ಕರಾವಳಿ

ಕಲ್ಲಬೆಟ್ಟು ಗಣೇಶೋತ್ಸವದಲ್ಲಿ ಧನಸಂಗ್ರಹ ಮಾಡಿ ಅನಾರೋಗ್ಯ ಪೀಡಿತೆಗೆ ನೆರವು ನೀಡಿದ ವಿದ್ಯಾರ್ಥಿನಿಯರು

ಮೂಡುಬಿದಿರೆ: ಕಲ್ಲಬೆಟ್ಟುವಿನಲ್ಲಿ ನಡೆದ ಸಾರ್ವಜನಿಕ ಗಣೇಶೋತ್ಸವದಲ್ಲಿ ನಾಲ್ವರು ವಿದ್ಯಾರ್ಥಿನಿಯರು ಸೇರಿ ಆನಾರೋಗ್ಯ ಪೀಡಿತೆಯೋರ್ವರ ಚಿಕಿತ್ಸೆಗಾಗಿ ಧನ ಸಂಗ್ರಹ ಮಾಡಿ ಹಸ್ತಾಂತರ ಮಾಡಿ ಊರವರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.


ತಾಲೂಕಿನ ಕಲ್ಲಬೆಟ್ಟು ಗ್ರಾಮದ ನಿವಾಸಿಗಳಾದ ಮಹಾವೀರ ಕಾಲೇಜಿನ ವಿದ್ಯಾರ್ಥಿನಿಯರಾದ ತುಷಾರ, ಅನೂಷಾ, ತುಷಿತಾ ಹಾಗೂ ಪ್ರತಿಕ್ಷಾ ಎಂಬ ವಿದ್ಯಾರ್ಥಿಯರು ಅನಾರೋಗ್ಯ ಪೀಡಿತೆಯ ಚಿಕಿತ್ಸೆಯ ನೆರವಿಗೆ ಸ್ಪಂದಿಸಿದವರು. ಕಲ್ಲಬೆಟ್ಟುವಿನಲ್ಲಿ ನಡೆದ ಗಣೇಶೋತ್ಸವದ ವಿಸರ್ಜನಾ ಮೆರವಣಿಗೆಯ ಸಂದರ್ಭದಲ್ಲಿ ಈ ನಾಲ್ವರು ವಿದ್ಯಾರ್ಥಿಗಳು ಭಕ್ತರಲ್ಲಿಗೆ ಧನ ಸಂಗ್ರಹದ ಬಾಕ್ಸ್ ಗಳನ್ನು ಹಿಡಿದುಕೊಂಡು
ಹೋಗಿ ಸುಮಾರು 11,116 ರೂವನ್ನು ಸಂಗ್ರಹಿಸಿದ್ದು, ಇದನ್ನು ಕಲ್ಲಬೆಟ್ಟುವಿನ ಕಮಲಾಕ್ಷಿ ಅವರ ಚಿಕಿತ್ಸೆಗಾಗಿ ನೀಡಿದ್ದಾರೆ.


ಕೂಲಿ ಕಾರ್ಮಿಕೆಯಾಗಿರುವ ಕಮಲಾಕ್ಷಿ ಅವರು ಕಲ್ಲಬೆಟ್ಟು ಮಹಮ್ಮಾಯಿ ದೇವಸ್ಥಾನ ಶುಚಿತ್ವಗೊಳಿಸುವ ಕೆಲಸವನ್ನು ನಿರ್ವಹಿಸುತ್ತಿದ್ದರು. ಆದರೆ ಕೆಲವು ದಿನಗಳ ಹಿಂದೆ ಅವರು ರಕ್ತದೊತ್ತಡದ ಸಮಸ್ಯೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿ ತುರ್ತು ಚಿಕಿತ್ಸೆಯನ್ನು ಪಡೆದುಕೊಂಡು
ನಂತರ ಆಸ್ಪತ್ರೆಯಿಂದ ಮನೆಗೆ ಮರಳಿದ್ದರು. ಅವರ ಪತಿಯೂ ಕೂಲಿಕಾರ್ಮಿಕರಾಗಿದ್ದು, ಬಡಕುಟುಂಬದವರಾಗಿರುವ ಇವರ ಸ್ಥಿತಿಯನ್ನು ಕಂಡ ವಿದ್ಯಾರ್ಥಿನಿಯರು ಧನ ಸಂಗ್ರಹ ಮಾಡಿ ಚಿಕಿತ್ಸೆಯ ನೆರವಿಗೆ ಸ್ಪಂದಿಸುತ್ತ ಈ ಕಾರ್ಯವನ್ನು ಕೈಗೊಂಡಿದ್ದರು. ಅದರಂತೆ ಸಂಗ್ರಹವಾಗಿರುವ ಧನವನ್ನು ಕಮಲಾಕ್ಷಿ ಅವರ ಮನೆಗೆ ತೆರಳಿ ಹಸ್ತಾಂತರಿಸುವ ಮೂಲಕ ಗಮನ ಸೆಳೆದಿದ್ದಾರೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಯುವತಿಯರನ್ನು ನಂಬಿಸಿ ಕೈಕೊಟ್ಟ ಭೂಪನೊಬ್ಬ ಪೊಲೀಸರ ಅತಿಥಿಯಾಗಿದ್ದಾನೆ…!

ಮಂಗಳೂರು ಮುಂಬೈ, ಉಡುಪಿ, ಬೆಂಗಳೂರು, ಕಾರ್ಕಳದಲ್ಲಿ ಯುವತಿಯರನ್ನು ನಂಬಿಸಿ ಕೈಕೊಟ್ಟ ಭೂಪನೊಬ್ಬ ಪೊಲೀಸರ ಅತಿಥಿಯಾಗಿದ್ದಾನೆ. ಮ್ಯಾಟ್ರಿಮನಿ ಸೈಟ್‌ನಲ್ಲಿ ನಂಬಿಸಿ ಉಂಡೂ…

7 hours ago

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…

2 days ago

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…

2 days ago

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…

4 days ago

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

  ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…

4 days ago

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…

4 days ago