ಕರ್ನಾಟಕ ರಾಜ್ಯ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ಬೆಂಗಳೂರು ಇದರ ವಾರ್ಷಿಕ ಮಹಾಸಭೆಯಲ್ಲಿ ಬಂಟ್ವಾಳ ಭೂ ಅಭಿವೃದ್ಧಿ ಬ್ಯಾಂಕ್ ಗೆ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ.

ಪ್ರಸಕ್ತ ಸಾಲಿನ ಬ್ಯಾಂಕ್ ವ್ಯವಹಾರದ ವಸೂಲಾತಿಯಲ್ಲಿ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ಹಿನ್ನಲೆಯಲ್ಲಿ ಬಂಟ್ವಾಳ ಭೂ ಅಭಿವೃದ್ಧಿ ಬ್ಯಾಂಕಿನ ಅಧ್ಯಕ್ಷ ಅರುಣ್ ರೋಶನ್ ಡಿ ಸೋಜ ಪ್ರಶಸ್ತಿ ಸ್ವೀಕರಿಸಿದರು. ಕಾಸ್ಕಾರ್ಡ್ ಬ್ಯಾಂಕಿನ ಅಧ್ಯಕ್ಷ ಶಾಸಕ ಷಡಕ್ಷರಿ ಪ್ರಶಸ್ತಿ ವಿತರಿಸಿದರು.
ಬಂಟ್ವಾಳ ಬ್ಯಾಂಕಿನ ವ್ಯವಸ್ಥಾಪಕ ಪದ್ಮನಾಭ ಜಿ .ಮತ್ತು ಕಾಸ್ಕಾರ್ಡ್ ಬ್ಯಾಂಕಿನ ಜಿಲ್ಲಾ ನಿರ್ದೇಶಕ ರಾದ ರಾಜಶೇಖರ ಜೈನ್ ಉಪಸ್ಥಿತರಿದ್ದರು.



