ಬಂಟ್ವಾಳ: ಅಪ್ರಾಪ್ತ ಬಾಲಕಿಗೆ ಬಾಲ್ಯವಿವಾಹ ಮಾಡಲು ತಯಾರಿಯಲ್ಲಿದ್ದ ಮನೆಗೆ ಸರಿಯಾದ ಸಮಯದಲ್ಲಿ ಅಧಿಕಾರಿಗಳು ದಾಳಿ ನಡೆಸಿ ಮುಚ್ಚಳಿಕೆ ಬರೆಸಿಕೊಂಡು ಮದುವೆ ನಿಲ್ಲಿಸಿದ ಘಟನೆ ಬೆಳಕಿಗೆ ಬಂದಿದೆ.
ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಉಳ್ಳಾಲ ತಾಲೂಕಿನ ಇರಾ ಎಂಬಲ್ಲಿ ನಡೆದಿದೆ.
ವಿಟ್ಲ ಸಿ.ಡಿ.ಪಿ.ಒ.ಇಲಾಖೆಯ ವ್ಯಾಪ್ತಿಗೊಳಪಟ್ಟ ಇರಾ ನಿವಾಸಿ 17 ವರ್ಷದ ಅಪ್ರಾಪ್ತ ಬಾಲಕಿಯನ್ನು ಉಳ್ಳಾಲ ತಾಲೂಕಿನ ಸಜೀಪ ನಡು ಗ್ರಾಮದ ಯುವಕನೋರ್ವನಿಗೆ ಮದುವೆ ನಡೆಸುವ ಉದ್ದೇಶದಿಂದ ನಿಶ್ಚಿತಾರ್ಥ ನಡೆದು , ಈ ದಿನ ಮದುವೆಗಾಗಿ ಹಾಲ್ ಕೂಡ ಫಿಕ್ಸ್ ಆಗಿತ್ತು.
ಮಿತ್ತಕೋಡಿ ರಾಯಲ್ ಗಾರ್ಡ್ ನಲ್ಲಿ ಇಂದು ಮದುವೆಗಾಗಿ ಎಲ್ಲಾ ತಯಾರಿಗಳು ನಡೆದಿತ್ತು.
ಬಾಲಕಿಯ ಮನೆಯಲ್ಲಿ ನಿನ್ನೆ ದಿನ ಮದರಂಗಿ ಕಾರ್ಯಗಳು ನಡೆಯುತ್ತಿದ್ದ ವೇಳೆ ಇಲಾಖೆಗೆ ಮಾಹಿತಿ ಬಂದಿದ್ದು, ಕೂಡಲೇ ಸಿ.ಡಿ.ಪಿ.ಒ. ಇಲಾಖೆಯ ಹಿರಿಯ ಮೇಲ್ವಿಚಾರಕಿ, ಗ್ರಾ.ಪಂಪಿ.ಡಿ.ಒ. ತಾ.ಪ.ಇಒ, ಕಂದಾಯ ನಿರೀಕ್ಷಕ, ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು, ಬಂಟ್ವಾಳ ಗ್ರಾಮಾಂತರ ಪೋಲೀಸರು ಮನೆಗೆ ದಾಳಿ ನಡೆಸಿದ್ದಾರೆ.
ಅಪ್ರಾಪ್ತ ಬಾಲಕಿ ಎಂಬುದರ ಸಂಪೂರ್ಣ ದಾಖಲೆಗಳ ಮೂಲಕ ಮನೆಗೆ ಹೋಗಿರುವ ಅಧಿಕಾರಿಗಳು ಮನೆಯವರಿಗೆ ಕಾನೂನಾತ್ಮಕ ವಿಚಾರಗಳನ್ನು ತಿಳಿಸಿದ್ದಾರೆ. ಬಳಿಕ ಮದುವೆ ನಿಲ್ಲಿಸಲು ನಿರ್ಧರಿಸಿದ ಮನೆಯವರಿಂದ ಮುಚ್ಚಳಿಕೆ ಬರೆಸಿಕೊಂಡಿದ್ದರೆ.
ಅ ಬಳಿಕ ಮದುವೆ ಫಿಕ್ಸ್ ಆಗಿದ್ದ ವರನಕಡೆಯವರಿಗೆ ಮತ್ತು ಮದುವೆ ಹಾಲ್ ನ ಮಾಲಕರಿಗೆ ಸರಿಯಾದ ಮಾಹಿತಿಯನ್ನು ಅಧಿಕಾರಿಗಳು ನೀಡಿದ್ದಾರೆ. ಬಾಲಕಿಗೆ 18 ವರ್ಷ ತುಂಬದ ಕಾರಣ ಇದು ಬಾಲ್ಯವಿವಾಹವಾಗುತ್ತದೆ. ಹಾಗಾಗಿ ಕಾನೂನಿನಡಿಯಲ್ಲಿ ಬರುವ ವಿಚಾರಗಳನ್ನು ತಿಳಿಸಿ ಮದುವೆ ನಿಲ್ಲಿಸಲು ತಿಳಿಸಿದ್ದಾರೆ.
ತಾಲೂಕಿನಲ್ಲಿ ಅಪ್ರಾಪ್ತ ಬಾಲಕಿಯರ ಬಾಲ್ಯವಿವಾಹಕ್ಕೆ ತಯಾರಾಗುವ ಅನೇಕ ಘಟನೆಗಳು ಬೆಳಕಿಗೆ ಬಂದಿವೆ. ಅಧಿಕಾರಿಗಳ ಕಾರ್ಯ ಪ್ರವೃತ್ತಿಯ ಕಾರಣ ಬೆಳಕಿಗೆ ಬಂದ ಪ್ರಕರಣಗಳನ್ನು ನಿಲ್ಲಿಸಲಾಗಿದೆ.
ಆದರೆ ಮತ್ತೆ ಮತ್ತೆ ಇಂತಹ ಘಟನೆಗಳು ಮರುಕಳಿಸುವ ಸಂಗತಿಗಳು ನಡೆಯುತ್ತಿದ್ದು ಆತಂಕಕ್ಕೆ ಕಾರಣವಾಗಿದೆ.
ಮುಂದಿನ ದಿನಗಳಲ್ಲಿ ಅಧಿಕಾರಿಗಳು ಇಂತಹ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವನ್ನು ತೆಗೆದುಕೊಳ್ಳಬೇಕು ಮತ್ತು ಇಲಾಖೆಯ ಮುಖಾಂತರ ಸರಿಯಾದ ಮಾಹಿತಿ ನೀಡುವ ಕೆಲಸ ಆಗಬೇಕಾಗಿದೆ ಎಂಬುದು ಸಾರ್ವಜನಿಕ ಆಗ್ರಹ…
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…