ದಕ್ಷಿಣ ಕನ್ನಡ : ಕರಾವಳಿ ಕರ್ನಾಟಕದ ಉಡುಪಿ ಜಿಲ್ಲೆಯ ಕಾರ್ಕಾಳದ ಬೈಲೂರು ಗ್ರಾಮದ ಉಮಿಕಲ್ ಬೆಟ್ಟದ ಮೇಲೆ ಮಾಜಿ ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಅವರ ನೇತೃತ್ವದಲ್ಲಿ ನಿರ್ಮಿಸಲಾದ ಪರಶುರಾಮ ಮೂರ್ತಿ ಕಳಪೆ ಗುಣಮಟ್ಟದ್ದು, ಮೂರ್ತಿಯ ಗುಣಮಟ್ಟ ಉತ್ತಮ ಎಂದು ಹೇಳುವುದು ಕಷ್ಟ ಸಾಧ್ಯ ಎಂಬ ಅರ್ಥದಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಮಾತನಾಡಿದ್ದಾರೆ.
ಪರಶುರಾಮ ಥೀಮ್ ಪಾರ್ಕ್ನ್ನು ಬಿಜೆಪಿ ಸರ್ಕಾರದ ಅವಧಿಯ ಕೊನೆಯಲ್ಲಿ ವಿಧಾನಸಭಾ ಚುನಾವಣೆಯ ಮೊದಲು ಮುಖ್ಯಮಂತ್ರಿ ಬೊಮ್ಮಯಿ ಉದ್ಘಾಟಿಸಿದ್ದರು.
15 ಕೋಟಿ ರು. ವೆಚ್ಚದಲ್ಲಿ, ಜನರ ತೆರಿಗೆ ದುಡ್ಡಿನಿಂದ ಬಂದ ಹಣದಲ್ಲಿ ಇಲಾಖೆಯ ವತಿಯಿಂದ ನಿರ್ಮಿಸಲಾಗಿರುವ ಪರಶುರಾಮ ಥೀಮ್ ಪಾರ್ಕ್ ಯೋಜನೆಯಲ್ಲಿ ಭಾರೀ ಅವ್ಯವಹಾರ ನಡೆದಿದೆ ಎಂಬ ಸುದ್ದಿ ಕರಾವಳಿವಳಿಯಲ್ಲಿ ಭಾರೀ ಸಂಚಲನ ಸೃಷ್ಟಿಸಿತ್ತು. ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಆಗಮಿಸಿದ ಉಡುಪಿ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮೂರ್ತಿಯನ್ನು ಪರಿಶೀಲಿಸಿ ಇದು ಅರ್ಧ ನಕಲಿ– ಅರ್ಧ ಅಸಲಿ ಎಂದು ಹೇಳಿ, ಇದರ ನಿರ್ಮಾಣಕ್ಕೆ ಕಾರಣರಾದವರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಅವ್ಯವಹಾರದ ಬಗ್ಗೆ ದೂರಿನ ಹಿನ್ನೆಲೆಯಲ್ಲಿ ಸ್ಥಳ ಪರಿಶೀಲಿಸಿದ ಉಸ್ತುವಾರಿ ಸಚಿವರು, ಉಡುಪಿ ನಿರ್ಮಿತಿ ಕೇಂದ್ರದ ಅಧಿಕಾರಿಗಳು ಹಾಗೂ ಗುತ್ತಿಗೆದಾರರನ್ನು ತನಿಖೆಗೆ ಒಳಪಡಿಸುವ ಅಗತ್ಯವಿದ್ದು ಈ ಬಗ್ಗೆ ಉಸ್ತುವಾರಿ ಸಚಿವರು ಸುಳಿವು ನೀಡಿದ್ದಾರೆ, ಸಚಿವೆಗೆ ಸರಿಯಾದ ಉತ್ತರವನ್ನು ನೀಡುವುದಕ್ಕೆ ತಡವರಿಸಿದ ನಿರ್ಮಿತಿ ಕೇಂದ್ರದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಉಸ್ತುವಾರಿ ಸಚಿವರ ತನಿಖೆ ವೇಳೆ ಮೂರ್ತಿ ಕಂಚಿನದಲ್ಲ, ಈಗಿರುವುದು ತಾತ್ಕಾಲಿಕವಾಗಿ ನಿರ್ಮಿಸಲಾಗಿರುವ ಮೂರ್ತಿ, ಅದನ್ನು ತೆಗೆದು ನೈಜ ಕಂಚಿನ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿದರು ಎಂದು ವರದಿಯಾಗಿದೆ.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಈ ನಕಲಿ ಮೂರ್ತಿ ಸ್ಥಾಪನೆಯ ಬಗ್ಗೆ ವರದಿ ಪಡೆದು ಕಾನೂನು ಕ್ರಮ ಕೈಗೊಳ್ಳುವುದಾಗಿ ಹೇಳಿದರು. ಪ್ರತಿಮೆ ನಿರ್ಮಾಣ ಮಾಡಿರುವ ಬೆಂಗಳೂರಿನ ಕಲಾವಿದರಿಗೆ ನೋಟಿಸ್ ಜಾರಿ ಮಾಡಲಾಗಿದೆ ಎಂದು ತಿಳಿಸಿದರು.
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…