ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಅಪ್ರಾಪ್ತ ಬಾಲಕಿಗೆ ಬಾಲ್ಯವಿವಾಹ; ಅಧಿಕಾರಿಗಳ ದಾಳಿ

ಬಂಟ್ವಾಳ: ಅಪ್ರಾಪ್ತ ಬಾಲಕಿಗೆ ಬಾಲ್ಯವಿವಾಹ ಮಾಡಲು ತಯಾರಿಯಲ್ಲಿದ್ದ ಮನೆಗೆ ಸರಿಯಾದ ಸಮಯದಲ್ಲಿ ಅಧಿಕಾರಿಗಳು ದಾಳಿ ನಡೆಸಿ ಮುಚ್ಚಳಿಕೆ ಬರೆಸಿಕೊಂಡು ಮದುವೆ ನಿಲ್ಲಿಸಿದ ಘಟನೆ ಬೆಳಕಿಗೆ ಬಂದಿದೆ.
‌‌ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಉಳ್ಳಾಲ ತಾಲೂಕಿನ ಇರಾ ಎಂಬಲ್ಲಿ ನಡೆದಿದೆ.
ವಿಟ್ಲ ಸಿ.ಡಿ.ಪಿ.ಒ.ಇಲಾಖೆಯ ವ್ಯಾಪ್ತಿಗೊಳಪಟ್ಟ ಇರಾ ನಿವಾಸಿ 17 ವರ್ಷದ ಅಪ್ರಾಪ್ತ ಬಾಲಕಿಯನ್ನು ಉಳ್ಳಾಲ ತಾಲೂಕಿನ ಸಜೀಪ ನಡು ಗ್ರಾಮದ ಯುವಕನೋರ್ವನಿಗೆ ಮದುವೆ ನಡೆಸುವ ಉದ್ದೇಶದಿಂದ ನಿಶ್ಚಿತಾರ್ಥ ನಡೆದು , ಈ ದಿನ ಮದುವೆಗಾಗಿ ಹಾಲ್ ಕೂಡ ಫಿಕ್ಸ್ ಆಗಿತ್ತು.


ಮಿತ್ತಕೋಡಿ ರಾಯಲ್ ಗಾರ್ಡ್ ನಲ್ಲಿ ಇಂದು ಮದುವೆಗಾಗಿ ಎಲ್ಲಾ ತಯಾರಿಗಳು ನಡೆದಿತ್ತು.
ಬಾಲಕಿಯ ಮನೆಯಲ್ಲಿ ನಿನ್ನೆ ದಿನ ಮದರಂಗಿ ಕಾರ್ಯಗಳು ನಡೆಯುತ್ತಿದ್ದ ವೇಳೆ ಇಲಾಖೆಗೆ ಮಾಹಿತಿ ಬಂದಿದ್ದು, ಕೂಡಲೇ ಸಿ.ಡಿ.ಪಿ.ಒ. ಇಲಾಖೆಯ ಹಿರಿಯ ಮೇಲ್ವಿಚಾರಕಿ, ಗ್ರಾ.ಪಂಪಿ.ಡಿ.ಒ. ತಾ.ಪ.ಇಒ, ಕಂದಾಯ ನಿರೀಕ್ಷಕ, ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು, ಬಂಟ್ವಾಳ ಗ್ರಾಮಾಂತರ ಪೋಲೀಸರು ಮನೆಗೆ ದಾಳಿ ನಡೆಸಿದ್ದಾರೆ.
ಅಪ್ರಾಪ್ತ ಬಾಲಕಿ ಎಂಬುದರ ಸಂಪೂರ್ಣ ದಾಖಲೆಗಳ ಮೂಲಕ ಮನೆಗೆ ಹೋಗಿರುವ ಅಧಿಕಾರಿಗಳು ಮನೆಯವರಿಗೆ ಕಾನೂನಾತ್ಮಕ ವಿಚಾರಗಳನ್ನು ತಿಳಿಸಿದ್ದಾರೆ. ಬಳಿಕ ಮದುವೆ ನಿಲ್ಲಿಸಲು ನಿರ್ಧರಿಸಿದ ಮನೆಯವರಿಂದ ಮುಚ್ಚಳಿಕೆ ಬರೆಸಿಕೊಂಡಿದ್ದರೆ.
ಅ ಬಳಿಕ ಮದುವೆ ಫಿಕ್ಸ್ ಆಗಿದ್ದ ವರನ‌ಕಡೆಯವರಿಗೆ ಮತ್ತು ಮದುವೆ ಹಾಲ್ ನ‌ ಮಾಲಕರಿಗೆ ಸರಿಯಾದ ಮಾಹಿತಿಯನ್ನು ಅಧಿಕಾರಿಗಳು ನೀಡಿದ್ದಾರೆ. ಬಾಲಕಿಗೆ 18 ವರ್ಷ ತುಂಬದ ಕಾರಣ ಇದು ಬಾಲ್ಯವಿವಾಹವಾಗುತ್ತದೆ. ಹಾಗಾಗಿ ಕಾನೂನಿನಡಿಯಲ್ಲಿ ಬರುವ ವಿಚಾರಗಳನ್ನು ತಿಳಿಸಿ ಮದುವೆ ನಿಲ್ಲಿಸಲು ತಿಳಿಸಿದ್ದಾರೆ.
ತಾಲೂಕಿನಲ್ಲಿ ಅಪ್ರಾಪ್ತ ಬಾಲಕಿಯರ ಬಾಲ್ಯವಿವಾಹಕ್ಕೆ ತಯಾರಾಗುವ ಅನೇಕ ಘಟನೆಗಳು ಬೆಳಕಿಗೆ ಬಂದಿವೆ. ಅಧಿಕಾರಿಗಳ ಕಾರ್ಯ ಪ್ರವೃತ್ತಿಯ ಕಾರಣ ಬೆಳಕಿಗೆ ಬಂದ ಪ್ರಕರಣಗಳನ್ನು ನಿಲ್ಲಿಸಲಾಗಿದೆ.
ಆದರೆ ಮತ್ತೆ ಮತ್ತೆ ಇಂತಹ ಘಟನೆಗಳು ಮರುಕಳಿಸುವ ಸಂಗತಿಗಳು ನಡೆಯುತ್ತಿದ್ದು ಆತಂಕಕ್ಕೆ ಕಾರಣವಾಗಿದೆ.
ಮುಂದಿನ ದಿನಗಳಲ್ಲಿ ಅಧಿಕಾರಿಗಳು ಇಂತಹ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವನ್ನು ತೆಗೆದುಕೊಳ್ಳಬೇಕು ಮತ್ತು ಇಲಾಖೆಯ ಮುಖಾಂತರ ಸರಿಯಾದ ಮಾಹಿತಿ ನೀಡುವ ಕೆಲಸ ಆಗಬೇಕಾಗಿದೆ ಎಂಬುದು ಸಾರ್ವಜನಿಕ ಆಗ್ರಹ…

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!