ಜನ ಮನದ ನಾಡಿ ಮಿಡಿತ

Advertisement

ಚೈತ್ರಾ ಕುಂದಾಪುರ ಡೀಲ್‌ ಪ್ರಕರಣ; ʼಮಾಧ್ಯಮದ ವರದಿಗೆ ಸಾಲುಮರದ ತಿಮ್ಮಕ್ಕ ಗರಂ; ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ

ದಕ್ಷಿಣ ಕನ್ನಡ : ಭಾರಿ ಸುದ್ದಿಯಲ್ಲಿರುವ ಚೈತ್ರ ಕುಂದಾಪುರ ಗ್ಯಾಂಗ್   ವಂಚನೆ ಪ್ರಕರಣದಲ್ಲಿ ಸಾಲುಮರದ ತಿಮ್ಮಕ್ಕನ ಹೆಸರು ತಳಕು ಹಾಕಿಕೊಂಡಿರುವುದಕ್ಕೆ ಸಾಲುಮರದ ತಿಮ್ಮಕ್ಕ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ ̤

ಕುಟುಂಬದ ವಿರುದ್ಧ ವ್ಯವಸ್ಥಿತ ಷಡ್ಯಂತ್ರ ನಡೆಯುತ್ತಿದೆ ಎಂದ ಸಾಲುಮರದ ತಿಮ್ಮಕ್ಕ ಮಾಧ್ಯಮದಲ್ಲಿ  ಪ್ರಸಾರವಾದ ವರದಿ  ಆಧಾರ ರಹಿತ, ಅವಿವೇಕದ ವರದಿ ಎಂದು ಪ್ರತಿಭಟಿಸಿದ ಕುರಿತು ವರದಿಯಾಗಿದೆ.


ಈ ಸಂಬಂಧ ಮಾತನಾಡಿದ ಹಿರಿಯ ಜೀವಿ ಸಾಲುಮರದ ತಿಮ್ಮಕ್ಕ  ಅವರು, ವಂಚನೆ ಪ್ರಕರಣದಲ್ಲಿ ನನ್ನ ಹಾಗೂ ನನ್ನ ಕುಟುಂಬ ಸದಸ್ಯರ ಹೆಸರು ಬಳಸಿಕೊಂಡು ಸುಳ್ಳು ಸುದ್ದಿ ಹಬ್ಬಿಸಿ ತೇಜೋವಧೆ ಮಾಡಲಾಗಿದ್ದು, ಅಂತವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಪರಿಸರ ರಾಯಭಾರಿ ಸಾಲುಮರದ ತಿಮ್ಮಕ್ಕ,  ಪೊಲೀಸ್‌ ಕಮಿಷನರ್‌ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಿದರು ಎಂಬುದಾಗಿ  ಮೂಲಗಳಿಂದ ತಿಳಿದುಬಂದಿದೆ 


ಚೈತ್ರಾ ಕುಂದಾಪುರ ಹಾಗೂ ಗಗನ್‌ ಕಡೂರು ಅವರ ವಂಚನೆ ಪ್ರಕರಣದಲ್ಲಿ ಕಾನೂನು ಪ್ರಕ್ರಿಯೆಗಳು ನಡೆಯುತ್ತಿವೆ.   ಪ್ರಕರಣಕ್ಕೆ ತಳುಕು ಹಾಕಿ ಸುಳ್ಳು ಸುದ್ದಿ ಹಬ್ಬಿಸಲಾಗುತ್ತಿದೆ.  ಸಂಪೂರ್ಣ ಜೀವನವನ್ನೇ ನೆಲ, ಜಲ, ಪರಿಸರಕ್ಕೆ ಮೀಸಲಿಟ್ಟಿದ್ದೇನೆ. ಸರ್ಕಾರ ನೀಡಿದ ಸವಲತ್ತುಗಳನ್ನು ಬೇರೆಯವರಿಗೆ ನೀಡಿ ವಂಚನೆ ಮಾಡಲು ಅವಕಾಶ ಮಾಡಿಕೊಟ್ಟಿದ್ಧೇವೆ ಎಂದು ಸುದ್ದಿ ವಾಹಿನಿಯೊಂದು ವರದಿ ಪ್ರಸಾರ ಮಾಡಿದೆ.

ವರದಿ ಮಾಡಿದವರು ಸಾಕ್ಷ್ಯಗಳನ್ನು ನೀಡಲಿ. ಕಲ್ಪಿತ ವರದಿ ಮಾಡಿ ಗೌರವಕ್ಕೆ ಧಕ್ಕೆ ತರಲಾಗಿದೆ’, ವರದಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ, ಹಾಗೂ ವರದಿ ಮಾಡಿದವರು ಸಾಕ್ಷಿ ಒದಗಿಸುವಂತೆ  ಸಾಲುಮರದ ತಿಮ್ಮಕ್ಕ ಆಗ್ರಹಿಸಿದ್ದಾರೆ.

Leave a Reply

Your email address will not be published. Required fields are marked *

ಯುವತಿಯರನ್ನು ನಂಬಿಸಿ ಕೈಕೊಟ್ಟ ಭೂಪನೊಬ್ಬ ಪೊಲೀಸರ ಅತಿಥಿಯಾಗಿದ್ದಾನೆ…!

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

error: Content is protected !!