ಬಂಟ್ವಾಳ ;ಅನಾರೋಗ್ಯದ ನಿಮಿತ್ತ ಆಸ್ಪತ್ರೆಗೆ ಚಿಕಿತ್ಸೆಗೆಂದು ದಾಖಲಾಗಿದ್ದ ಪೋಲಿಸ್ ಸಿಬ್ಬಂದಿಯೋರ್ವರ ಎರಡು ಮೊಬೈಲ್ ಫೋನ್ ಕಳವಾದ ಘಟನೆ ಬಂಟ್ವಾಳ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆದಿದೆ.
ಮೆಲ್ಕಾರ್ ಟ್ರಾಫಿಕ್ ಎಚ್.ಸಿ.ದೇವರಾಜ್ ಅವರು ಅನಾರೋಗ್ಯದ ಕಾರಣ ಬಂಟ್ವಾಳ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿ ಐಸಿಯು ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬಳಿಕ ಅವರು ಜನರಲ್ ವಾರ್ಡ್ ಗೆ ಸ್ಥಳಾಂತರವಾಗಿದ್ದರು. ಅವರು ಬೆಡ್ ನಲ್ಲಿ ಮಲಗಿದ್ದ ವೇಳೆ ಇವರ ಬೆಡ್ ಪಕ್ಕದಲ್ಲಿ ಟೇಬಲ್ ಮೇಲೆ ಇರಿಸಲಾಗಿದ್ದ ಸಾವಿರಾರು ರೂ ಮುಖಬೆಲೆಯ ಒಂದು ಮೊಬೈಲ್ ಹಾಗೂ ಕೀ ಪೇಡ್ ಮೊಬೈಲ್ ಫೋನ್ ನನ್ನು ಕಳ್ಳ ಕದ್ದಿದ್ದಾನೆ.
ಈತ ಕಳೆದ ವಾರ ಐಸಿಯು ಘಟಕದೊಳಗೆ ನುಗ್ಗಿ ಅಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅಜ್ಜಿಯೋರ್ವರಲ್ಲಿ ಒಮ್ಮೆ ಪೋನ್ ಕೊಡಿ ಅಜ್ಜಿ ಅರ್ಜೆಂಟಾಗಿ ಪೋನ್ ಮಾಡಲು ಇದೆ ಎಂದು ಹೇಳಿ ಮೊಬೈಲ್ ಪಡೆದುಕೊಂಡು ಹೋದ ವ್ಯಕ್ತಿ ಮೊಬೈಲ್ ಹಿಡಿದು ಹೋಗಿದ್ದಾನೆ.
ಅದೇ ವ್ಯಕ್ತಿ ಮತ್ತೆ ಪೊಲೀಸ್ ಸಿಬ್ಬಂದಿಯ ಪೋನ್ ಕಳ್ಳತನ ಮಾಡಿರುವಂತದ್ದು, ಇದೀಗ ಆಸ್ಪತ್ರೆಯಲ್ಲಿ ಈತನ ಪೋಟೋ ಅಂಟಿಸಲಾಗಿದ್ದು,ಈತನ ಮೊಬೈಲ್ ಕಳ್ಳ ಈತನ ಚಹರೆ ಯನ್ನು ಗಮನಿಸಿದವರು ಕೂಡಲೇ ಪೋಲಿಸರಿಗೆ ಮಾಹಿತಿ ನೀಡಿ ಎಂದು ತಿಳಿಸಲಾಗಿದೆ.
ಮಂಗಳೂರು ಮುಂಬೈ, ಉಡುಪಿ, ಬೆಂಗಳೂರು, ಕಾರ್ಕಳದಲ್ಲಿ ಯುವತಿಯರನ್ನು ನಂಬಿಸಿ ಕೈಕೊಟ್ಟ ಭೂಪನೊಬ್ಬ ಪೊಲೀಸರ ಅತಿಥಿಯಾಗಿದ್ದಾನೆ. ಮ್ಯಾಟ್ರಿಮನಿ ಸೈಟ್ನಲ್ಲಿ ನಂಬಿಸಿ ಉಂಡೂ…
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…