ಪುತ್ತೂರು: ನವೆಂಬರ್ ತಿಂಗಳಿನಲ್ಲಿ ಬೆಂಗಳೂರಿನಲ್ಲಿ ನಡೆಯಲಿರುವ ಕಂಬಳಕ್ಕೆ ಈಗಾಗಲೇ ಸಿದ್ದತೆಗಳು ಆರಂಭಗೊಂಡಿದ್ದು,ಶಾಸಕರಾದ ಅಶೋಕ್ ರೈ ನೇತೃತ್ವದ ನಿಯೋಗ ಅರಮನೆ ಮೈದಾನದಲ್ಲಿ ಕರೆ ನಿರ್ಮಾಣ ಮಾಡಬೇಕಾದ ಸ್ಥಳವನ್ನು ವೀಕ್ಷಣೆ ಮಾಡಿದರು.
ತುಳುನಾಡಿನ ಜನಪದ ಕಲೆಯಾದ ಕಂಬಳವು ಈಬಾರಿ ಬೆಂಗಳೂರಿನಲ್ಲಿ ಮೊದಲ ಬಾರಿಗೆ ಆಯೋಜನೆ ಮಾಡಲಾಗಿದ್ದು, ಬೆಂಗಳೂರು ಜನತೆ ಸೇರಿದಂತೆ ಬೆಂಗಳೂರಿನಲ್ಲಿರುವ ವಿವಿಧ ರಾಜ್ಯಗಳ ಜನತೆ , ವಿದೇಶಿಯರು ಈ ಬಾರಿ ಕಂಬಳವನ್ನು ಕಣ್ತುಂಬಿಕೊಳ್ಳಲಿದ್ದಾರೆ. ಕಂಬಳ ಉಳಿವಿಗಾಗಿ ಸುಪ್ರಿಂಕೋರ್ಟು ಮೆಟ್ಟಿಲೇರಿ ಯಶಸ್ವಿಯಾದ ಅಶೋಕ್ ರೈಗಳು ಈ ಬಾರಿ ರಾಜ್ಯದ ರಾಜಧಾನಿಯಲ್ಲೇ ಕಂಬಳವನ್ನು ಆಯೋಜನೆ ಮಾಡುವ ಮೂಲಕ ತುಳುನಾಡಿನ ಜನಪದ ಕಲೆಯನ್ನು ಜಗತ್ತಿಗೆ ಪರಿಚಯಿಸಲು ಮುಂದಾಗಿದ್ದಾರೆ.
ಕಂಬಳದ ಕರೆ ನಿರ್ಮಾಣಕ್ಕಾಗಿ ಸ್ಥಳವನ್ನು ಗುರುತಿಸುವ ಕಾರ್ಯ ಪೂರ್ಣಗೊಂಡಿದ್ದು ಮುಂದಿನ ವಾರ ಕರೆ ನಿರ್ಮಾಣ ಕಾರ್ಯ ನಡೆಯಲಿದೆ ಎಂದು ಶಾಸಕರು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಖ್ಯಾತ ಸಂಗೀತ ನಿರ್ದೇಶಕರಾದ ಗುರುಕಿರಣ್, ಬೆಂಗಳೂರು ತುಳು ಒಕ್ಕೂಟದ ಅಧ್ಯಕ್ಷರಾದ ಸುಂದರ್ರಾಜ್ ರೈ, ಉದ್ಯಮಿಗಳಾದ ಗುಣರಂಜನ್ ಶೆಟ್ಟಿ, ಬೆಂಗಳೂರು ಲಿಕ್ಕರ್ ಎಸೋಶಿಯೇಶನ್ ಉಪಾಧ್ಯಕ್ಷರಾದ ಕರುಣಾಕರ್ ಹೆಗ್ಡೆ, ಅಕ್ಷಯರೈ ದಂಬೆಕಾನ, ಉಮಾನಾಥ ಶೆಟ್ಟಿ ಪೆರ್ನೆ, ಮುರಳೀಧರ್ ರೈ ಮಠಂತಬೆಟ್ಟು, ರಾಜ್ಕುಮಾರ್ ರೈ, ರಾಕೇಶ್ ರೈ , ಪ್ರಶಾಂತ್ ರೈ ಕೈಕಾರ, ಮಂಜುನಾಥ ಕನ್ಯಾಡಿ, ಕರುಣಾಕರ ಸಾಮಾನಿ, ಶರತ್ , ರಾಜೇಶ್ ಶೆಟ್ಟಿ ಕೋಡಿಂಬಾಡಿ, ಯತೀಶ್ ಕನಕಪುರ, ಆದರ್ಶ ಶೆಟ್ಟಿ, ಅಶ್ವಿನ್ ಪೂಜಾರಿ , ದೀಕ್ಷಿತ್ ಮೊದಲಾದವರು ಉಪಸ್ಥಿತರಿದ್ದರು.
ಮಂಗಳೂರು ಮುಂಬೈ, ಉಡುಪಿ, ಬೆಂಗಳೂರು, ಕಾರ್ಕಳದಲ್ಲಿ ಯುವತಿಯರನ್ನು ನಂಬಿಸಿ ಕೈಕೊಟ್ಟ ಭೂಪನೊಬ್ಬ ಪೊಲೀಸರ ಅತಿಥಿಯಾಗಿದ್ದಾನೆ. ಮ್ಯಾಟ್ರಿಮನಿ ಸೈಟ್ನಲ್ಲಿ ನಂಬಿಸಿ ಉಂಡೂ…
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…