ಮೂಡುಬಿದಿರೆ: ಕಲ್ಲಬೆಟ್ಟುವಿನಲ್ಲಿ ನಡೆದ ಸಾರ್ವಜನಿಕ ಗಣೇಶೋತ್ಸವದಲ್ಲಿ ನಾಲ್ವರು ವಿದ್ಯಾರ್ಥಿನಿಯರು ಸೇರಿ ಆನಾರೋಗ್ಯ ಪೀಡಿತೆಯೋರ್ವರ ಚಿಕಿತ್ಸೆಗಾಗಿ ಧನ ಸಂಗ್ರಹ ಮಾಡಿ ಹಸ್ತಾಂತರ ಮಾಡಿ ಊರವರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ತಾಲೂಕಿನ ಕಲ್ಲಬೆಟ್ಟು ಗ್ರಾಮದ ನಿವಾಸಿಗಳಾದ ಮಹಾವೀರ ಕಾಲೇಜಿನ ವಿದ್ಯಾರ್ಥಿನಿಯರಾದ ತುಷಾರ, ಅನೂಷಾ, ತುಷಿತಾ ಹಾಗೂ ಪ್ರತಿಕ್ಷಾ ಎಂಬ ವಿದ್ಯಾರ್ಥಿಯರು ಅನಾರೋಗ್ಯ ಪೀಡಿತೆಯ ಚಿಕಿತ್ಸೆಯ ನೆರವಿಗೆ ಸ್ಪಂದಿಸಿದವರು. ಕಲ್ಲಬೆಟ್ಟುವಿನಲ್ಲಿ ನಡೆದ ಗಣೇಶೋತ್ಸವದ ವಿಸರ್ಜನಾ ಮೆರವಣಿಗೆಯ ಸಂದರ್ಭದಲ್ಲಿ ಈ ನಾಲ್ವರು ವಿದ್ಯಾರ್ಥಿಗಳು ಭಕ್ತರಲ್ಲಿಗೆ ಧನ ಸಂಗ್ರಹದ ಬಾಕ್ಸ್ ಗಳನ್ನು ಹಿಡಿದುಕೊಂಡು
ಹೋಗಿ ಸುಮಾರು 11,116 ರೂವನ್ನು ಸಂಗ್ರಹಿಸಿದ್ದು, ಇದನ್ನು ಕಲ್ಲಬೆಟ್ಟುವಿನ ಕಮಲಾಕ್ಷಿ ಅವರ ಚಿಕಿತ್ಸೆಗಾಗಿ ನೀಡಿದ್ದಾರೆ.
ಕೂಲಿ ಕಾರ್ಮಿಕೆಯಾಗಿರುವ ಕಮಲಾಕ್ಷಿ ಅವರು ಕಲ್ಲಬೆಟ್ಟು ಮಹಮ್ಮಾಯಿ ದೇವಸ್ಥಾನ ಶುಚಿತ್ವಗೊಳಿಸುವ ಕೆಲಸವನ್ನು ನಿರ್ವಹಿಸುತ್ತಿದ್ದರು. ಆದರೆ ಕೆಲವು ದಿನಗಳ ಹಿಂದೆ ಅವರು ರಕ್ತದೊತ್ತಡದ ಸಮಸ್ಯೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿ ತುರ್ತು ಚಿಕಿತ್ಸೆಯನ್ನು ಪಡೆದುಕೊಂಡು
ನಂತರ ಆಸ್ಪತ್ರೆಯಿಂದ ಮನೆಗೆ ಮರಳಿದ್ದರು. ಅವರ ಪತಿಯೂ ಕೂಲಿಕಾರ್ಮಿಕರಾಗಿದ್ದು, ಬಡಕುಟುಂಬದವರಾಗಿರುವ ಇವರ ಸ್ಥಿತಿಯನ್ನು ಕಂಡ ವಿದ್ಯಾರ್ಥಿನಿಯರು ಧನ ಸಂಗ್ರಹ ಮಾಡಿ ಚಿಕಿತ್ಸೆಯ ನೆರವಿಗೆ ಸ್ಪಂದಿಸುತ್ತ ಈ ಕಾರ್ಯವನ್ನು ಕೈಗೊಂಡಿದ್ದರು. ಅದರಂತೆ ಸಂಗ್ರಹವಾಗಿರುವ ಧನವನ್ನು ಕಮಲಾಕ್ಷಿ ಅವರ ಮನೆಗೆ ತೆರಳಿ ಹಸ್ತಾಂತರಿಸುವ ಮೂಲಕ ಗಮನ ಸೆಳೆದಿದ್ದಾರೆ.
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…