ಕರಾವಳಿ

2022-23 ನೇ ಸಾಲಿನಲ್ಲಿ ಸಿದ್ದಕಟ್ಟೆ ಸಹಕಾರಿ ವ್ಯವಸಾಯಿಕ ಸಂಘದಿಂದ ಒಟ್ಟು 376.85 ಕೋ.ರೂ.ವ್ಯವಹಾರ; 1.50 ಕೋ.ರೂ.ನಿವ್ವಳ ಲಾಭ….!!

ಬಂಟ್ವಾಳ: ಸಿದ್ದಕಟ್ಟೆ ಸಹಕಾರಿ ವ್ಯವಸಾಯಿಕ ಸಂಘ ನಿ.ವು 2022-23 ನೇ ಸಾಲಿನಲ್ಲಿ ಒಟ್ಟು 376.85 ಕೋ.ರೂ.ವ್ಯವಹಾರ ನಡೆಸಿ,1.50 ಕೋ.ರೂ.ನಿವ್ವಳ ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು‌ ಹೇಳಿದ್ದಾರೆ.


ಸಂಘದ ಕಚೇರಿ‌ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತಾನಾಡಿದ ಇವರು ,ಪ್ರಸಕ್ತ ಸಾಲಿನ ವರ್ಷಾಂತ್ಯಕ್ಕೆ ಸಂಘದಲ್ಲಿ 46.04 ಕೋ.ರೂ. ಠೇವಣಿ ಇದ್ದು,173.35 ಕೋ.ರೂ.ದುಡಿಯುವ ಬಂಡವಾಳ 81.74 ಕೋ.ರೂ.ಸಾಲ ಹೊರ ಬಾಕಿ ಇದ್ದು, 14.12 ಕೋ.ರೂ.ಹೂಡಿಕೆಯನ್ನು ಹೊಂದಿದೆ. ಶೇ.99 ಸಾಲ ವಸೂಲಾತಿಯನ್ನು ಮಾಡಿದೆ. 1947 ರಲ್ಲಿ ಆಗಿನ ಸಹಕಾರಿ ಬಂಧುಗಳ ಸಹಕಾರದಲ್ಲಿ ಬಿ. ಕೃಷ್ಣ ರೈ ಅವರ ಅಧ್ಯಕ್ಷತೆಯಲ್ಲಿ ಸ್ಥಾಪನೆಯಾದ ಸಿದ್ಧಕಟ್ಟೆ ಸಂಘವು ಪ್ರಸ್ತುತ ದಿನಗಳಲ್ಲಿ ಎಂಟು ಗ್ರಾಮಗಳ ವ್ಯಾಪ್ತಿಯಲ್ಲಿ ತೃಪ್ತಿಕರ ಸೇವೆಯನ್ನು ನೀಡುತ್ತಿದೆ. 2022-23 ನೇ ಸಾಲಿನಲ್ಲಿ ಉತ್ತಮ ಸಾಧನೆಗಾಗಿ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ವತಿಯಿಂದ ವಿಶೇಷ ಪ್ರೋತ್ಸಾಹಕ ಬಹುಮಾನ ಪಡೆದಿದ್ದೇವೆ. ಅಖಿಲ ಭಾರತ ಸಹಕಾರ ಸಪ್ತಾಹ -2022 ಅಂಗವಾಗಿ ದ.ಕ ಜಿಲ್ಲಾ ಸಹಕಾರ ಸಪ್ತಾಹದ ಉದ್ಘಾಟನಾ ಕಾರ್ಯಕ್ರಮವನ್ನು ಸಂಘದ ಅವರಣದಲ್ಲಿ ಯಶಸ್ವಿಯಾಗಿ ನಿರ್ವಹಿಸಿದ ಹೆಗ್ಗಳಿಕೆಗೂ ಪಾತ್ರವಾಗಿದೆ ಎಂದರು.

