ಜನ ಮನದ ನಾಡಿ ಮಿಡಿತ

Advertisement

ಯುವ ಮೋರ್ಚಾ ಬಂಟ್ವಾಳ ಮಂಡಲ ವತಿಯಿಂದ ಸೇವಾ ಪಾಕ್ಷಿಕದ ಅಂಗವಾಗಿ ಬೃಹತ್ ರಕ್ತದಾನ ಶಿಬಿರ

ಬಂಟ್ವಾಳ ಯುವ ಮೋರ್ಚಾ ಬಂಟ್ವಾಳ ಮಂಡಲ ವತಿಯಿಂದ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸಹಯೋಗದೊಂದಿಗೆ ಪ್ರಧಾನಿ ನರೇಂದ್ರ ಮೋದಿಯವರ ಜನ್ಮ ದಿನಾಚರಣೆ ಪ್ರಯುಕ್ತ ಸೇವಾ ಪಾಕ್ಷಿಕದ ಅಂಗವಾಗಿ ಬೃಹತ್ ರಕ್ತದಾನ ಶಿಬಿರ ಮತ್ತು ಪ್ರಧಾನಿ ಶ್ರೀ ನರೇಂದ್ರ ಮೋದಿಯವರ ಮನ್ ಕಿ ಬಾತ್ ವೀಕ್ಷಣೆ ಬಿಸಿರೋಡಿನ ಗೀತಾಂಜಲಿ ಸಭಾಂಗಣದಲ್ಲಿ ನಡೆಯಿತು.

ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಸುದೀರ್ ಶೆಟ್ಟಿ ಕಣ್ಣೂರು ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಪ್ರಧಾನಿ ಮೋದಿಯವರ ಜನ್ಮ ದಿನವನ್ನು ಸೇವಾ ಕಾರ್ಯದ ಮೂಲಕ ಆಚರಿಸಿ ಮಾದರಿಯ ನಡೆಯನ್ನು ಬಿಜೆಪಿ ಮಾಡುತ್ತಿದೆ. ಇನ್ನೊಂದು ಜೀವವನ್ನು ಉಳಿಸುವ ಪುಣ್ಯದ ಕಾರ್ಯ ರಕ್ತದಾನವಾಗಿದ್ದು,ಯುವಕರು ಇಂತಹ ಕೆಲಸಗಳಿಗೆ ಹೆಚ್ಚಿನ ಒತ್ತನ್ನು ನೀಡಬೇಕು ಎಂದು ಅವರು ತಿಳಿಸಿದರು.

ಇದೇ ಬಂಟ್ವಾಳ ಯುವಮೋರ್ಚಾದ ಕಾರ್ಯವನ್ನು ಶ್ಲಾಘಿಸಿದರು. ಮತ್ತೊಮ್ಮೆ ನರೇಂದ್ರ ಮೋದಿಯವರು ಪ್ರಧಾನಿಯಾಗಬೇಕು, ಅದಕ್ಕಾಗಿ ಎಲ್ಲರೂ ಭಿನ್ನಾಭಿಪ್ರಾಯ ಮರೆತು ಒಂದಾಗಿ ಕೆಲಸ ಮಾಡಬೇಕು ಎಂದು ಅವರು ಕರೆನೀಡಿದರು‌. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ ಮಾತನಾಡಿ, ನಾಡಿನ ಸಮಸ್ತ ಜನತೆಗೆ ಅಗತ್ಯಕಾಲಕ್ಕೆ ಬೇಕಾಗುವ ರಕ್ತವನ್ನು ದಾನ ಮಾಡುವ ವಿಶೇಷ ಕಾರ್ಯಕ್ರಮದ ಮೂಲಕ ಪ್ರಧಾನಿ ನರೇಂದ್ರ ಮೋದಿಯವರ ಜನ್ಮಾದಿನಾಚರಣೆಯನ್ನು ಆಚರಣೆ ಮಾಡಲಾಗಿದೆ ಎಂದು ಅವರು ತಿಳಿಸಿದರು. ಸೇವಾ ಪಾಕ್ಷಿಕದ ಅಂಗವಾಗಿ ಯುವಮೋರ್ಚಾದ ವತಿಯಿಂದ ನಡೆದ ರಕ್ತದಾನ ಶಿಬಿರ ಯಶಸ್ವಿಯಾಗಿ ನಡೆಯಲು ಸಹಕಾರ ನೀಡಿದ ಎಲ್ಲರಿಗೂ ಅಭಿನಂದನೆ ಸಲ್ಲಿಸಿದರು.

ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ, ಜಿಲ್ಲಾ ಬಿಜೆಪಿ ಪ್ರ.ಕಾರ್ಯದರ್ಶಿ ರಾಮದಾಸ ಬಂಟ್ವಾಳ, ರೆಡ್ ಕ್ರಾಸ್ ಸಂಸ್ಥೆಯ ರಕ್ತನಿಧಿ ಜಿಲ್ಲಾ ಸಂಯೋಜಕ ಪ್ರವೀಣ್ ಕುಮಾರ್, ಜಿಲ್ಲಾ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಸುದರ್ಶನ ಬಜ, ಬಂಟ್ವಾಳ ಬಿಜೆಪಿ ಪ್ರಧಾನ ಕಾರ್ಯದರ್ಶಿ ಡೊಂಬಯ್ಯ ಅರಳ, ಬಂಟ್ವಾಳ ಯುವಮೋರ್ಚಾ ಅಧ್ಯಕ್ಷ ಕಿಶೋರ್ ಪಲ್ಲಿಪಾಡಿ, ಪ್ರಮುಖರಾದ ಅರುಣ್ ರೋಶನ್ , ರಮನಾಥ ರಾಯಿ, ಪುರುಷೋತ್ತಮ ಶೆಟ್ಟಿ , ದಿನೇಶ್ ಶೆಟ್ಟಿ ದಂಬೆದಾರ್,ಆನಂದ ಶಂಭೂರು ಮತ್ತಿತರರು ಉಪಸ್ಥಿತರಿದ್ದರು.ಬಂಟ್ವಾಳ ಯುವಮೋರ್ಚಾ ಅಧ್ಯಕ್ಷ ಕಿಶೋರ್ ಪಲ್ಲಿಪಾಡಿ ಸ್ವಾಗತಿಸಿದರು. ಅಶ್ವಥ್ ರಾವ್ ಬಾಳಿಕೆ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!