ಬಂಟ್ವಾಳ: ಬಂಟ್ವಾಳ ನಗರ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ಆಗಿ ಆನಂತಪದ್ಮನಾಭ ಅವರು ಇಂದು ಮಧ್ಯಾಹ್ನ ವೇಳೆ ಕರ್ತವ್ಯಕ್ಕೆ ಹಾಜರಾಗಿದ್ದಾರೆ.
ಪ್ರಭಾರ ಇನ್ಸ್ ಪೆಕ್ಟರ್ ನಾಗರಾಜ್ ಎಚ್.ಇ. ಅವರು ಪುಷ್ಪಗುಚ್ಚ ನೀಡಿ ಸ್ವಾಗತಿಸಿದ್ರು. ವಿವೇಕಾನಂದ ಅವರು ವರ್ಗಾವಣೆ ಆದ ಬಳಿಕ ಖಾಲಿಯಾಗಿದ್ದ ನಗರ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಆಗಿ ಕದ್ರಿ ಪೊಲೀಸ್ ಠಾಣೆಯಲ್ಲಿ ಇನ್ಸ್ ಪೆಕ್ಟರ್ ಆಗಿ ಕರ್ತವ್ಯದಲ್ಲಿದ್ದು, ಲೋಕಾಯುಕ್ತ ಇಲಾಖೆಗೆ ವರ್ಗಾವಣೆಗೊಂಡಿದ್ದ ಆನಂತಪದ್ಮನಾಭ ಅವರನ್ನು ಬಂಟ್ವಾಳ ನಗರ ಪೊಲೀಸ್ ಠಾಣೆಯ ಪೋಲೀಸ್ ಇನ್ಸ್ ಪೆಕ್ಟರ್ ಆಗಿ ಕರ್ತವ್ಯಕ್ಕೆ ಹಾಜರಾಗುವಂತೆ ಸರಕಾರ ಅದೇಶ ಮಾಡಿತ್ತು.
ಕಳೆದ ವಾರ ಇವರನ್ನು ಕರ್ತವ್ಯಕ್ಕೆ ಹಾಜರಾಗುವಂತೆ ಸೂಚನೆ ನೀಡಿತ್ತಾದರೂ ಅನಾರೋಗ್ಯದ ಕಾರಣ ಇವರು ಇಂದು ಠಾಣೆಯಲ್ಲಿ ಚಾರ್ಜ್ ತೆಗೆದುಕೊಂಡರು. ಕದ್ರಿ ಪೋಲಿಸ್ ಠಾಣೆಯಲ್ಲಿ ಉತ್ತಮ ಅಧಿಕಾರಿ ಎಂದು ಹೆಸರು ಗಳಿಸಿದ್ದ ಇವರು ಕೋಮು ಸೂಕ್ಷ್ಮವಾದ ಬಂಟ್ವಾಳಕ್ಕೆ ಬರಲು ಹಿಂದೇಟು ಹಾಕಿದ್ದರು ಎನ್ನಲಾಗಿದೆ.
ರಾಜಕೀಯವಾಗಿ ಬಲಾಡ್ಯವಾದ ಮತ್ತು ಸೂಕ್ಷ್ಮ ಪ್ರದೇಶವಾಗಿ ಹೆಸರು ಗಳಿಸಿರುವ ಬಂಟ್ವಾಳಕ್ಕೆ ಅಧಿಕಾರಿಗಳು ಬರಲು ಒಪ್ಪುವುದಿಲ್ಲ ಎಂಬ ಮಾತುಗಳು ಈ ಹಿಂದೆ ಕೇಳಿ ಬಂದಿತ್ತು. ಆದರೆ ಕಳೆದ ಐದು ವರ್ಷಗಳಿಂದ ಶಾಂತಿಯ ಬಂಟ್ವಾಳವಾಗಿ ಮಾರ್ಪಾಡು ಹೊಂದಿದ್ದು, ನಿಷ್ಠಾವಂತ ಅಧಿಕಾರಿಗಳ ಸೇವೆ ಕೂಡ ನೆನಪಿಸಬೇಕಾಗುತ್ತದೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…