ದಕ್ಷಿಣ ಕನ್ನಡ : ಕರಾವಳಿ ಕರ್ನಾಟಕದ ಉಡುಪಿ ಜಿಲ್ಲೆಯ ಕಾರ್ಕಾಳದ ಬೈಲೂರು ಗ್ರಾಮದ ಉಮಿಕಲ್ ಬೆಟ್ಟದ ಮೇಲೆ ಮಾಜಿ ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಅವರ ನೇತೃತ್ವದಲ್ಲಿ ನಿರ್ಮಿಸಲಾದ ಪರಶುರಾಮ ಮೂರ್ತಿ ಕಳಪೆ ಗುಣಮಟ್ಟದ್ದು, ಮೂರ್ತಿಯ ಗುಣಮಟ್ಟ ಉತ್ತಮ ಎಂದು ಹೇಳುವುದು ಕಷ್ಟ ಸಾಧ್ಯ ಎಂಬ ಅರ್ಥದಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಮಾತನಾಡಿದ್ದಾರೆ.
ಪರಶುರಾಮ ಥೀಮ್ ಪಾರ್ಕ್ನ್ನು ಬಿಜೆಪಿ ಸರ್ಕಾರದ ಅವಧಿಯ ಕೊನೆಯಲ್ಲಿ ವಿಧಾನಸಭಾ ಚುನಾವಣೆಯ ಮೊದಲು ಮುಖ್ಯಮಂತ್ರಿ ಬೊಮ್ಮಯಿ ಉದ್ಘಾಟಿಸಿದ್ದರು.
15 ಕೋಟಿ ರು. ವೆಚ್ಚದಲ್ಲಿ, ಜನರ ತೆರಿಗೆ ದುಡ್ಡಿನಿಂದ ಬಂದ ಹಣದಲ್ಲಿ ಇಲಾಖೆಯ ವತಿಯಿಂದ ನಿರ್ಮಿಸಲಾಗಿರುವ ಪರಶುರಾಮ ಥೀಮ್ ಪಾರ್ಕ್ ಯೋಜನೆಯಲ್ಲಿ ಭಾರೀ ಅವ್ಯವಹಾರ ನಡೆದಿದೆ ಎಂಬ ಸುದ್ದಿ ಕರಾವಳಿವಳಿಯಲ್ಲಿ ಭಾರೀ ಸಂಚಲನ ಸೃಷ್ಟಿಸಿತ್ತು. ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಆಗಮಿಸಿದ ಉಡುಪಿ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮೂರ್ತಿಯನ್ನು ಪರಿಶೀಲಿಸಿ ಇದು ಅರ್ಧ ನಕಲಿ– ಅರ್ಧ ಅಸಲಿ ಎಂದು ಹೇಳಿ, ಇದರ ನಿರ್ಮಾಣಕ್ಕೆ ಕಾರಣರಾದವರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಅವ್ಯವಹಾರದ ಬಗ್ಗೆ ದೂರಿನ ಹಿನ್ನೆಲೆಯಲ್ಲಿ ಸ್ಥಳ ಪರಿಶೀಲಿಸಿದ ಉಸ್ತುವಾರಿ ಸಚಿವರು, ಉಡುಪಿ ನಿರ್ಮಿತಿ ಕೇಂದ್ರದ ಅಧಿಕಾರಿಗಳು ಹಾಗೂ ಗುತ್ತಿಗೆದಾರರನ್ನು ತನಿಖೆಗೆ ಒಳಪಡಿಸುವ ಅಗತ್ಯವಿದ್ದು ಈ ಬಗ್ಗೆ ಉಸ್ತುವಾರಿ ಸಚಿವರು ಸುಳಿವು ನೀಡಿದ್ದಾರೆ, ಸಚಿವೆಗೆ ಸರಿಯಾದ ಉತ್ತರವನ್ನು ನೀಡುವುದಕ್ಕೆ ತಡವರಿಸಿದ ನಿರ್ಮಿತಿ ಕೇಂದ್ರದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಉಸ್ತುವಾರಿ ಸಚಿವರ ತನಿಖೆ ವೇಳೆ ಮೂರ್ತಿ ಕಂಚಿನದಲ್ಲ, ಈಗಿರುವುದು ತಾತ್ಕಾಲಿಕವಾಗಿ ನಿರ್ಮಿಸಲಾಗಿರುವ ಮೂರ್ತಿ, ಅದನ್ನು ತೆಗೆದು ನೈಜ ಕಂಚಿನ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿದರು ಎಂದು ವರದಿಯಾಗಿದೆ.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಈ ನಕಲಿ ಮೂರ್ತಿ ಸ್ಥಾಪನೆಯ ಬಗ್ಗೆ ವರದಿ ಪಡೆದು ಕಾನೂನು ಕ್ರಮ ಕೈಗೊಳ್ಳುವುದಾಗಿ ಹೇಳಿದರು. ಪ್ರತಿಮೆ ನಿರ್ಮಾಣ ಮಾಡಿರುವ ಬೆಂಗಳೂರಿನ ಕಲಾವಿದರಿಗೆ ನೋಟಿಸ್ ಜಾರಿ ಮಾಡಲಾಗಿದೆ ಎಂದು ತಿಳಿಸಿದರು.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…