ಜನ ಮನದ ನಾಡಿ ಮಿಡಿತ

Advertisement

“ಸಿರಿ ದೇವಿ ಮೈಮೆ” ತುಳು ಯಕ್ಷಗಾನ ಆಮಂತ್ರಣ ಪತ್ರಿಕೆ ಬಿಡುಗಡೆ”

ದಕ್ಷಿಣ ಕನ್ನಡ: ತುಳು ಭಾಷೆಯಲ್ಲಿ ಪ್ರಪ್ರಥಮ ಬಾರಿಗೆ ಶ್ರೀದೇವಿ ಮಹಾತ್ಮೆ ಯಕ್ಷಗಾನ ತುಳು ಭಾಗವತಿಕೆ ಸಹಿತ ತುಳು ಭಾಷೆಯಲ್ಲಿ ಸಿರಿ ದೇವಿ ಮೈಮೆ ಎಂಬ ಪ್ರಸಂಗ ದೊಂದಿಗೆ ನೂತನ ಪ್ರಯೋಗ ನಡೆಯಲಿದೆ.


ಸಪ್ಟೆಂಬರ್ 30ರಂದು ಮಂಗಳೂರು ಪುರಭವನದಲ್ಲಿ ಮಧ್ಯಾಹ್ನ 3 ಗಂಟೆಯಿಂದ ರಾತ್ರಿ 11:00 ವರೆಗೆ ನಡೆಯಲಿರುವ ಈ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಕನ್ಯಾನ ಸದಾಶಿವ ಶೆಟ್ಟಿ ಅವರ ಮಾತೃಶ್ರೀಯವರಾದ ಶ್ರೀಮತಿ ಲಲಿತಾ ಶೆಟ್ಟಿ ಅವರು ಕನ್ಯಾನ ಸದಾಶಿವ ಶೆಟ್ಟಿಯವರಿಗೆ ನೀಡಿ ಬಿಡುಗಡೆಗೊಳಿಸಿದರು. ತುಳುವೆರೆ ಆಯನೊ ಕೂಟ ಕುಡ್ಲ ಈ ಕಾರ್ಯಕ್ರಮವನ್ನು ಆಯೋಜಿಸಿದ್ದು ಸಂಸ್ಥೆಯ ಅಧ್ಯಕ್ಷರಾದ ಶಮಿನ ಆಳ್ವ, ಕಾರ್ಯದರ್ಶಿ ರಾಜೇಶ್ ಹೆಗ್ಡೆ ಪೊಳಲಿ, ಗೋಪಾಡ್ಕರ್, ಆಶಾ ಸೆಟ್ಟಿ ಅತ್ತಾವರ, ಗೀತಾ ಹೆಗ್ಡೆ, ಭಾರತಿ ಶೆಟ್ಟಿ ಮೂಲ್ಕಿ, ಭೂಷಣ್ ಕುಲಾಲ್ ಮೊದಲಾದವರು ಉಪಸ್ಥಿತರಿದ್ದರು. ಡಾ. ರಾಜೇಶ್ ಆಳ್ವ ಅವರು ಕಾರ್ಯಕ್ರಮ ನಿರೂಪಿಸಿದರು.

