ಬಂಟ್ವಾಳ: ಕೆಲ ದಿನಗಳಿಂದ ಇಡ್ಕಿದು ಗ್ರಾಮದ ಮುಂಡ್ರಬೈಲು ಎಂಬಲ್ಲಿ ಹದಿಹರೆಯದ ಯುವಕರ ತಂಡ ಯಾರೂ ಇಲ್ಲದ ನಿರ್ಜನ ಪ್ರದೇಶಕ್ಕೆ ಬಂದು ಗಾಂಜಾ ಮತ್ತು ಮಾದಕ ವಸ್ತುವನ್ನು ಸೇವಿಸಿ ಮಹಿಳೆಯರಿಗೆ ತೊಂದರೆ ಕೊಡುವ ಬಗ್ಗೆ ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು, ಇಂದು ಕಾಟ ನೀಡಲು ಬಂದ ಮೂವರು ಯುವಕರು ಪೋಲಿಸರು ವಶಕ್ಕೆ ಪಡೆದಕೊಂಡ ಘಟನೆ ನಡೆದಿದೆ.
ಮಾದಕ ವಸ್ತು ಸೇವಿಸಿ ನಶೆಯೇರಿ ದಾರಿಯಲ್ಲಿ ಹೋಗುತ್ತಿದ್ದ ಮಹಿಳೆಯರಿಗೆ ಮತ್ತು ಹೆಣ್ಣು ಮಕ್ಕಳಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಕಿರುಕುಳ ನೀಡುತ್ತಿದ್ದರು ಎಂಬ ಮಾಹಿತಿ ಗ್ರಾಮಸ್ಥರಿಗೆ ತಿಳಿಸಿದ್ದರು. ಈ ದಿನ ಆದಿತ್ಯವಾರ ರಜಾ ದಿನವಾದ ಕಾರಣ ಮಾಹಿತಿ ತಿಳಿದ ಗ್ರಾಮಸ್ಥರು ಇಂದು ಕಾದು ಕುಳಿತಿದ್ದರು. ಇವತ್ತು ಅದೇ ಮಾದರಿಯಲ್ಲಿ ತನ್ನ ಚೇಷ್ಟೆ ಮಾಡಲು ಬಂದ ಯುವಕರು ಇನ್ನೇನು ತಮ್ಮ ಕೆಲಸ ಮಾಡಬೇಕೆನ್ನುವಷ್ಟರಲ್ಲಿ ಅವರನ್ನು ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ವಿಟ್ಲ ಪೊಲೀಸರು ಮೂವರು ಯುವಕರನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಗಳನ್ನು ಕಂಬಳಬೆಟ್ಟು ನೂಜಿ ನಿವಾಸಿಗಳಾದ ಸಾಹಿಲ್, ಶಾಝ್, ಜಾಯಿ ಎನ್ನಲಾಗಿದೆ. ಆರೋಪಿಗಳಿಂದ 1 ಬೈಕ್ ಹಾಗೂ 1 ಸ್ಕೂಟರ್ನ್ನು ವಶಕ್ಕೆ ಪಡೆಯಲಾಗಿದೆ. ಈ ಮೊದಲು 3 ಜನರಲ್ಲೊಬ್ಬ ನೆಲ್ಲಿಗುಡ್ಡೆ ಎಂಬಲ್ಲಿ ಯುವತಿಯನ್ನು ಹಿಂಬಾಲಿಸಿಕೊಂಡು ಬಂದ ವಿಚಾರದಲ್ಲಿ ಸ್ಥಳೀಯರಿಂದ ಗೂಸಾ ತಿಂದಿದ್ದ ಎಂಬ ಮಾಹಿತಿ ತಿಳಿದುಬಂದಿದೆ.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…