ಜನ ಮನದ ನಾಡಿ ಮಿಡಿತ

Advertisement

ಬೆಂಗಳೂರು ಕಂಬಳ: ಅರಮನೆ ಮೈದಾನದಲ್ಲಿ ಕರೆ ವೀಕ್ಷಣೆ ಮಾಡಿದ ಪುತ್ತೂರು ಶಾಸಕರು

ಪುತ್ತೂರು: ನವೆಂಬರ್ ತಿಂಗಳಿನಲ್ಲಿ ಬೆಂಗಳೂರಿನಲ್ಲಿ ನಡೆಯಲಿರುವ ಕಂಬಳಕ್ಕೆ ಈಗಾಗಲೇ ಸಿದ್ದತೆಗಳು ಆರಂಭಗೊಂಡಿದ್ದು,ಶಾಸಕರಾದ ಅಶೋಕ್ ರೈ ನೇತೃತ್ವದ ನಿಯೋಗ ಅರಮನೆ ಮೈದಾನದಲ್ಲಿ ಕರೆ ನಿರ್ಮಾಣ ಮಾಡಬೇಕಾದ ಸ್ಥಳವನ್ನು ವೀಕ್ಷಣೆ ಮಾಡಿದರು.


ತುಳುನಾಡಿನ ಜನಪದ ಕಲೆಯಾದ ಕಂಬಳವು ಈಬಾರಿ ಬೆಂಗಳೂರಿನಲ್ಲಿ ಮೊದಲ ಬಾರಿಗೆ ಆಯೋಜನೆ ಮಾಡಲಾಗಿದ್ದು, ಬೆಂಗಳೂರು ಜನತೆ ಸೇರಿದಂತೆ ಬೆಂಗಳೂರಿನಲ್ಲಿರುವ ವಿವಿಧ ರಾಜ್ಯಗಳ ಜನತೆ , ವಿದೇಶಿಯರು ಈ ಬಾರಿ ಕಂಬಳವನ್ನು ಕಣ್ತುಂಬಿಕೊಳ್ಳಲಿದ್ದಾರೆ. ಕಂಬಳ ಉಳಿವಿಗಾಗಿ ಸುಪ್ರಿಂಕೋರ್ಟು ಮೆಟ್ಟಿಲೇರಿ ಯಶಸ್ವಿಯಾದ ಅಶೋಕ್ ರೈಗಳು ಈ ಬಾರಿ ರಾಜ್ಯದ ರಾಜಧಾನಿಯಲ್ಲೇ ಕಂಬಳವನ್ನು ಆಯೋಜನೆ ಮಾಡುವ ಮೂಲಕ ತುಳುನಾಡಿನ ಜನಪದ ಕಲೆಯನ್ನು ಜಗತ್ತಿಗೆ ಪರಿಚಯಿಸಲು ಮುಂದಾಗಿದ್ದಾರೆ.


ಕಂಬಳದ ಕರೆ ನಿರ್ಮಾಣಕ್ಕಾಗಿ ಸ್ಥಳವನ್ನು ಗುರುತಿಸುವ ಕಾರ್ಯ ಪೂರ್ಣಗೊಂಡಿದ್ದು ಮುಂದಿನ ವಾರ ಕರೆ ನಿರ್ಮಾಣ ಕಾರ್ಯ ನಡೆಯಲಿದೆ ಎಂದು ಶಾಸಕರು ತಿಳಿಸಿದ್ದಾರೆ.


ಈ ಸಂದರ್ಭದಲ್ಲಿ ಖ್ಯಾತ ಸಂಗೀತ ನಿರ್ದೇಶಕರಾದ ಗುರುಕಿರಣ್, ಬೆಂಗಳೂರು ತುಳು ಒಕ್ಕೂಟದ ಅಧ್ಯಕ್ಷರಾದ ಸುಂದರ್‌ರಾಜ್ ರೈ, ಉದ್ಯಮಿಗಳಾದ ಗುಣರಂಜನ್ ಶೆಟ್ಟಿ, ಬೆಂಗಳೂರು ಲಿಕ್ಕರ್ ಎಸೋಶಿಯೇಶನ್ ಉಪಾಧ್ಯಕ್ಷರಾದ ಕರುಣಾಕರ್ ಹೆಗ್ಡೆ, ಅಕ್ಷಯರೈ ದಂಬೆಕಾನ, ಉಮಾನಾಥ ಶೆಟ್ಟಿ ಪೆರ್ನೆ, ಮುರಳೀಧರ್ ರೈ ಮಠಂತಬೆಟ್ಟು, ರಾಜ್‌ಕುಮಾರ್ ರೈ, ರಾಕೇಶ್ ರೈ , ಪ್ರಶಾಂತ್ ರೈ ಕೈಕಾರ, ಮಂಜುನಾಥ ಕನ್ಯಾಡಿ, ಕರುಣಾಕರ ಸಾಮಾನಿ, ಶರತ್ , ರಾಜೇಶ್ ಶೆಟ್ಟಿ ಕೋಡಿಂಬಾಡಿ, ಯತೀಶ್ ಕನಕಪುರ, ಆದರ್ಶ ಶೆಟ್ಟಿ, ಅಶ್ವಿನ್ ಪೂಜಾರಿ , ದೀಕ್ಷಿತ್ ಮೊದಲಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!