ಕಾರ್ಯಕ್ರಮದಲ್ಲಿ ಕನ್ಯಾನ ಸದಾಶಿವ ಶೆಟ್ಟಿಯವರಿಗೆ ತುಳುವೆರೆ ಕರ್ಣೆ ಎಂಬ ಬಿರುದು ಪ್ರಧಾನ ನಡೆಯಲಿದೆ. ಅಂತೆಯೇ ಸಿರಿ ದೇವಿ ಮೈಮೆ ಪುಸ್ತಕ ಬಿಡುಗಡೆ ಮತ್ತು ವಾಯ್ಸ್ ಆಫ್ ಆರಾಧನ ಮಕ್ಕಳಿಂದ ಜೋಕ್ಲೆ ಮಿನದನ ಕಾರ್ಯಕ್ರಮ ನಡೆಯಲಿದೆ. ತುಳುವರ ಬಹು ದಿನಗಳ ನಿರೀಕ್ಷೆಯಾದ ಶ್ರೀ ದೇವಿ ಮಹಾತ್ಮೆ ಯಕ್ಷಗಾನವನ್ನು ತುಳು ಭಾಷೆಯಲ್ಲಿ ಆಡಿತೋರಿಸಬೇಕೆಂಬ ಕನಸು ನನಸಾಗಲಿದೆ. ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಸರಪಾಡಿ ಅಶೋಕ್ ಶೆಟ್ಟಿಯವರ ಸಂಯೋಜನೆಯಲ್ಲಿ ಈ ಯಕ್ಷಗಾನ ರಂಗೇರಲಿದ್ದು, ನಾಲ್ಕು ರಾಜ್ಯೋತ್ಸವ ಪ್ರಶಸ್ತಿ ವಿಜೇತ ಯಕ್ಷಗಾನ ಕಲಾವಿದರ ಭಾಗವಹಿಸುವಿಕೆ ವಿಶೇಷ ಮೆರುಗು ನೀಡಲಿದೆ.

Leave a Reply

Your email address will not be published. Required fields are marked *

ಉಡುಪಿ: ಅಪಾರ್ಟ್‌ಮೆಂಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆ

ಮಂಗಳೂರು: ಮಂಗಳೂರಿನಲ್ಲಿ ಆ.13ರಂದು ಡೋಲ್ಚೆ ಎಸ್ಥೆಟಿಕಾ ಸಂಸ್ಥೆಯ ಮೊದಲ ಶಾಖೆ ಆರಂಭ

ಮಂಗಳೂರು: ಕದ್ರಿ ಬಂಜನ್‌ ಕ್ಷೇತ್ರದಲ್ಲಿ ನಿವೃತ್ತ ವೀರ ಯೋಧರು, ವೀರನಾರಿಯರಿಗೆ ಸನ್ಮಾನ…!

ಮಂಗಳೂರು: ಡಿಸಿ ಮನ್ನಾ ಭೂಮಿ ಹಂಚಿಕೆಗೆ ಆಗ್ರಹ: ಒಂದು ತಿಂಗಳಲ್ಲಿ ಸಮಸ್ಯೆ ಬಗೆಹರಿಸದಿದ್ದರೆ ಉಗ್ರ ಹೋರಾಟ…!

ವಿಟ್ಲ: ಗ್ಯಾಸ್ ಸಿಲಿಂಡರ್ ಸ್ಫೋಟ, ಮನೆ ಸಂಪೂರ್ಣ ಜಖಂ; ಲಕ್ಷಾಂತರ ರೂ. ನಷ್ಟ

ತೊಕ್ಕೊಟ್ಟು: ಬಾರ್ ಬಳಿ ತಲವಾರು ಬೀಸಿ ಆತಂಕ ಸೃಷ್ಟಿಸಿದ ರೌಡಿಶೀಟರ್ ಬಂಧನ…!

ಟೆಹ್ರಾನ್: ಖಮೇನಿ ಭೇಟಿಯಲ್ಲೇ ಹೊಸ ರಹಸ್ಯ! ‘ನೀವೇ ಖಮೇನಿಯೇ?’ ಎಂದು ಪ್ರಶ್ನಿಸಿದ ಇರಾನ್ ಅಧ್ಯಕ್ಷ…!

ಬ್ಯಾಂಕಾಕ್: ಥೈಲ್ಯಾಂಡ್ ಶಾಲೆಯಲ್ಲಿ ಗುಂಡಿನ ದಾಳಿ: ಶಿಕ್ಷಕ ಸಾವು, 15 ಮಂದಿಗೆ ಗಾಯ…!

ಬಂಟ್ವಾಳ: ಆಳ್ವಾಸ್ ಪ್ರಗತಿ-2026 ಉದ್ಯೋಗ ಮೇಳಕ್ಕೆ ಬಂಟ್ವಾಳದಿಂದ ಉಚಿತ ಬಸ್…!

error: Content is protected !!