ್ತಿದ್ದ ಖಲಿಸ್ತಾನ್ ಚಳುವಳಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಹಾಗೂ ಭಾರತ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿದ್ದ ಖಲಿಸ್ತಾನಿ ಭಯೋತ್ಪಾದಕ ಸುಖದೋಲ್ ಸಿಂಗ್ ನನ್ನು ಹತ್ಯೆ ಮಾಡಲಾಗಿದೆ. ಕೆನಡಾದಲ್ಲಿ ಹರ್ದೀಪ್ ನಿಜ್ಜಲ್ ಬಳಿಕ ಮತೋರ್ವ ಖಲಿಸ್ತಾನಿ ಉಗ್ರನ ಹತ್ಯೆಯಾಗಿದ್ದು, ಗ್ಯಾಂಗ್ ವಾರ್ನಲ್ಲಿ ಈತನ ಹತ್ಯೆಯಾಗಿದೆ.
ಭಾರತದ ಪಂಜಾಬ್ನ ಮೊಗಾದಿಂದ 2017 ರಲ್ಲಿ ನಕಲಿ ಪಾಸ್ಪೋರ್ಟ್ ಮೂಲಕ ಸುಖದೋಲ್ ಸಿಂಗ್ ಕೆನಡಾಕ್ಕೆ ಪಲಾಯನ ಮಾಡಿದ್ಧಾನೆ. ಅಲ್ಲಿ ಹೋದ ಮೇಲೆ ಖಲಿಸ್ತಾನ್ ಚಳುವಳಿಯಲ್ಲಿ ಭಾಗಿಯಾಗಿ ಸಂಘಟನೆಗೆ ಮುಂದಾಗಿದ್ದು, ಹರ್ದೀಪ್ ಸಿಂಗ್ ದಲ್ಲಾ ಅವರ ನಿಕಟ ಸಹವರ್ತಿಯಾಗಿದ್ದನು.
ಖಲಿಸ್ತಾನ್ ಮತ್ತು ಕೆನಡಾದೊಂದಿಗೆ ಸಂಪರ್ಕ ಹೊಂದಿರುವ 43 ದರೋಡೆಕೋರರಲ್ಲಿ ಸುಖದೋಲ್ ಸಿಂಗ್ ಕೂಡ ಒಬ್ಬನಾಗಿದ್ದಾನೆ ಎಂದು ತಿಳಿದು ಬಂದಿದೆ.
ಇನ್ನೂ ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ಹತ್ಯೆಯಲ್ಲಿ ಭಾರತದ ಪ್ರತಿನಿಧಿಗಳ ಪಾತ್ರ ಇದೆ ಎಂದು ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಇತ್ತಿಚೇಗೆ ಹೇಳಿದ್ದಾರೆ. ಹೀಗಾಗಿ ಭಾರತ ಮತ್ತು ಕೆನಡಾ ನಡುವೆ ರಾಜತಾಂತ್ರಿಕ ಗದ್ದಲದ ಬೆನ್ನಲ್ಲೇ ಸುಖದೋಲ್ ಸಿಂಗ್ ಕೊಲೆ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಅಂಬಲಪಾಡಿ ಸಮೀಪದ ಬಿಆರ್ ಮೆಡೋಸ್ ಅಪಾರ್ಟ್ಮೆಂಟ್ನಲ್ಲಿ ನಡೆದಿದೆ. ಮೃತರನ್ನು ಉಡುಪಿಯ…
ಅಂತರರಾಷ್ಟ್ರೀಯ ಮಟ್ಟದಲ್ಲಿ ಆರೋಗ್ಯ ಸೇವೆ ನೀಡುತ್ತಿರುವ ಡೋಲ್ಚೆ ಎಸ್ಥೆಟಿಕಾ ಸಂಸ್ಥೆಯ ಕರ್ನಾಟಕದ ಮೊದಲ ಶಾಖೆ ಆಗಸ್ಟ್ 13ರಂದು ಮಂಗಳೂರಿನಲ್ಲಿ ಕಾರ್ಯಾರಂಭಗೊಳ್ಳಲಿದೆ.…
ಕದ್ರಿ ಬಂಜನ್ ಆದಿ ಮೂಲಸ್ಥಾನ ಶ್ರೀ ನಾಗಬ್ರಹ್ಮ ಕ್ಷೇತ್ರದ ವತಿಯಿಂದ ನಿವೃತ್ತ ವೀರ ಯೋಧರು ಹಾಗೂ ವೀರನಾರಿಯರನ್ನು ಗೌರವಿಸುವ ವಿಶೇಷ…
ಡಿಸಿ ಮನ್ನಾ ಭೂಮಿಯನ್ನು ಅರ್ಹ ಬಡ ಹಾಗೂ ಶೋಷಿತ ಕುಟುಂಬಗಳಿಗೆ ಹಂಚಿಕೆ ಮಾಡುವಂತೆ ಆಗ್ರಹಿಸಿರುವ ಕರ್ನಾಟಕ ದಲಿತ ಸಂಘರ್ಷ ಸಮಿತಿ,…
ಕಸಬಾ ಗ್ರಾಮದ ಕುರುಂಬಳ ನಿವಾಸಿ ಹಮೀದ್ ಅವರ ಮನೆಯಲ್ಲಿ ಭಾನುವಾರ ಬೆಳಗ್ಗೆ ಗ್ಯಾಸ್ ಸಿಲಿಂಡರ್ ಏಕಾಏಕಿ ಸ್ಫೋಟಗೊಂಡು ಮನೆ ಸಂಪೂರ್ಣ…
ತೊಕ್ಕೊಟ್ಟು ವಿನಮ್ರ ಬಾರ್ ಬಳಿ ತಲವಾರು ಬೀಸಿ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದ ಆರೋಪದ ಮೇಲೆ ರೌಡಿಶೀಟರ್ವೊಬ್ಬನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.…