ಸ್ಕೂಟರ್ನಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ಮಂಗಳೂರು ಹೊರವಲಯದ ಉಳ್ಳಾಲದಲ್ಲಿ ನಡೆದಿದೆ. ರಾಷ್ಟರೀಯ ಹೆದ್ದಾರಿ 66ರ ತೊಕ್ಕೊಟ್ಟು ಕೆರೆಬೈಲು ಬಳಿ ಸ್ಕೂಟರ್ನಿಂದ ಬಿದ್ದು ಅಪಘಾತಕ್ಕೀಡಾಗಿದ್ದ ಮಹಿಳೆ ಚಿಕಿತ್ಸೆಗೆ ಸ್ಪಂದಿಸದೆ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಕಾಸರಗೋಡು ಮಧೂರು ನಿವಾಸಿ ಸುಮಾ ನಾರಾಯಣ ಗಟ್ಟಿ (೫೨) ಮೃತ ದುರ್ದೈವಿ. ಮೂಲತಃ ಬಂಟ್ವಾಳ ನೆಟ್ಲದವರಾಗಿದ್ದ ಇವರು ಭಾನುವಾರ ಮಧೂರಿನಿಂದ ಕುಟುಂಬದ ಮನೆ ಪಿಲಾರು ಅರಮನೆಯಲ್ಲಿ ನಡೆದ ಪೂಜೆಯಲ್ಲಿ ಪಾಲ್ಗೊಂಡಿದ್ದರು. ಸಂಜೆ ಕಾಸರಗೋಡಿಗೆ ಹೊರಡಲು ಸಹೋದರನ ಬೈಕ್ನಲ್ಲಿ ತೊಕ್ಕೊಟ್ಟು ಜಂಕ್ಷನ್ಗೆ ತೆರಳಿದವರು, ಜಪ್ಪಿನಮೊಗರು ಬಳಿಯ ಸಂಬಂಧಿಕರ ಮನೆಗೆ ತೆರಳಿ ವಾಪಾಸ್ ತೊಕ್ಕೊಟ್ಟು ಕಡೆಗೆ ಬರುವಾಗ ಈ ದುರಂತ ಸಂಭವಿಸಿದೆ.
ತೊಕ್ಕೊಟ್ಟು ಜಂಕ್ಷನ್ ಬದಲು ಕೋಟೆಕಾರು ಬೀರಿನವರೆಗೆ ಹೆದ್ದಾರಿಯಲ್ಲಿ ತೆರಳುತ್ತಿದ್ದಾಗ ತೊಕ್ಕೊಟ್ಟು ಫ್ಲೈ ಓವರ್ ಸಂಪರ್ಕಿಸುವ ಕೆರೆಬೈಲು ನಾಗನಕಟ್ಟೆ ಬಳಿ ಚಲಿಸುತ್ತಿದ್ದ ಸ್ಕೂಟರ್ನಿಂದ ಸುಮಾ ಉರುಳಿ ಬಿದದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ. ತಕ್ಷಣ ಅವರನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ಕೂಡಾ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಮೃತರು ಪತಿ, ಪುತ್ರ ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…