ದಕ್ಷಿಣ ಕನ್ನಡ: ತುಳು ಭಾಷೆಯಲ್ಲಿ ಪ್ರಪ್ರಥಮ ಬಾರಿಗೆ ಶ್ರೀದೇವಿ ಮಹಾತ್ಮೆ ಯಕ್ಷಗಾನ ತುಳು ಭಾಗವತಿಕೆ ಸಹಿತ ತುಳು ಭಾಷೆಯಲ್ಲಿ ಸಿರಿ ದೇವಿ ಮೈಮೆ ಎಂಬ ಪ್ರಸಂಗ ದೊಂದಿಗೆ ನೂತನ ಪ್ರಯೋಗ ನಡೆಯಲಿದೆ.
ಸಪ್ಟೆಂಬರ್ 30ರಂದು ಮಂಗಳೂರು ಪುರಭವನದಲ್ಲಿ ಮಧ್ಯಾಹ್ನ 3 ಗಂಟೆಯಿಂದ ರಾತ್ರಿ 11:00 ವರೆಗೆ ನಡೆಯಲಿರುವ ಈ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಕನ್ಯಾನ ಸದಾಶಿವ ಶೆಟ್ಟಿ ಅವರ ಮಾತೃಶ್ರೀಯವರಾದ ಶ್ರೀಮತಿ ಲಲಿತಾ ಶೆಟ್ಟಿ ಅವರು ಕನ್ಯಾನ ಸದಾಶಿವ ಶೆಟ್ಟಿಯವರಿಗೆ ನೀಡಿ ಬಿಡುಗಡೆಗೊಳಿಸಿದರು. ತುಳುವೆರೆ ಆಯನೊ ಕೂಟ ಕುಡ್ಲ ಈ ಕಾರ್ಯಕ್ರಮವನ್ನು ಆಯೋಜಿಸಿದ್ದು ಸಂಸ್ಥೆಯ ಅಧ್ಯಕ್ಷರಾದ ಶಮಿನ ಆಳ್ವ, ಕಾರ್ಯದರ್ಶಿ ರಾಜೇಶ್ ಹೆಗ್ಡೆ ಪೊಳಲಿ, ಗೋಪಾಡ್ಕರ್, ಆಶಾ ಸೆಟ್ಟಿ ಅತ್ತಾವರ, ಗೀತಾ ಹೆಗ್ಡೆ, ಭಾರತಿ ಶೆಟ್ಟಿ ಮೂಲ್ಕಿ, ಭೂಷಣ್ ಕುಲಾಲ್ ಮೊದಲಾದವರು ಉಪಸ್ಥಿತರಿದ್ದರು. ಡಾ. ರಾಜೇಶ್ ಆಳ್ವ ಅವರು ಕಾರ್ಯಕ್ರಮ ನಿರೂಪಿಸಿದರು.
ಕಾರ್ಯಕ್ರಮದಲ್ಲಿ ಕನ್ಯಾನ ಸದಾಶಿವ ಶೆಟ್ಟಿಯವರಿಗೆ ತುಳುವೆರೆ ಕರ್ಣೆ ಎಂಬ ಬಿರುದು ಪ್ರಧಾನ ನಡೆಯಲಿದೆ. ಅಂತೆಯೇ ಸಿರಿ ದೇವಿ ಮೈಮೆ ಪುಸ್ತಕ ಬಿಡುಗಡೆ ಮತ್ತು ವಾಯ್ಸ್ ಆಫ್ ಆರಾಧನ ಮಕ್ಕಳಿಂದ ಜೋಕ್ಲೆ ಮಿನದನ ಕಾರ್ಯಕ್ರಮ ನಡೆಯಲಿದೆ. ತುಳುವರ ಬಹು ದಿನಗಳ ನಿರೀಕ್ಷೆಯಾದ ಶ್ರೀ ದೇವಿ ಮಹಾತ್ಮೆ ಯಕ್ಷಗಾನವನ್ನು ತುಳು ಭಾಷೆಯಲ್ಲಿ ಆಡಿತೋರಿಸಬೇಕೆಂಬ ಕನಸು ನನಸಾಗಲಿದೆ. ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಸರಪಾಡಿ ಅಶೋಕ್ ಶೆಟ್ಟಿಯವರ ಸಂಯೋಜನೆಯಲ್ಲಿ ಈ ಯಕ್ಷಗಾನ ರಂಗೇರಲಿದ್ದು, ನಾಲ್ಕು ರಾಜ್ಯೋತ್ಸವ ಪ್ರಶಸ್ತಿ ವಿಜೇತ ಯಕ್ಷಗಾನ ಕಲಾವಿದರ ಭಾಗವಹಿಸುವಿಕೆ ವಿಶೇಷ ಮೆರುಗು ನೀಡಲಿದೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…