ಬಂಟ್ವಾಳ: ಕೆಲ ದಿನಗಳಿಂದ ಇಡ್ಕಿದು ಗ್ರಾಮದ ಮುಂಡ್ರಬೈಲು ಎಂಬಲ್ಲಿ ಹದಿಹರೆಯದ ಯುವಕರ ತಂಡ ಯಾರೂ ಇಲ್ಲದ ನಿರ್ಜನ ಪ್ರದೇಶಕ್ಕೆ ಬಂದು ಗಾಂಜಾ ಮತ್ತು ಮಾದಕ ವಸ್ತುವನ್ನು ಸೇವಿಸಿ ಮಹಿಳೆಯರಿಗೆ ತೊಂದರೆ ಕೊಡುವ ಬಗ್ಗೆ ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು, ಇಂದು ಕಾಟ ನೀಡಲು ಬಂದ ಮೂವರು ಯುವಕರು ಪೋಲಿಸರು ವಶಕ್ಕೆ ಪಡೆದಕೊಂಡ ಘಟನೆ ನಡೆದಿದೆ.
ಮಾದಕ ವಸ್ತು ಸೇವಿಸಿ ನಶೆಯೇರಿ ದಾರಿಯಲ್ಲಿ ಹೋಗುತ್ತಿದ್ದ ಮಹಿಳೆಯರಿಗೆ ಮತ್ತು ಹೆಣ್ಣು ಮಕ್ಕಳಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಕಿರುಕುಳ ನೀಡುತ್ತಿದ್ದರು ಎಂಬ ಮಾಹಿತಿ ಗ್ರಾಮಸ್ಥರಿಗೆ ತಿಳಿಸಿದ್ದರು. ಈ ದಿನ ಆದಿತ್ಯವಾರ ರಜಾ ದಿನವಾದ ಕಾರಣ ಮಾಹಿತಿ ತಿಳಿದ ಗ್ರಾಮಸ್ಥರು ಇಂದು ಕಾದು ಕುಳಿತಿದ್ದರು. ಇವತ್ತು ಅದೇ ಮಾದರಿಯಲ್ಲಿ ತನ್ನ ಚೇಷ್ಟೆ ಮಾಡಲು ಬಂದ ಯುವಕರು ಇನ್ನೇನು ತಮ್ಮ ಕೆಲಸ ಮಾಡಬೇಕೆನ್ನುವಷ್ಟರಲ್ಲಿ ಅವರನ್ನು ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ವಿಟ್ಲ ಪೊಲೀಸರು ಮೂವರು ಯುವಕರನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಗಳನ್ನು ಕಂಬಳಬೆಟ್ಟು ನೂಜಿ ನಿವಾಸಿಗಳಾದ ಸಾಹಿಲ್, ಶಾಝ್, ಜಾಯಿ ಎನ್ನಲಾಗಿದೆ. ಆರೋಪಿಗಳಿಂದ 1 ಬೈಕ್ ಹಾಗೂ 1 ಸ್ಕೂಟರ್ನ್ನು ವಶಕ್ಕೆ ಪಡೆಯಲಾಗಿದೆ. ಈ ಮೊದಲು 3 ಜನರಲ್ಲೊಬ್ಬ ನೆಲ್ಲಿಗುಡ್ಡೆ ಎಂಬಲ್ಲಿ ಯುವತಿಯನ್ನು ಹಿಂಬಾಲಿಸಿಕೊಂಡು ಬಂದ ವಿಚಾರದಲ್ಲಿ ಸ್ಥಳೀಯರಿಂದ ಗೂಸಾ ತಿಂದಿದ್ದ ಎಂಬ ಮಾಹಿತಿ ತಿಳಿದುಬಂದಿದೆ.
ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಅಂಬಲಪಾಡಿ ಸಮೀಪದ ಬಿಆರ್ ಮೆಡೋಸ್ ಅಪಾರ್ಟ್ಮೆಂಟ್ನಲ್ಲಿ ನಡೆದಿದೆ. ಮೃತರನ್ನು ಉಡುಪಿಯ…
ಅಂತರರಾಷ್ಟ್ರೀಯ ಮಟ್ಟದಲ್ಲಿ ಆರೋಗ್ಯ ಸೇವೆ ನೀಡುತ್ತಿರುವ ಡೋಲ್ಚೆ ಎಸ್ಥೆಟಿಕಾ ಸಂಸ್ಥೆಯ ಕರ್ನಾಟಕದ ಮೊದಲ ಶಾಖೆ ಆಗಸ್ಟ್ 13ರಂದು ಮಂಗಳೂರಿನಲ್ಲಿ ಕಾರ್ಯಾರಂಭಗೊಳ್ಳಲಿದೆ.…
ಕದ್ರಿ ಬಂಜನ್ ಆದಿ ಮೂಲಸ್ಥಾನ ಶ್ರೀ ನಾಗಬ್ರಹ್ಮ ಕ್ಷೇತ್ರದ ವತಿಯಿಂದ ನಿವೃತ್ತ ವೀರ ಯೋಧರು ಹಾಗೂ ವೀರನಾರಿಯರನ್ನು ಗೌರವಿಸುವ ವಿಶೇಷ…
ಡಿಸಿ ಮನ್ನಾ ಭೂಮಿಯನ್ನು ಅರ್ಹ ಬಡ ಹಾಗೂ ಶೋಷಿತ ಕುಟುಂಬಗಳಿಗೆ ಹಂಚಿಕೆ ಮಾಡುವಂತೆ ಆಗ್ರಹಿಸಿರುವ ಕರ್ನಾಟಕ ದಲಿತ ಸಂಘರ್ಷ ಸಮಿತಿ,…
ಕಸಬಾ ಗ್ರಾಮದ ಕುರುಂಬಳ ನಿವಾಸಿ ಹಮೀದ್ ಅವರ ಮನೆಯಲ್ಲಿ ಭಾನುವಾರ ಬೆಳಗ್ಗೆ ಗ್ಯಾಸ್ ಸಿಲಿಂಡರ್ ಏಕಾಏಕಿ ಸ್ಫೋಟಗೊಂಡು ಮನೆ ಸಂಪೂರ್ಣ…
ತೊಕ್ಕೊಟ್ಟು ವಿನಮ್ರ ಬಾರ್ ಬಳಿ ತಲವಾರು ಬೀಸಿ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದ ಆರೋಪದ ಮೇಲೆ ರೌಡಿಶೀಟರ್ವೊಬ್ಬನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.…