ಜನ ಮನದ ನಾಡಿ ಮಿಡಿತ

Advertisement

ಬೆಂಗಳೂರು ಕಂಬಳ: ಅರಮನೆ ಮೈದಾನದಲ್ಲಿ ಕರೆ ವೀಕ್ಷಣೆ ಮಾಡಿದ ಪುತ್ತೂರು ಶಾಸಕರು

ಪುತ್ತೂರು: ನವೆಂಬರ್ ತಿಂಗಳಿನಲ್ಲಿ ಬೆಂಗಳೂರಿನಲ್ಲಿ ನಡೆಯಲಿರುವ ಕಂಬಳಕ್ಕೆ ಈಗಾಗಲೇ ಸಿದ್ದತೆಗಳು ಆರಂಭಗೊಂಡಿದ್ದು,ಶಾಸಕರಾದ ಅಶೋಕ್ ರೈ ನೇತೃತ್ವದ ನಿಯೋಗ ಅರಮನೆ ಮೈದಾನದಲ್ಲಿ ಕರೆ ನಿರ್ಮಾಣ ಮಾಡಬೇಕಾದ ಸ್ಥಳವನ್ನು ವೀಕ್ಷಣೆ ಮಾಡಿದರು.


ತುಳುನಾಡಿನ ಜನಪದ ಕಲೆಯಾದ ಕಂಬಳವು ಈಬಾರಿ ಬೆಂಗಳೂರಿನಲ್ಲಿ ಮೊದಲ ಬಾರಿಗೆ ಆಯೋಜನೆ ಮಾಡಲಾಗಿದ್ದು, ಬೆಂಗಳೂರು ಜನತೆ ಸೇರಿದಂತೆ ಬೆಂಗಳೂರಿನಲ್ಲಿರುವ ವಿವಿಧ ರಾಜ್ಯಗಳ ಜನತೆ , ವಿದೇಶಿಯರು ಈ ಬಾರಿ ಕಂಬಳವನ್ನು ಕಣ್ತುಂಬಿಕೊಳ್ಳಲಿದ್ದಾರೆ. ಕಂಬಳ ಉಳಿವಿಗಾಗಿ ಸುಪ್ರಿಂಕೋರ್ಟು ಮೆಟ್ಟಿಲೇರಿ ಯಶಸ್ವಿಯಾದ ಅಶೋಕ್ ರೈಗಳು ಈ ಬಾರಿ ರಾಜ್ಯದ ರಾಜಧಾನಿಯಲ್ಲೇ ಕಂಬಳವನ್ನು ಆಯೋಜನೆ ಮಾಡುವ ಮೂಲಕ ತುಳುನಾಡಿನ ಜನಪದ ಕಲೆಯನ್ನು ಜಗತ್ತಿಗೆ ಪರಿಚಯಿಸಲು ಮುಂದಾಗಿದ್ದಾರೆ.


ಕಂಬಳದ ಕರೆ ನಿರ್ಮಾಣಕ್ಕಾಗಿ ಸ್ಥಳವನ್ನು ಗುರುತಿಸುವ ಕಾರ್ಯ ಪೂರ್ಣಗೊಂಡಿದ್ದು ಮುಂದಿನ ವಾರ ಕರೆ ನಿರ್ಮಾಣ ಕಾರ್ಯ ನಡೆಯಲಿದೆ ಎಂದು ಶಾಸಕರು ತಿಳಿಸಿದ್ದಾರೆ.


ಈ ಸಂದರ್ಭದಲ್ಲಿ ಖ್ಯಾತ ಸಂಗೀತ ನಿರ್ದೇಶಕರಾದ ಗುರುಕಿರಣ್, ಬೆಂಗಳೂರು ತುಳು ಒಕ್ಕೂಟದ ಅಧ್ಯಕ್ಷರಾದ ಸುಂದರ್‌ರಾಜ್ ರೈ, ಉದ್ಯಮಿಗಳಾದ ಗುಣರಂಜನ್ ಶೆಟ್ಟಿ, ಬೆಂಗಳೂರು ಲಿಕ್ಕರ್ ಎಸೋಶಿಯೇಶನ್ ಉಪಾಧ್ಯಕ್ಷರಾದ ಕರುಣಾಕರ್ ಹೆಗ್ಡೆ, ಅಕ್ಷಯರೈ ದಂಬೆಕಾನ, ಉಮಾನಾಥ ಶೆಟ್ಟಿ ಪೆರ್ನೆ, ಮುರಳೀಧರ್ ರೈ ಮಠಂತಬೆಟ್ಟು, ರಾಜ್‌ಕುಮಾರ್ ರೈ, ರಾಕೇಶ್ ರೈ , ಪ್ರಶಾಂತ್ ರೈ ಕೈಕಾರ, ಮಂಜುನಾಥ ಕನ್ಯಾಡಿ, ಕರುಣಾಕರ ಸಾಮಾನಿ, ಶರತ್ , ರಾಜೇಶ್ ಶೆಟ್ಟಿ ಕೋಡಿಂಬಾಡಿ, ಯತೀಶ್ ಕನಕಪುರ, ಆದರ್ಶ ಶೆಟ್ಟಿ, ಅಶ್ವಿನ್ ಪೂಜಾರಿ , ದೀಕ್ಷಿತ್ ಮೊದಲಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!