ಪುತ್ತೂರು: ನವೆಂಬರ್ ತಿಂಗಳಿನಲ್ಲಿ ಬೆಂಗಳೂರಿನಲ್ಲಿ ನಡೆಯಲಿರುವ ಕಂಬಳಕ್ಕೆ ಈಗಾಗಲೇ ಸಿದ್ದತೆಗಳು ಆರಂಭಗೊಂಡಿದ್ದು,ಶಾಸಕರಾದ ಅಶೋಕ್ ರೈ ನೇತೃತ್ವದ ನಿಯೋಗ ಅರಮನೆ ಮೈದಾನದಲ್ಲಿ ಕರೆ ನಿರ್ಮಾಣ ಮಾಡಬೇಕಾದ ಸ್ಥಳವನ್ನು ವೀಕ್ಷಣೆ ಮಾಡಿದರು.
ತುಳುನಾಡಿನ ಜನಪದ ಕಲೆಯಾದ ಕಂಬಳವು ಈಬಾರಿ ಬೆಂಗಳೂರಿನಲ್ಲಿ ಮೊದಲ ಬಾರಿಗೆ ಆಯೋಜನೆ ಮಾಡಲಾಗಿದ್ದು, ಬೆಂಗಳೂರು ಜನತೆ ಸೇರಿದಂತೆ ಬೆಂಗಳೂರಿನಲ್ಲಿರುವ ವಿವಿಧ ರಾಜ್ಯಗಳ ಜನತೆ , ವಿದೇಶಿಯರು ಈ ಬಾರಿ ಕಂಬಳವನ್ನು ಕಣ್ತುಂಬಿಕೊಳ್ಳಲಿದ್ದಾರೆ. ಕಂಬಳ ಉಳಿವಿಗಾಗಿ ಸುಪ್ರಿಂಕೋರ್ಟು ಮೆಟ್ಟಿಲೇರಿ ಯಶಸ್ವಿಯಾದ ಅಶೋಕ್ ರೈಗಳು ಈ ಬಾರಿ ರಾಜ್ಯದ ರಾಜಧಾನಿಯಲ್ಲೇ ಕಂಬಳವನ್ನು ಆಯೋಜನೆ ಮಾಡುವ ಮೂಲಕ ತುಳುನಾಡಿನ ಜನಪದ ಕಲೆಯನ್ನು ಜಗತ್ತಿಗೆ ಪರಿಚಯಿಸಲು ಮುಂದಾಗಿದ್ದಾರೆ.
ಕಂಬಳದ ಕರೆ ನಿರ್ಮಾಣಕ್ಕಾಗಿ ಸ್ಥಳವನ್ನು ಗುರುತಿಸುವ ಕಾರ್ಯ ಪೂರ್ಣಗೊಂಡಿದ್ದು ಮುಂದಿನ ವಾರ ಕರೆ ನಿರ್ಮಾಣ ಕಾರ್ಯ ನಡೆಯಲಿದೆ ಎಂದು ಶಾಸಕರು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಖ್ಯಾತ ಸಂಗೀತ ನಿರ್ದೇಶಕರಾದ ಗುರುಕಿರಣ್, ಬೆಂಗಳೂರು ತುಳು ಒಕ್ಕೂಟದ ಅಧ್ಯಕ್ಷರಾದ ಸುಂದರ್ರಾಜ್ ರೈ, ಉದ್ಯಮಿಗಳಾದ ಗುಣರಂಜನ್ ಶೆಟ್ಟಿ, ಬೆಂಗಳೂರು ಲಿಕ್ಕರ್ ಎಸೋಶಿಯೇಶನ್ ಉಪಾಧ್ಯಕ್ಷರಾದ ಕರುಣಾಕರ್ ಹೆಗ್ಡೆ, ಅಕ್ಷಯರೈ ದಂಬೆಕಾನ, ಉಮಾನಾಥ ಶೆಟ್ಟಿ ಪೆರ್ನೆ, ಮುರಳೀಧರ್ ರೈ ಮಠಂತಬೆಟ್ಟು, ರಾಜ್ಕುಮಾರ್ ರೈ, ರಾಕೇಶ್ ರೈ , ಪ್ರಶಾಂತ್ ರೈ ಕೈಕಾರ, ಮಂಜುನಾಥ ಕನ್ಯಾಡಿ, ಕರುಣಾಕರ ಸಾಮಾನಿ, ಶರತ್ , ರಾಜೇಶ್ ಶೆಟ್ಟಿ ಕೋಡಿಂಬಾಡಿ, ಯತೀಶ್ ಕನಕಪುರ, ಆದರ್ಶ ಶೆಟ್ಟಿ, ಅಶ್ವಿನ್ ಪೂಜಾರಿ , ದೀಕ್ಷಿತ್ ಮೊದಲಾದವರು ಉಪಸ್ಥಿತರಿದ್ದರು.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…