ಬಂಟ್ವಾಳ ;ಅನಾರೋಗ್ಯದ ನಿಮಿತ್ತ ಆಸ್ಪತ್ರೆಗೆ ಚಿಕಿತ್ಸೆಗೆಂದು ದಾಖಲಾಗಿದ್ದ ಪೋಲಿಸ್ ಸಿಬ್ಬಂದಿಯೋರ್ವರ ಎರಡು ಮೊಬೈಲ್ ಫೋನ್ ಕಳವಾದ ಘಟನೆ ಬಂಟ್ವಾಳ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆದಿದೆ.
ಮೆಲ್ಕಾರ್ ಟ್ರಾಫಿಕ್ ಎಚ್.ಸಿ.ದೇವರಾಜ್ ಅವರು ಅನಾರೋಗ್ಯದ ಕಾರಣ ಬಂಟ್ವಾಳ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿ ಐಸಿಯು ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬಳಿಕ ಅವರು ಜನರಲ್ ವಾರ್ಡ್ ಗೆ ಸ್ಥಳಾಂತರವಾಗಿದ್ದರು. ಅವರು ಬೆಡ್ ನಲ್ಲಿ ಮಲಗಿದ್ದ ವೇಳೆ ಇವರ ಬೆಡ್ ಪಕ್ಕದಲ್ಲಿ ಟೇಬಲ್ ಮೇಲೆ ಇರಿಸಲಾಗಿದ್ದ ಸಾವಿರಾರು ರೂ ಮುಖಬೆಲೆಯ ಒಂದು ಮೊಬೈಲ್ ಹಾಗೂ ಕೀ ಪೇಡ್ ಮೊಬೈಲ್ ಫೋನ್ ನನ್ನು ಕಳ್ಳ ಕದ್ದಿದ್ದಾನೆ.
ಈತ ಕಳೆದ ವಾರ ಐಸಿಯು ಘಟಕದೊಳಗೆ ನುಗ್ಗಿ ಅಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅಜ್ಜಿಯೋರ್ವರಲ್ಲಿ ಒಮ್ಮೆ ಪೋನ್ ಕೊಡಿ ಅಜ್ಜಿ ಅರ್ಜೆಂಟಾಗಿ ಪೋನ್ ಮಾಡಲು ಇದೆ ಎಂದು ಹೇಳಿ ಮೊಬೈಲ್ ಪಡೆದುಕೊಂಡು ಹೋದ ವ್ಯಕ್ತಿ ಮೊಬೈಲ್ ಹಿಡಿದು ಹೋಗಿದ್ದಾನೆ.
ಅದೇ ವ್ಯಕ್ತಿ ಮತ್ತೆ ಪೊಲೀಸ್ ಸಿಬ್ಬಂದಿಯ ಪೋನ್ ಕಳ್ಳತನ ಮಾಡಿರುವಂತದ್ದು, ಇದೀಗ ಆಸ್ಪತ್ರೆಯಲ್ಲಿ ಈತನ ಪೋಟೋ ಅಂಟಿಸಲಾಗಿದ್ದು,ಈತನ ಮೊಬೈಲ್ ಕಳ್ಳ ಈತನ ಚಹರೆ ಯನ್ನು ಗಮನಿಸಿದವರು ಕೂಡಲೇ ಪೋಲಿಸರಿಗೆ ಮಾಹಿತಿ ನೀಡಿ ಎಂದು ತಿಳಿಸಲಾಗಿದೆ.
ಬಸ್ವೊಂದು ಸ್ಕೂಟಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕಾಪು…
ಮುಡಿಪು-ಬಿ. ಸಿ. ರೋಡ್ ರಸ್ತೆಯ ಸಜಿಪ ಎಂಬಲ್ಲಿ ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ…
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…