ಬಂಟ್ವಾಳ ;ಅನಾರೋಗ್ಯದ ನಿಮಿತ್ತ ಆಸ್ಪತ್ರೆಗೆ ಚಿಕಿತ್ಸೆಗೆಂದು ದಾಖಲಾಗಿದ್ದ ಪೋಲಿಸ್ ಸಿಬ್ಬಂದಿಯೋರ್ವರ ಎರಡು ಮೊಬೈಲ್ ಫೋನ್ ಕಳವಾದ ಘಟನೆ ಬಂಟ್ವಾಳ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆದಿದೆ.
ಮೆಲ್ಕಾರ್ ಟ್ರಾಫಿಕ್ ಎಚ್.ಸಿ.ದೇವರಾಜ್ ಅವರು ಅನಾರೋಗ್ಯದ ಕಾರಣ ಬಂಟ್ವಾಳ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿ ಐಸಿಯು ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬಳಿಕ ಅವರು ಜನರಲ್ ವಾರ್ಡ್ ಗೆ ಸ್ಥಳಾಂತರವಾಗಿದ್ದರು. ಅವರು ಬೆಡ್ ನಲ್ಲಿ ಮಲಗಿದ್ದ ವೇಳೆ ಇವರ ಬೆಡ್ ಪಕ್ಕದಲ್ಲಿ ಟೇಬಲ್ ಮೇಲೆ ಇರಿಸಲಾಗಿದ್ದ ಸಾವಿರಾರು ರೂ ಮುಖಬೆಲೆಯ ಒಂದು ಮೊಬೈಲ್ ಹಾಗೂ ಕೀ ಪೇಡ್ ಮೊಬೈಲ್ ಫೋನ್ ನನ್ನು ಕಳ್ಳ ಕದ್ದಿದ್ದಾನೆ.
ಈತ ಕಳೆದ ವಾರ ಐಸಿಯು ಘಟಕದೊಳಗೆ ನುಗ್ಗಿ ಅಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅಜ್ಜಿಯೋರ್ವರಲ್ಲಿ ಒಮ್ಮೆ ಪೋನ್ ಕೊಡಿ ಅಜ್ಜಿ ಅರ್ಜೆಂಟಾಗಿ ಪೋನ್ ಮಾಡಲು ಇದೆ ಎಂದು ಹೇಳಿ ಮೊಬೈಲ್ ಪಡೆದುಕೊಂಡು ಹೋದ ವ್ಯಕ್ತಿ ಮೊಬೈಲ್ ಹಿಡಿದು ಹೋಗಿದ್ದಾನೆ.
ಅದೇ ವ್ಯಕ್ತಿ ಮತ್ತೆ ಪೊಲೀಸ್ ಸಿಬ್ಬಂದಿಯ ಪೋನ್ ಕಳ್ಳತನ ಮಾಡಿರುವಂತದ್ದು, ಇದೀಗ ಆಸ್ಪತ್ರೆಯಲ್ಲಿ ಈತನ ಪೋಟೋ ಅಂಟಿಸಲಾಗಿದ್ದು,ಈತನ ಮೊಬೈಲ್ ಕಳ್ಳ ಈತನ ಚಹರೆ ಯನ್ನು ಗಮನಿಸಿದವರು ಕೂಡಲೇ ಪೋಲಿಸರಿಗೆ ಮಾಹಿತಿ ನೀಡಿ ಎಂದು ತಿಳಿಸಲಾಗಿದೆ.
ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಅಂಬಲಪಾಡಿ ಸಮೀಪದ ಬಿಆರ್ ಮೆಡೋಸ್ ಅಪಾರ್ಟ್ಮೆಂಟ್ನಲ್ಲಿ ನಡೆದಿದೆ. ಮೃತರನ್ನು ಉಡುಪಿಯ…
ಅಂತರರಾಷ್ಟ್ರೀಯ ಮಟ್ಟದಲ್ಲಿ ಆರೋಗ್ಯ ಸೇವೆ ನೀಡುತ್ತಿರುವ ಡೋಲ್ಚೆ ಎಸ್ಥೆಟಿಕಾ ಸಂಸ್ಥೆಯ ಕರ್ನಾಟಕದ ಮೊದಲ ಶಾಖೆ ಆಗಸ್ಟ್ 13ರಂದು ಮಂಗಳೂರಿನಲ್ಲಿ ಕಾರ್ಯಾರಂಭಗೊಳ್ಳಲಿದೆ.…
ಕದ್ರಿ ಬಂಜನ್ ಆದಿ ಮೂಲಸ್ಥಾನ ಶ್ರೀ ನಾಗಬ್ರಹ್ಮ ಕ್ಷೇತ್ರದ ವತಿಯಿಂದ ನಿವೃತ್ತ ವೀರ ಯೋಧರು ಹಾಗೂ ವೀರನಾರಿಯರನ್ನು ಗೌರವಿಸುವ ವಿಶೇಷ…
ಡಿಸಿ ಮನ್ನಾ ಭೂಮಿಯನ್ನು ಅರ್ಹ ಬಡ ಹಾಗೂ ಶೋಷಿತ ಕುಟುಂಬಗಳಿಗೆ ಹಂಚಿಕೆ ಮಾಡುವಂತೆ ಆಗ್ರಹಿಸಿರುವ ಕರ್ನಾಟಕ ದಲಿತ ಸಂಘರ್ಷ ಸಮಿತಿ,…
ಕಸಬಾ ಗ್ರಾಮದ ಕುರುಂಬಳ ನಿವಾಸಿ ಹಮೀದ್ ಅವರ ಮನೆಯಲ್ಲಿ ಭಾನುವಾರ ಬೆಳಗ್ಗೆ ಗ್ಯಾಸ್ ಸಿಲಿಂಡರ್ ಏಕಾಏಕಿ ಸ್ಫೋಟಗೊಂಡು ಮನೆ ಸಂಪೂರ್ಣ…
ತೊಕ್ಕೊಟ್ಟು ವಿನಮ್ರ ಬಾರ್ ಬಳಿ ತಲವಾರು ಬೀಸಿ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದ ಆರೋಪದ ಮೇಲೆ ರೌಡಿಶೀಟರ್ವೊಬ್ಬನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.…