ಜನ ಮನದ ನಾಡಿ ಮಿಡಿತ

Advertisement

ಕುಂದಾಪುರ ಯುವ ಬಂಟರ ಸಂಘದ ಸಭಾಭವನದಲ್ಲಿ ವಿಶ್ವ ಬಂಟರ ಕ್ರೀಡಾಕೂಟ ಹಾಗೂ ವಿಶ್ವ ಬಂಟರ ಸಾಂಸ್ಕೃತಿಕ ವೈಭವದ ಕರಪತ್ರ ಬೈಂದೂರಿನ ಮಾಜಿ ಶಾಸಕರಾದ ಶ್ರೀ ಬಿ. ಅಪ್ಪಣ್ಣ ಹೆಗ್ಡೆಯವರಿಂದ ಬಿಡುಗಡೆ


ಉಡುಪಿಯ ಅಜ್ಜರಕಾಡು ಮೈದಾನದಲ್ಲಿ ಆಕ್ಟೋಬರ್ 28 ಮತ್ತು 29 ರಂದು ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರ ಸಮರ್ಥ ಸಾರಥ್ಯದಲ್ಲಿ ವಿಶ್ವ ಬಂಟರ ಸಮ್ಮೇಳನದ ಪ್ರಯುಕ್ತ ನಡೆಯಲಿರುವ “ವಿಶ್ವ ಬಂಟರ ಕ್ರೀಡಾಕೂಟ” ಹಾಗೂ “ವಿಶ್ವ ಬಂಟರ ಸಾಂಸ್ಕೃತಿಕ ವೈಭವ”ದ ಕರಪತ್ರವನ್ನು ಕುಂದಾಪುರ ಯುವ ಬಂಟರ ಸಂಘದ ಸಭಾಭವನದಲ್ಲಿ ಬೈoದೂರಿನ ಮಾಜಿ ಶಾಸಕರಾದ ಬಿ.ಅಪ್ಪಣ್ಣ ಹೆಗ್ಡೆಯವರು ಅನಾವರಣಗೊಳಿಸಿದರು. ನಂತರ ವಿಶ್ವ ಬಂಟರ ಸಮ್ಮೇಳನದ ಕಾರ್ಯಕ್ರಮಗಳಿಗೆ ಕುಂದಾಪುರ ಯುವ ಬಂಟರ ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿಯವರು ಪ್ರೀತಿಪೂರ್ವಕವಾಗಿ ಆಹ್ವಾನಿಸಿದರು.


ಈ ಸಂದರ್ಭದಲ್ಲಿ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿಯವರನ್ನು ಹಾಗೂ ಮಹಾದಾನಿ ಕನ್ಯಾನ ಸದಾಶಿವ ಶೆಟ್ಟಿಯವರನ್ನು ಅಧ್ಯಕ್ಷರು ಡಾ.ಅಂಪಾರು ನಿತ್ಯಾನಂದ ಶೆಟ್ಟಿಯವರು ಹಾಗೂ ಪದಾಧಿಕಾರಿಗಳು ಸನ್ಮಾನಿಸಿದರು. ಈ ಸಂದರ್ಭದಲ್ಲಿ ಮೈಸೂರು ಬಂಟರ ಸಂಘದ ಅಧ್ಯಕ್ಷರಾದ ಟಿ. ಪ್ರಭಾಕರ್ ಶೆಟ್ಟಿಯವರು, ಕುಂದಾಪುರ ಯುವ ಬಂಟರ ಸಂಘದ ಎಲ್ಲಾ ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರುಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!