ಬಂಟ್ವಾಳ ;ಅನಾರೋಗ್ಯದ ನಿಮಿತ್ತ ಆಸ್ಪತ್ರೆಗೆ ಚಿಕಿತ್ಸೆಗೆಂದು ದಾಖಲಾಗಿದ್ದ ಪೋಲಿಸ್ ಸಿಬ್ಬಂದಿಯೋರ್ವರ ಎರಡು ಮೊಬೈಲ್ ಫೋನ್ ಕಳವಾದ ಘಟನೆ ಬಂಟ್ವಾಳ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆದಿದೆ.
ಮೆಲ್ಕಾರ್ ಟ್ರಾಫಿಕ್ ಎಚ್.ಸಿ.ದೇವರಾಜ್ ಅವರು ಅನಾರೋಗ್ಯದ ಕಾರಣ ಬಂಟ್ವಾಳ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿ ಐಸಿಯು ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬಳಿಕ ಅವರು ಜನರಲ್ ವಾರ್ಡ್ ಗೆ ಸ್ಥಳಾಂತರವಾಗಿದ್ದರು. ಅವರು ಬೆಡ್ ನಲ್ಲಿ ಮಲಗಿದ್ದ ವೇಳೆ ಇವರ ಬೆಡ್ ಪಕ್ಕದಲ್ಲಿ ಟೇಬಲ್ ಮೇಲೆ ಇರಿಸಲಾಗಿದ್ದ ಸಾವಿರಾರು ರೂ ಮುಖಬೆಲೆಯ ಒಂದು ಮೊಬೈಲ್ ಹಾಗೂ ಕೀ ಪೇಡ್ ಮೊಬೈಲ್ ಫೋನ್ ನನ್ನು ಕಳ್ಳ ಕದ್ದಿದ್ದಾನೆ.
ಈತ ಕಳೆದ ವಾರ ಐಸಿಯು ಘಟಕದೊಳಗೆ ನುಗ್ಗಿ ಅಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅಜ್ಜಿಯೋರ್ವರಲ್ಲಿ ಒಮ್ಮೆ ಪೋನ್ ಕೊಡಿ ಅಜ್ಜಿ ಅರ್ಜೆಂಟಾಗಿ ಪೋನ್ ಮಾಡಲು ಇದೆ ಎಂದು ಹೇಳಿ ಮೊಬೈಲ್ ಪಡೆದುಕೊಂಡು ಹೋದ ವ್ಯಕ್ತಿ ಮೊಬೈಲ್ ಹಿಡಿದು ಹೋಗಿದ್ದಾನೆ.
ಅದೇ ವ್ಯಕ್ತಿ ಮತ್ತೆ ಪೊಲೀಸ್ ಸಿಬ್ಬಂದಿಯ ಪೋನ್ ಕಳ್ಳತನ ಮಾಡಿರುವಂತದ್ದು, ಇದೀಗ ಆಸ್ಪತ್ರೆಯಲ್ಲಿ ಈತನ ಪೋಟೋ ಅಂಟಿಸಲಾಗಿದ್ದು,ಈತನ ಮೊಬೈಲ್ ಕಳ್ಳ ಈತನ ಚಹರೆ ಯನ್ನು ಗಮನಿಸಿದವರು ಕೂಡಲೇ ಪೋಲಿಸರಿಗೆ ಮಾಹಿತಿ ನೀಡಿ ಎಂದು ತಿಳಿಸಲಾಗಿದೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…