ಜನ ಮನದ ನಾಡಿ ಮಿಡಿತ

Advertisement

ಖಾಕಿ ಮೊಬೈಲ್‌ ಮೇಲೆ ಕಳ್ಳನ ಕಣ್ಣು..! ಮೊಬೈಲ್‌ ಎಸ್ಕೇಪ್….‌

ಬಂಟ್ವಾಳ ;ಅನಾರೋಗ್ಯದ ನಿಮಿತ್ತ ಆಸ್ಪತ್ರೆಗೆ ಚಿಕಿತ್ಸೆಗೆಂದು ದಾಖಲಾಗಿದ್ದ ಪೋಲಿಸ್ ಸಿಬ್ಬಂದಿಯೋರ್ವರ ಎರಡು ಮೊಬೈಲ್ ಫೋನ್ ಕಳವಾದ ಘಟನೆ ಬಂಟ್ವಾಳ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆದಿದೆ.

ಮೆಲ್ಕಾರ್ ಟ್ರಾಫಿಕ್ ಎಚ್.ಸಿ.ದೇವರಾಜ್ ಅವರು ಅನಾರೋಗ್ಯದ ಕಾರಣ ಬಂಟ್ವಾಳ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿ ಐಸಿಯು ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬಳಿಕ ಅವರು ಜನರಲ್ ವಾರ್ಡ್ ಗೆ ಸ್ಥಳಾಂತರವಾಗಿದ್ದರು. ಅವರು ಬೆಡ್ ನಲ್ಲಿ ಮಲಗಿದ್ದ ವೇಳೆ ಇವರ ಬೆಡ್ ಪಕ್ಕದಲ್ಲಿ ಟೇಬಲ್‌ ಮೇಲೆ ಇರಿಸಲಾಗಿದ್ದ ಸಾವಿರಾರು ರೂ ಮುಖಬೆಲೆಯ ಒಂದು ಮೊಬೈಲ್ ಹಾಗೂ ಕೀ ಪೇಡ್ ಮೊಬೈಲ್ ಫೋನ್ ನನ್ನು ಕಳ್ಳ ಕದ್ದಿದ್ದಾನೆ.


ಈತ ಕಳೆದ ವಾರ ಐಸಿಯು ಘಟಕದೊಳಗೆ ನುಗ್ಗಿ ಅಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅಜ್ಜಿಯೋರ್ವರಲ್ಲಿ ಒಮ್ಮೆ ಪೋನ್ ಕೊಡಿ ಅಜ್ಜಿ ಅರ್ಜೆಂಟಾಗಿ ಪೋನ್ ಮಾಡಲು ಇದೆ ಎಂದು ಹೇಳಿ ಮೊಬೈಲ್ ಪಡೆದುಕೊಂಡು ಹೋದ ವ್ಯಕ್ತಿ ಮೊಬೈಲ್ ಹಿಡಿದು ಹೋಗಿದ್ದಾನೆ.

ಅದೇ ವ್ಯಕ್ತಿ ಮತ್ತೆ ಪೊಲೀಸ್ ಸಿಬ್ಬಂದಿಯ ಪೋನ್ ಕಳ್ಳತನ ಮಾಡಿರುವಂತದ್ದು, ಇದೀಗ ಆಸ್ಪತ್ರೆಯಲ್ಲಿ ಈತನ ಪೋಟೋ ಅಂಟಿಸಲಾಗಿದ್ದು,ಈತನ ಮೊಬೈಲ್ ಕಳ್ಳ ಈತನ ಚಹರೆ ಯನ್ನು ಗಮ‌ನಿಸಿದವರು ಕೂಡಲೇ ಪೋಲಿಸರಿಗೆ ಮಾಹಿತಿ ನೀಡಿ ಎಂದು ತಿಳಿಸಲಾಗಿದೆ.

Leave a Reply

Your email address will not be published. Required fields are marked *

ಉಡುಪಿ: ಅಪಾರ್ಟ್‌ಮೆಂಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆ

ಮಂಗಳೂರು: ಮಂಗಳೂರಿನಲ್ಲಿ ಆ.13ರಂದು ಡೋಲ್ಚೆ ಎಸ್ಥೆಟಿಕಾ ಸಂಸ್ಥೆಯ ಮೊದಲ ಶಾಖೆ ಆರಂಭ

ಮಂಗಳೂರು: ಕದ್ರಿ ಬಂಜನ್‌ ಕ್ಷೇತ್ರದಲ್ಲಿ ನಿವೃತ್ತ ವೀರ ಯೋಧರು, ವೀರನಾರಿಯರಿಗೆ ಸನ್ಮಾನ…!

ಮಂಗಳೂರು: ಡಿಸಿ ಮನ್ನಾ ಭೂಮಿ ಹಂಚಿಕೆಗೆ ಆಗ್ರಹ: ಒಂದು ತಿಂಗಳಲ್ಲಿ ಸಮಸ್ಯೆ ಬಗೆಹರಿಸದಿದ್ದರೆ ಉಗ್ರ ಹೋರಾಟ…!

ವಿಟ್ಲ: ಗ್ಯಾಸ್ ಸಿಲಿಂಡರ್ ಸ್ಫೋಟ, ಮನೆ ಸಂಪೂರ್ಣ ಜಖಂ; ಲಕ್ಷಾಂತರ ರೂ. ನಷ್ಟ

ತೊಕ್ಕೊಟ್ಟು: ಬಾರ್ ಬಳಿ ತಲವಾರು ಬೀಸಿ ಆತಂಕ ಸೃಷ್ಟಿಸಿದ ರೌಡಿಶೀಟರ್ ಬಂಧನ…!

ಟೆಹ್ರಾನ್: ಖಮೇನಿ ಭೇಟಿಯಲ್ಲೇ ಹೊಸ ರಹಸ್ಯ! ‘ನೀವೇ ಖಮೇನಿಯೇ?’ ಎಂದು ಪ್ರಶ್ನಿಸಿದ ಇರಾನ್ ಅಧ್ಯಕ್ಷ…!

ಬ್ಯಾಂಕಾಕ್: ಥೈಲ್ಯಾಂಡ್ ಶಾಲೆಯಲ್ಲಿ ಗುಂಡಿನ ದಾಳಿ: ಶಿಕ್ಷಕ ಸಾವು, 15 ಮಂದಿಗೆ ಗಾಯ…!

ಬಂಟ್ವಾಳ: ಆಳ್ವಾಸ್ ಪ್ರಗತಿ-2026 ಉದ್ಯೋಗ ಮೇಳಕ್ಕೆ ಬಂಟ್ವಾಳದಿಂದ ಉಚಿತ ಬಸ್…!

error: Content is protected !!