ಬಂಟ್ವಾಳ: ಬಂಟ್ವಾಳ ನಗರ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ಆಗಿ ಆನಂತಪದ್ಮನಾಭ ಅವರು ಇಂದು ಮಧ್ಯಾಹ್ನ ವೇಳೆ ಕರ್ತವ್ಯಕ್ಕೆ ಹಾಜರಾಗಿದ್ದಾರೆ.
ಪ್ರಭಾರ ಇನ್ಸ್ ಪೆಕ್ಟರ್ ನಾಗರಾಜ್ ಎಚ್.ಇ. ಅವರು ಪುಷ್ಪಗುಚ್ಚ ನೀಡಿ ಸ್ವಾಗತಿಸಿದ್ರು. ವಿವೇಕಾನಂದ ಅವರು ವರ್ಗಾವಣೆ ಆದ ಬಳಿಕ ಖಾಲಿಯಾಗಿದ್ದ ನಗರ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಆಗಿ ಕದ್ರಿ ಪೊಲೀಸ್ ಠಾಣೆಯಲ್ಲಿ ಇನ್ಸ್ ಪೆಕ್ಟರ್ ಆಗಿ ಕರ್ತವ್ಯದಲ್ಲಿದ್ದು, ಲೋಕಾಯುಕ್ತ ಇಲಾಖೆಗೆ ವರ್ಗಾವಣೆಗೊಂಡಿದ್ದ ಆನಂತಪದ್ಮನಾಭ ಅವರನ್ನು ಬಂಟ್ವಾಳ ನಗರ ಪೊಲೀಸ್ ಠಾಣೆಯ ಪೋಲೀಸ್ ಇನ್ಸ್ ಪೆಕ್ಟರ್ ಆಗಿ ಕರ್ತವ್ಯಕ್ಕೆ ಹಾಜರಾಗುವಂತೆ ಸರಕಾರ ಅದೇಶ ಮಾಡಿತ್ತು.
ಕಳೆದ ವಾರ ಇವರನ್ನು ಕರ್ತವ್ಯಕ್ಕೆ ಹಾಜರಾಗುವಂತೆ ಸೂಚನೆ ನೀಡಿತ್ತಾದರೂ ಅನಾರೋಗ್ಯದ ಕಾರಣ ಇವರು ಇಂದು ಠಾಣೆಯಲ್ಲಿ ಚಾರ್ಜ್ ತೆಗೆದುಕೊಂಡರು. ಕದ್ರಿ ಪೋಲಿಸ್ ಠಾಣೆಯಲ್ಲಿ ಉತ್ತಮ ಅಧಿಕಾರಿ ಎಂದು ಹೆಸರು ಗಳಿಸಿದ್ದ ಇವರು ಕೋಮು ಸೂಕ್ಷ್ಮವಾದ ಬಂಟ್ವಾಳಕ್ಕೆ ಬರಲು ಹಿಂದೇಟು ಹಾಕಿದ್ದರು ಎನ್ನಲಾಗಿದೆ.
ರಾಜಕೀಯವಾಗಿ ಬಲಾಡ್ಯವಾದ ಮತ್ತು ಸೂಕ್ಷ್ಮ ಪ್ರದೇಶವಾಗಿ ಹೆಸರು ಗಳಿಸಿರುವ ಬಂಟ್ವಾಳಕ್ಕೆ ಅಧಿಕಾರಿಗಳು ಬರಲು ಒಪ್ಪುವುದಿಲ್ಲ ಎಂಬ ಮಾತುಗಳು ಈ ಹಿಂದೆ ಕೇಳಿ ಬಂದಿತ್ತು. ಆದರೆ ಕಳೆದ ಐದು ವರ್ಷಗಳಿಂದ ಶಾಂತಿಯ ಬಂಟ್ವಾಳವಾಗಿ ಮಾರ್ಪಾಡು ಹೊಂದಿದ್ದು, ನಿಷ್ಠಾವಂತ ಅಧಿಕಾರಿಗಳ ಸೇವೆ ಕೂಡ ನೆನಪಿಸಬೇಕಾಗುತ್ತದೆ.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…