2022-23 ನೇ ಸಾಲಿನಲ್ಲಿ 1166 ರೈತರ 1551 ಎಕ್ರೆಗೆ 40 ಲಕ್ಷಕ್ಕೂ ಹೆಚ್ಚು ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಲ್ಲಿ ಪ್ರೀಮಿಯಂ ಪಾವತಿಸಲಾಗಿದೆ. ಅದೇ ರೀತಿ ಸಂಘದ ಮೂಲಕ 486 ಕುಟುಂಬಗಳು 2,29,680 ರೂ‌. ವಿಮಾ ಮೊತ್ತವನ್ನು ಪಾವತಿಸಿ ಯಶಸ್ವಿನಿ ವಿಮಾ ಯೋಜನೆಗೆ ನೋಂದಣಿಯಾಗಿವೆ.
ಸಂಘದ ಸದಸ್ಯರ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಯಲ್ಲಿ ಶೇ. 90 ಮತ್ತು ಅದಕ್ಕಿಂತ ಹೆಚ್ಚು ಅಂಕ ಗಳಿಸಿದ ಮಕ್ಕಳನ್ನು ಮಹಾಸಭೆಯಲ್ಲಿ ಪುರಸ್ಕಾರಿಸಲಾಗುತ್ತಿದೆ. ಎಂಎಸ್ ಸಿ ಯೋಜನೆಯಡಿ 58 ಲಕ್ಷ ರೂ. ವೆಚ್ಚದಲ್ಲಿ ನೇತಾಜಿ ಬಹುಪಯೋಗಿ ಸೇವಾ ಕೇಂದ್ರ,ಸಂಘದ ಸ್ಥಾಪಕಾಧ್ಯಕ್ಷರಾದ ಬಿ. ಕೃಷ್ಣ ರೈ ಅವರ ನೆನಪಿಗಾಗಿ “ಬೆಳ್ಳಿಪ್ಪಾಡಿ ಕೃಷ್ಣ ರೈ ಸಭಾಂಗಣ” ವನ್ನು ನಿರ್ಮಿಸಲಾಗಿದೆ. ಸಂಘದ ಅಮೃತಮಹೋತ್ಸವ ಹಾಗೂ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವ ಪ್ರಯುಕ್ತ ಸ್ವಾತಂತ್ರ್ಯ ಹೋರಾಟಗಾರ “ವೀರ ಸಾರ್ವಕರ್ ” ವಾಣಿಜ್ಯ ಸಂಕಿರ್ಣ ನಿರ್ಮಿಸಲಾಗಿದೆ ಎಂದರು.

ಈ ವೇಳೆ ಸಂಘದ ವಾರ್ಷಿಕ ಮಹಾಸಭೆಯು ಸೆ.23 ರಂದು ಬೆಳಿಗ್ಗೆ 10.00 ಕ್ಕೆ ಶನಿವಾರ ಸಂಘದ ‘ಬೆಳ್ಳಿಪ್ಪಾಡಿ ಕೃಷ್ಣ ರೈ ಸಭಾಂಗಣ’ದಲ್ಲಿ ಜರಗಲಿದ್ದು, ಸಂಘದ ಎಲ್ಲಾ ಸದಸ್ಯರು ಮಹಾಸಭೆಗೆ ಹಾಜರಾಗುವಂತೆ ವಿನಂತಿಸಿಕೊಂಡಿದ್ದಾರೆ.

ಇನ್ನೂ ಈ ಸಂದರ್ಭದಲ್ಲಿ ನಿರ್ದೇಶಕರಾದ ರಾಜೇಶ್ ಶೆಟ್ಟಿ ಕೊನೆರಬೆಟ್ಟು, ಸಂದೇಶ್ ಶೆಟ್ಟಿ ಪೊಡಂಬು, ದಿನೇಶ್ ಪೂಜಾರಿ ಹುಲಿಮರು, ವೀರಪ್ಪ, ವರವ , ಜಾರಪ್ಪ ನಾಯ್ಕ, ಉಮೇಶ್ ಗೌಡ, ದೇವರಾಜ್ ಸಾಲ್ಯಾನ್, ಹರೀಶ್ ಆಚಾರ್ಯ, ಅರುಣಾ ಎಸ್.ಶೆಟ್ಟಿ, ಮಂದಾರತಿ ಎಸ್ . ಶೆಟ್ಟಿ ಪ್ರತಿಪರ ನಿರ್ದೇಶಕರಾದ ಮಾಧವ ಶೆಟ್ಟಿಗಾರ್, ಮುಖ್ಯಕಾರ್ಯ ನಿರ್ವಾಹಣಾಧಿಕಾರಿ ಆರತಿ ಶೆಟ್ಟಿ ಉಪಸ್ಥಿತರಿದ್ದರು

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…

9 mins ago

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…

12 mins ago

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…

17 mins ago

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್‌ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…

6 hours ago

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…

6 hours ago

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…

1 day ago