ಪಡುಬಿದ್ರಿ: ತೆಂಕ ಎರ್ಮಾಳಿನಲ್ಲಿ ಬ್ಯಾಂಕ್ ಮ್ಯಾನೇಜರ್ ಎಂದು ಕನ್ನಡ ಭಾಷೆಯಲ್ಲಿ ಮಾತಾನಾಡಿ, ಕೆವೈಸಿ ಲಿಂಕ್ ಆಗಿಲ್ಲ, ಒಟಿಪಿ ನೀಡಿ ಎಂದು ಕೇಳಿಕೆಯ ಮೇರೆಗೆ ಒಟಿಪಿ ನೀಡುತ್ತಿದಂತೆ ಖಾತೆಯಿಂದ ಮೂರು ಲಕ್ಷ ರೂಪಾಯಿ ಕಳೆದುಕೊಂಡ ಘಟನೆ ನಡೆದಿದೆ.
ಎರ್ಮಾಳು ತೆಂಕ ಕಿನಾರ ಶಾಲೆಯ ಬಳಿಯ ನಿವಾಸಿ ಶಂಕರ್ ಎಂಬವರು ಹಣ ಕಳೆದುಕೊಂಡವರಾಗಿದ್ದಾರೆ.
ಬಡಪಾಯಿ ಮೀನುಗಾರಿಕೆ ನಡೆಸಿ ಜೀವನ ನಡೆಸುತ್ತಿದ್ದ ಇವರು ರಾತ್ರಿ ಹಗಲೆನ್ನದೆ, ಬಿಸಿಲು ಮಳೆಗೆ ಮೀನುಗಾರಿಕೆ ನಡೆಸಿ ಕೂಡಿಟ್ಟ ಹಣ ವಂಚಕರ ವಂಚನೆಯಿಂದ ಕಳೆದುಕೊಳ್ಳುವಂತಾಗಿದೆ. ಎಲ್ಲಾ ಮಾದ್ಯಮಗಳಲ್ಲೂ ಈ ಆನ್ಲೈನ್ ವಂಚನೆಯ ಬಗ್ಗೆ ಮೋಸ ಹೋಗದಂತೆ ಎಚ್ಚರಿಕೆ ನೀಡಲಾಗುತ್ತಿದೆಯಾದರೂ ದಿನದಿಂದ ದಿನಕ್ಕೆ ವಂಚನೆಗೊಳಗಾಗುವವರ ಸಂಖ್ಯೆ ಅಧಿಕವಾಗುತ್ತಿದೆ. ಇನ್ನೂ ಘಟನೆ ಬಗ್ಗೆ ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಅಂಬಲಪಾಡಿ ಸಮೀಪದ ಬಿಆರ್ ಮೆಡೋಸ್ ಅಪಾರ್ಟ್ಮೆಂಟ್ನಲ್ಲಿ ನಡೆದಿದೆ. ಮೃತರನ್ನು ಉಡುಪಿಯ…
ಅಂತರರಾಷ್ಟ್ರೀಯ ಮಟ್ಟದಲ್ಲಿ ಆರೋಗ್ಯ ಸೇವೆ ನೀಡುತ್ತಿರುವ ಡೋಲ್ಚೆ ಎಸ್ಥೆಟಿಕಾ ಸಂಸ್ಥೆಯ ಕರ್ನಾಟಕದ ಮೊದಲ ಶಾಖೆ ಆಗಸ್ಟ್ 13ರಂದು ಮಂಗಳೂರಿನಲ್ಲಿ ಕಾರ್ಯಾರಂಭಗೊಳ್ಳಲಿದೆ.…
ಕದ್ರಿ ಬಂಜನ್ ಆದಿ ಮೂಲಸ್ಥಾನ ಶ್ರೀ ನಾಗಬ್ರಹ್ಮ ಕ್ಷೇತ್ರದ ವತಿಯಿಂದ ನಿವೃತ್ತ ವೀರ ಯೋಧರು ಹಾಗೂ ವೀರನಾರಿಯರನ್ನು ಗೌರವಿಸುವ ವಿಶೇಷ…
ಡಿಸಿ ಮನ್ನಾ ಭೂಮಿಯನ್ನು ಅರ್ಹ ಬಡ ಹಾಗೂ ಶೋಷಿತ ಕುಟುಂಬಗಳಿಗೆ ಹಂಚಿಕೆ ಮಾಡುವಂತೆ ಆಗ್ರಹಿಸಿರುವ ಕರ್ನಾಟಕ ದಲಿತ ಸಂಘರ್ಷ ಸಮಿತಿ,…
ಕಸಬಾ ಗ್ರಾಮದ ಕುರುಂಬಳ ನಿವಾಸಿ ಹಮೀದ್ ಅವರ ಮನೆಯಲ್ಲಿ ಭಾನುವಾರ ಬೆಳಗ್ಗೆ ಗ್ಯಾಸ್ ಸಿಲಿಂಡರ್ ಏಕಾಏಕಿ ಸ್ಫೋಟಗೊಂಡು ಮನೆ ಸಂಪೂರ್ಣ…
ತೊಕ್ಕೊಟ್ಟು ವಿನಮ್ರ ಬಾರ್ ಬಳಿ ತಲವಾರು ಬೀಸಿ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದ ಆರೋಪದ ಮೇಲೆ ರೌಡಿಶೀಟರ್ವೊಬ್ಬನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.…