ಬಂಟ್ವಾಳ ಯುವ ಮೋರ್ಚಾ ಬಂಟ್ವಾಳ ಮಂಡಲ ವತಿಯಿಂದ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸಹಯೋಗದೊಂದಿಗೆ ಪ್ರಧಾನಿ ನರೇಂದ್ರ ಮೋದಿಯವರ ಜನ್ಮ ದಿನಾಚರಣೆ ಪ್ರಯುಕ್ತ ಸೇವಾ ಪಾಕ್ಷಿಕದ ಅಂಗವಾಗಿ ಬೃಹತ್ ರಕ್ತದಾನ ಶಿಬಿರ ಮತ್ತು ಪ್ರಧಾನಿ ಶ್ರೀ ನರೇಂದ್ರ ಮೋದಿಯವರ ಮನ್ ಕಿ ಬಾತ್ ವೀಕ್ಷಣೆ ಬಿಸಿರೋಡಿನ ಗೀತಾಂಜಲಿ ಸಭಾಂಗಣದಲ್ಲಿ ನಡೆಯಿತು.
ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಸುದೀರ್ ಶೆಟ್ಟಿ ಕಣ್ಣೂರು ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಪ್ರಧಾನಿ ಮೋದಿಯವರ ಜನ್ಮ ದಿನವನ್ನು ಸೇವಾ ಕಾರ್ಯದ ಮೂಲಕ ಆಚರಿಸಿ ಮಾದರಿಯ ನಡೆಯನ್ನು ಬಿಜೆಪಿ ಮಾಡುತ್ತಿದೆ. ಇನ್ನೊಂದು ಜೀವವನ್ನು ಉಳಿಸುವ ಪುಣ್ಯದ ಕಾರ್ಯ ರಕ್ತದಾನವಾಗಿದ್ದು,ಯುವಕರು ಇಂತಹ ಕೆಲಸಗಳಿಗೆ ಹೆಚ್ಚಿನ ಒತ್ತನ್ನು ನೀಡಬೇಕು ಎಂದು ಅವರು ತಿಳಿಸಿದರು.
ಇದೇ ಬಂಟ್ವಾಳ ಯುವಮೋರ್ಚಾದ ಕಾರ್ಯವನ್ನು ಶ್ಲಾಘಿಸಿದರು. ಮತ್ತೊಮ್ಮೆ ನರೇಂದ್ರ ಮೋದಿಯವರು ಪ್ರಧಾನಿಯಾಗಬೇಕು, ಅದಕ್ಕಾಗಿ ಎಲ್ಲರೂ ಭಿನ್ನಾಭಿಪ್ರಾಯ ಮರೆತು ಒಂದಾಗಿ ಕೆಲಸ ಮಾಡಬೇಕು ಎಂದು ಅವರು ಕರೆನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ ಮಾತನಾಡಿ, ನಾಡಿನ ಸಮಸ್ತ ಜನತೆಗೆ ಅಗತ್ಯಕಾಲಕ್ಕೆ ಬೇಕಾಗುವ ರಕ್ತವನ್ನು ದಾನ ಮಾಡುವ ವಿಶೇಷ ಕಾರ್ಯಕ್ರಮದ ಮೂಲಕ ಪ್ರಧಾನಿ ನರೇಂದ್ರ ಮೋದಿಯವರ ಜನ್ಮಾದಿನಾಚರಣೆಯನ್ನು ಆಚರಣೆ ಮಾಡಲಾಗಿದೆ ಎಂದು ಅವರು ತಿಳಿಸಿದರು. ಸೇವಾ ಪಾಕ್ಷಿಕದ ಅಂಗವಾಗಿ ಯುವಮೋರ್ಚಾದ ವತಿಯಿಂದ ನಡೆದ ರಕ್ತದಾನ ಶಿಬಿರ ಯಶಸ್ವಿಯಾಗಿ ನಡೆಯಲು ಸಹಕಾರ ನೀಡಿದ ಎಲ್ಲರಿಗೂ ಅಭಿನಂದನೆ ಸಲ್ಲಿಸಿದರು.
ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ, ಜಿಲ್ಲಾ ಬಿಜೆಪಿ ಪ್ರ.ಕಾರ್ಯದರ್ಶಿ ರಾಮದಾಸ ಬಂಟ್ವಾಳ, ರೆಡ್ ಕ್ರಾಸ್ ಸಂಸ್ಥೆಯ ರಕ್ತನಿಧಿ ಜಿಲ್ಲಾ ಸಂಯೋಜಕ ಪ್ರವೀಣ್ ಕುಮಾರ್, ಜಿಲ್ಲಾ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಸುದರ್ಶನ ಬಜ, ಬಂಟ್ವಾಳ ಬಿಜೆಪಿ ಪ್ರಧಾನ ಕಾರ್ಯದರ್ಶಿ ಡೊಂಬಯ್ಯ ಅರಳ, ಬಂಟ್ವಾಳ ಯುವಮೋರ್ಚಾ ಅಧ್ಯಕ್ಷ ಕಿಶೋರ್ ಪಲ್ಲಿಪಾಡಿ, ಪ್ರಮುಖರಾದ ಅರುಣ್ ರೋಶನ್ , ರಮನಾಥ ರಾಯಿ, ಪುರುಷೋತ್ತಮ ಶೆಟ್ಟಿ , ದಿನೇಶ್ ಶೆಟ್ಟಿ ದಂಬೆದಾರ್,ಆನಂದ ಶಂಭೂರು ಮತ್ತಿತರರು ಉಪಸ್ಥಿತರಿದ್ದರು.ಬಂಟ್ವಾಳ ಯುವಮೋರ್ಚಾ ಅಧ್ಯಕ್ಷ ಕಿಶೋರ್ ಪಲ್ಲಿಪಾಡಿ ಸ್ವಾಗತಿಸಿದರು. ಅಶ್ವಥ್ ರಾವ್ ಬಾಳಿಕೆ ಕಾರ್ಯಕ್ರಮ ನಿರೂಪಿಸಿದರು.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…