ಬಂಟ್ವಾಳ: ಅಪ್ರಾಪ್ತ ಬಾಲಕಿಗೆ ಬಾಲ್ಯವಿವಾಹ ಮಾಡಲು ತಯಾರಿಯಲ್ಲಿದ್ದ ಮನೆಗೆ ಸರಿಯಾದ ಸಮಯದಲ್ಲಿ ಅಧಿಕಾರಿಗಳು ದಾಳಿ ನಡೆಸಿ ಮುಚ್ಚಳಿಕೆ ಬರೆಸಿಕೊಂಡು ಮದುವೆ ನಿಲ್ಲಿಸಿದ ಘಟನೆ ಬೆಳಕಿಗೆ ಬಂದಿದೆ.
ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಉಳ್ಳಾಲ ತಾಲೂಕಿನ ಇರಾ ಎಂಬಲ್ಲಿ ನಡೆದಿದೆ.
ವಿಟ್ಲ ಸಿ.ಡಿ.ಪಿ.ಒ.ಇಲಾಖೆಯ ವ್ಯಾಪ್ತಿಗೊಳಪಟ್ಟ ಇರಾ ನಿವಾಸಿ 17 ವರ್ಷದ ಅಪ್ರಾಪ್ತ ಬಾಲಕಿಯನ್ನು ಉಳ್ಳಾಲ ತಾಲೂಕಿನ ಸಜೀಪ ನಡು ಗ್ರಾಮದ ಯುವಕನೋರ್ವನಿಗೆ ಮದುವೆ ನಡೆಸುವ ಉದ್ದೇಶದಿಂದ ನಿಶ್ಚಿತಾರ್ಥ ನಡೆದು , ಈ ದಿನ ಮದುವೆಗಾಗಿ ಹಾಲ್ ಕೂಡ ಫಿಕ್ಸ್ ಆಗಿತ್ತು.
ಮಿತ್ತಕೋಡಿ ರಾಯಲ್ ಗಾರ್ಡ್ ನಲ್ಲಿ ಇಂದು ಮದುವೆಗಾಗಿ ಎಲ್ಲಾ ತಯಾರಿಗಳು ನಡೆದಿತ್ತು.
ಬಾಲಕಿಯ ಮನೆಯಲ್ಲಿ ನಿನ್ನೆ ದಿನ ಮದರಂಗಿ ಕಾರ್ಯಗಳು ನಡೆಯುತ್ತಿದ್ದ ವೇಳೆ ಇಲಾಖೆಗೆ ಮಾಹಿತಿ ಬಂದಿದ್ದು, ಕೂಡಲೇ ಸಿ.ಡಿ.ಪಿ.ಒ. ಇಲಾಖೆಯ ಹಿರಿಯ ಮೇಲ್ವಿಚಾರಕಿ, ಗ್ರಾ.ಪಂಪಿ.ಡಿ.ಒ. ತಾ.ಪ.ಇಒ, ಕಂದಾಯ ನಿರೀಕ್ಷಕ, ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು, ಬಂಟ್ವಾಳ ಗ್ರಾಮಾಂತರ ಪೋಲೀಸರು ಮನೆಗೆ ದಾಳಿ ನಡೆಸಿದ್ದಾರೆ.
ಅಪ್ರಾಪ್ತ ಬಾಲಕಿ ಎಂಬುದರ ಸಂಪೂರ್ಣ ದಾಖಲೆಗಳ ಮೂಲಕ ಮನೆಗೆ ಹೋಗಿರುವ ಅಧಿಕಾರಿಗಳು ಮನೆಯವರಿಗೆ ಕಾನೂನಾತ್ಮಕ ವಿಚಾರಗಳನ್ನು ತಿಳಿಸಿದ್ದಾರೆ. ಬಳಿಕ ಮದುವೆ ನಿಲ್ಲಿಸಲು ನಿರ್ಧರಿಸಿದ ಮನೆಯವರಿಂದ ಮುಚ್ಚಳಿಕೆ ಬರೆಸಿಕೊಂಡಿದ್ದರೆ.
ಅ ಬಳಿಕ ಮದುವೆ ಫಿಕ್ಸ್ ಆಗಿದ್ದ ವರನಕಡೆಯವರಿಗೆ ಮತ್ತು ಮದುವೆ ಹಾಲ್ ನ ಮಾಲಕರಿಗೆ ಸರಿಯಾದ ಮಾಹಿತಿಯನ್ನು ಅಧಿಕಾರಿಗಳು ನೀಡಿದ್ದಾರೆ. ಬಾಲಕಿಗೆ 18 ವರ್ಷ ತುಂಬದ ಕಾರಣ ಇದು ಬಾಲ್ಯವಿವಾಹವಾಗುತ್ತದೆ. ಹಾಗಾಗಿ ಕಾನೂನಿನಡಿಯಲ್ಲಿ ಬರುವ ವಿಚಾರಗಳನ್ನು ತಿಳಿಸಿ ಮದುವೆ ನಿಲ್ಲಿಸಲು ತಿಳಿಸಿದ್ದಾರೆ.
ತಾಲೂಕಿನಲ್ಲಿ ಅಪ್ರಾಪ್ತ ಬಾಲಕಿಯರ ಬಾಲ್ಯವಿವಾಹಕ್ಕೆ ತಯಾರಾಗುವ ಅನೇಕ ಘಟನೆಗಳು ಬೆಳಕಿಗೆ ಬಂದಿವೆ. ಅಧಿಕಾರಿಗಳ ಕಾರ್ಯ ಪ್ರವೃತ್ತಿಯ ಕಾರಣ ಬೆಳಕಿಗೆ ಬಂದ ಪ್ರಕರಣಗಳನ್ನು ನಿಲ್ಲಿಸಲಾಗಿದೆ.
ಆದರೆ ಮತ್ತೆ ಮತ್ತೆ ಇಂತಹ ಘಟನೆಗಳು ಮರುಕಳಿಸುವ ಸಂಗತಿಗಳು ನಡೆಯುತ್ತಿದ್ದು ಆತಂಕಕ್ಕೆ ಕಾರಣವಾಗಿದೆ.
ಮುಂದಿನ ದಿನಗಳಲ್ಲಿ ಅಧಿಕಾರಿಗಳು ಇಂತಹ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವನ್ನು ತೆಗೆದುಕೊಳ್ಳಬೇಕು ಮತ್ತು ಇಲಾಖೆಯ ಮುಖಾಂತರ ಸರಿಯಾದ ಮಾಹಿತಿ ನೀಡುವ ಕೆಲಸ ಆಗಬೇಕಾಗಿದೆ ಎಂಬುದು ಸಾರ್ವಜನಿಕ ಆಗ್ರಹ…
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…