ಪಡುಬಿದ್ರಿ: ತೆಂಕ ಎರ್ಮಾಳಿನಲ್ಲಿ ಬ್ಯಾಂಕ್ ಮ್ಯಾನೇಜರ್ ಎಂದು ಕನ್ನಡ ಭಾಷೆಯಲ್ಲಿ ಮಾತಾನಾಡಿ, ಕೆವೈಸಿ ಲಿಂಕ್ ಆಗಿಲ್ಲ, ಒಟಿಪಿ ನೀಡಿ ಎಂದು ಕೇಳಿಕೆಯ ಮೇರೆಗೆ ಒಟಿಪಿ ನೀಡುತ್ತಿದಂತೆ ಖಾತೆಯಿಂದ ಮೂರು ಲಕ್ಷ ರೂಪಾಯಿ ಕಳೆದುಕೊಂಡ ಘಟನೆ ನಡೆದಿದೆ.
ಎರ್ಮಾಳು ತೆಂಕ ಕಿನಾರ ಶಾಲೆಯ ಬಳಿಯ ನಿವಾಸಿ ಶಂಕರ್ ಎಂಬವರು ಹಣ ಕಳೆದುಕೊಂಡವರಾಗಿದ್ದಾರೆ.
ಬಡಪಾಯಿ ಮೀನುಗಾರಿಕೆ ನಡೆಸಿ ಜೀವನ ನಡೆಸುತ್ತಿದ್ದ ಇವರು ರಾತ್ರಿ ಹಗಲೆನ್ನದೆ, ಬಿಸಿಲು ಮಳೆಗೆ ಮೀನುಗಾರಿಕೆ ನಡೆಸಿ ಕೂಡಿಟ್ಟ ಹಣ ವಂಚಕರ ವಂಚನೆಯಿಂದ ಕಳೆದುಕೊಳ್ಳುವಂತಾಗಿದೆ. ಎಲ್ಲಾ ಮಾದ್ಯಮಗಳಲ್ಲೂ ಈ ಆನ್ಲೈನ್ ವಂಚನೆಯ ಬಗ್ಗೆ ಮೋಸ ಹೋಗದಂತೆ ಎಚ್ಚರಿಕೆ ನೀಡಲಾಗುತ್ತಿದೆಯಾದರೂ ದಿನದಿಂದ ದಿನಕ್ಕೆ ವಂಚನೆಗೊಳಗಾಗುವವರ ಸಂಖ್ಯೆ ಅಧಿಕವಾಗುತ್ತಿದೆ. ಇನ್ನೂ ಘಟನೆ ಬಗ್ಗೆ ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…
ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…
ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು…
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…