ಬಂಟ್ವಾಳ ;ಅನಾರೋಗ್ಯದ ನಿಮಿತ್ತ ಆಸ್ಪತ್ರೆಗೆ ಚಿಕಿತ್ಸೆಗೆಂದು ದಾಖಲಾಗಿದ್ದ ಪೋಲಿಸ್ ಸಿಬ್ಬಂದಿಯೋರ್ವರ ಎರಡು ಮೊಬೈಲ್ ಫೋನ್ ಕಳವಾದ ಘಟನೆ ಬಂಟ್ವಾಳ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆದಿದೆ.
ಮೆಲ್ಕಾರ್ ಟ್ರಾಫಿಕ್ ಎಚ್.ಸಿ.ದೇವರಾಜ್ ಅವರು ಅನಾರೋಗ್ಯದ ಕಾರಣ ಬಂಟ್ವಾಳ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿ ಐಸಿಯು ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬಳಿಕ ಅವರು ಜನರಲ್ ವಾರ್ಡ್ ಗೆ ಸ್ಥಳಾಂತರವಾಗಿದ್ದರು. ಅವರು ಬೆಡ್ ನಲ್ಲಿ ಮಲಗಿದ್ದ ವೇಳೆ ಇವರ ಬೆಡ್ ಪಕ್ಕದಲ್ಲಿ ಟೇಬಲ್ ಮೇಲೆ ಇರಿಸಲಾಗಿದ್ದ ಸಾವಿರಾರು ರೂ ಮುಖಬೆಲೆಯ ಒಂದು ಮೊಬೈಲ್ ಹಾಗೂ ಕೀ ಪೇಡ್ ಮೊಬೈಲ್ ಫೋನ್ ನನ್ನು ಕಳ್ಳ ಕದ್ದಿದ್ದಾನೆ.
ಈತ ಕಳೆದ ವಾರ ಐಸಿಯು ಘಟಕದೊಳಗೆ ನುಗ್ಗಿ ಅಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅಜ್ಜಿಯೋರ್ವರಲ್ಲಿ ಒಮ್ಮೆ ಪೋನ್ ಕೊಡಿ ಅಜ್ಜಿ ಅರ್ಜೆಂಟಾಗಿ ಪೋನ್ ಮಾಡಲು ಇದೆ ಎಂದು ಹೇಳಿ ಮೊಬೈಲ್ ಪಡೆದುಕೊಂಡು ಹೋದ ವ್ಯಕ್ತಿ ಮೊಬೈಲ್ ಹಿಡಿದು ಹೋಗಿದ್ದಾನೆ.
ಅದೇ ವ್ಯಕ್ತಿ ಮತ್ತೆ ಪೊಲೀಸ್ ಸಿಬ್ಬಂದಿಯ ಪೋನ್ ಕಳ್ಳತನ ಮಾಡಿರುವಂತದ್ದು, ಇದೀಗ ಆಸ್ಪತ್ರೆಯಲ್ಲಿ ಈತನ ಪೋಟೋ ಅಂಟಿಸಲಾಗಿದ್ದು,ಈತನ ಮೊಬೈಲ್ ಕಳ್ಳ ಈತನ ಚಹರೆ ಯನ್ನು ಗಮನಿಸಿದವರು ಕೂಡಲೇ ಪೋಲಿಸರಿಗೆ ಮಾಹಿತಿ ನೀಡಿ ಎಂದು ತಿಳಿಸಲಾಗಿದೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…