ಮಂಗಳೂರು: ರಾಜ್ಯದಾದ್ಯಂತ ಹವಾಮಾನ ವೈಪರೀತ್ಯವಾಗುತ್ತಿದ್ದು ಕರಾವಳಿಯಾದ್ಯಂತ ಭಾನುವಾರ ಇಡೀ ದಿನ ಮೋಡ ಕವಿದ ವಾತಾವರಣ, ಗ್ರಾಮೀಣ ಭಾಗದ ಕೆಲವು ಕಡೆ ತುಂತುರು ಮಳೆ ಕಾಣಿಸಿಕೊಂಡಿದೆ. ಈ ಹಿನ್ನೆಲೆ ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ ಇಂದು (ಸೋಮವಾರ) ಕರಾವಳಿ ಭಾಗದಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಮಂಗಳೂರಿನಲ್ಲಿ ಭಾನುವಾರ ಹಗಲು ಹೊತ್ತು ಮಳೆ ಬಾರದಿದ್ದರೂ ಆಗಾಗ ತುಂತುರು ಮಳೆ ಹನಿದಿದೆ. ಉಳಿದಂತೆ ಮೋಡ ಕವಿದು ಮಳೆಯ ವಾತಾವರಣ ಕಂಡುಬಂದಿತ್ತು. ಇತ್ತೀಚೆಗೆ ಹವಾಮಾನದ ಅಸಮತೋಲನದಿಂದಾಗಿ ಜನರಲ್ಲಿ ಶೀತ ಬಾಧೆ, ಜ್ಚರ ಕಾಣಿಸಿಕೊಳ್ಳುತ್ತಿದ್ದು ಡೆಂಗ್ಯೂ ಭೀತಿ ಕೂಡಾ ಆರಂಭವಾಗಿದೆ. ಇನ್ನು ಉಳ್ಳಾಲದಲ್ಲಿ ಭಾನುವಾರ ಗರಿಷ್ಠ 55.1 ಮಿಲಿ. ಮೀಟರ್ ಮಳೆಯಾಗಿದ್ದು ಜಿಲ್ಲೆಯ ಸರಾಸರಿ ಮಳೆ 38.9 ಮೀ.ಮೀ ಆಗಿದೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…