ಜನ ಮನದ ನಾಡಿ ಮಿಡಿತ

Advertisement

ಫೇಮಸ್ ಯೂತ್ ಕ್ಲಬ್ ರೋಟರಿ ಸಮುದಾಯದಳದ ಅಧ್ಯಕ್ಷರಾಗಿ ಶ್ರೀ ಮೋಹನ್ ದಾಸ್ ದೇವಾಡಿಗರವರು ಆಯ್ಕೆ

ಮುಲ್ಕಿ: ಭಾರತ ಸರಕಾರದ ಯುವ ಕಾರ್ಯ ಮತ್ತು ನೆಹರು ಯುವ ಕೇಂದ್ರ ಮಂಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಗಳೂರು, ರೋಟರಿ ಕ್ಲಬ್ ಬೈಕಂಪಾಡಿ, ಇವರ ಆಶ್ರಯದಲ್ಲಿ ಫೇಮಸ್ ಯೂತ್ ಕ್ಲಬ್ (ರಿ) ಮತ್ತು ಮಹಿಳಾ ಮಂಡಲ10ನೇ ತೋಕೂರು ಮತ್ತು ಇಂಟರಾಕ್ಟ್ ಕ್ಲಬ್, ಡಾ. ರಾಮಣ್ಣ ಶೆಟ್ಟಿ ಮೆಮೋರಿಯಲ್ ಇಂಗ್ಲಿಷ್ ಮೀಡಿಯಂ ಹೈಸ್ಕೂಲ್ ತೋಕೂರು ಜಂಟಿ ಆಶ್ರಯದಲ್ಲಿ ಫೇಮಸ್ ಯೂತ್ ಕ್ಲಬ್ ರೋಟರಿ ಸಮುದಾಯದಳದ ಪದಗ್ರಹಣ ಕಾರ್ಯಕ್ರಮವು ಭಾನುವಾರ ಬೆಳಿಗ್ಗೆ ಗಂಟೆ 11:00ಕ್ಕೆ ರೋಟರಿ ಸಮುದಾಯದಳದ ಅಧ್ಯಕ್ಷರಾದ ಭಾಸ್ಕರ್ ಅಮೀನ್ ತೋಕೂರುರವರ ಅಧ್ಯಕ್ಷತೆಯಲ್ಲಿ ನೆರವೇರಿತು.


ನೂತನ ಅಧ್ಯಕ್ಷರಾಗಿ ಮೋಹನ್ ದಾಸ್ ದೇವಾಡಿಗ ಮತ್ತು ಕಾರ್ಯದರ್ಶಿಯಾಗಿ ಭೋಜಕೋಟ್ಯಾನ್ ಮತ್ತು ಸದಸ್ಯರಾಗಿ ವಿಶ್ವಜಿತ್ ಆಚಾರ್ಯ ಮಹಮ್ಮದ್ ಶರೀಫ್ ಮತ್ತು ಮನೋಹರ ಆಚಾರ್ಯ ಇವರನ್ನು ಆಯ್ಕೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಫೇಮಸ್ ಯೂತ್ ಕ್ಲಬ್ಬಿನ ಗೌರವಾಧ್ಯಕ್ಷರಾದ ಗುರುರಾಜ ಎಸ್ ಪೂಜಾರಿ, ಮಹಿಳಾ ಅಧ್ಯಕ್ಷೆ ಪ್ರೇಮಲತಾ ಯೋಗೀಶ್, ರೋಟರಿ ಕ್ಲಬ್ ಬೈಕಂಪಾಡಿಯ ಅಧ್ಯಕ್ಷರಾದ ರೊ. ಸುಧಾಕರ ಸಾಲ್ಯಾನ್, ಅಸಿಸ್ಟೆಂಟ್ ಗವರ್ನರ್ ರೊ. ಸುಬೋಧ್ ಕುಮಾರ್ ದಾಸ್, ರಾಮಣ್ಣ ಶೆಟ್ಟಿ ಆಂಗ್ಲ ಮಾಧ್ಯಮ ಶಾಲೆ, ತೋಕೂರು ಇಲ್ಲಿನ ಇಂಟರಾಕ್ಟ್ ಕ್ಲಬ್ಬಿನ ಕೋ ಆರ್ಡಿನೇಟರ್ ಉಷಾ ನರೇಂದ್ರ ಕೆರೆಕಾಡು ಮತ್ತು ವಿದ್ಯಾರ್ಥಿಗಳು, ಈಶ್ವರಿ ಆಯುರ್ ಕೇರ್ ಹಳೆಯಂಗಡಿ ವೈದ್ಯರಾದ ಡಾ. ಎಚ್. ಹರಿಹರ ಪ್ರಸಾದ್ ರಾವ್, ರೋಟರಿ ಕ್ಲಬ್ ಬೈಕಂಪಾಡಿಯ ಪದಾಧಿಕಾರಿಗಳು ಮತ್ತು ಸದಸ್ಯರು, ಫೇಮಸ್ ಯೂತ್ ಕ್ಲಬ್ಬಿನ ಮತ್ತು ಮಹಿಳಾ ಮಂಡಲದ ಸದಸ್ಯರು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಫೇಮಸ್ ಯೂತ್ ಕ್ಲಬ್ಬಿನ ಅಧ್ಯಕ್ಷರಾದ ಭಾಸ್ಕರ್ ಅಮೀನ್ ತೋಕೂರುರವರು ಪ್ರಾಸ್ತಾವಿಕ ಮಾತಿನೊಂದಿಗೆ ಸ್ವಾಗತಿಸಿ ರೋಟರಿ ಕ್ಲಬ್ ಬೈಕಂಪಾಡಿಯ ಅಧ್ಯಕ್ಷರಾದ ರೊ. ಸುಧಾಕರ್ ಸಾಲ್ಯಾನ್ ರವರು ಕಾರ್ಯಕ್ರಮವನ್ನು ನಿರೂಪಿಸಿದರು.

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!