ಬಂಟ್ವಾಳ: ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ ಒಂಬತ್ತು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಈತನಿಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.
ಮಂಗಳೂರು ತಾಲೂಕಿನ ಸುರತ್ಕಲ್ ಕೃಷ್ಣಾಪುರ ಚೋಕ್ಯಬೆಟ್ಟು ನಿವಾಸಿ ಮಹಮ್ಮದ್ ಅವರ ಮಗ ಮಹಮ್ಮದ್ ಶಾಫಿ ಬಂಧಿತ ಆರೋಪಿ.
ಈತ 2017 ರಲ್ಲಿ ಬಂಟ್ವಾಳ ಗ್ರಾಮಾಂತರ ವ್ಯಾಪ್ತಿಯ ಕಳ್ಳತನ ಪ್ರಕರಣವೊಂದರ ಆರೋಪಿಯಾಗಿದ್ದು, ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ.
ಇದರ ಜೊತೆಗೆ ಜಿಲ್ಲೆಯ ವಿವಿಧ ಠಾಣೆಯಲ್ಲಿ ಈತನ ಮೇಲೆ ಕಳ್ಳತನ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಕರಣಗಳಿದ್ದು, ಅ ಪ್ರಕರಣದಲ್ಲಿಯೂ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ.
ಬಂಟ್ವಾಳ ನಗರ ಪೋಲೀಸ್ ಠಾಣೆ, ವಿಟ್ಲ ಪೋಲಿಸ್ ಠಾಣೆ, ಉಪ್ಪಿನಂಗಡಿ, ಬೆಳ್ತಂಗಡಿ ಹಾಗೂ ಕೋಣಾಜೆ ಪೋಲೀಸ್ ಠಾಣೆಯಲ್ಲಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಈತನ ಮೇಲೆ ಪ್ರಕರಣ ದಾಖಲಾಗಿದ್ದು, ಈತ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ.
ಇದೀಗ ಖಚಿತ ಮಾಹಿತಿ ಪಡೆದ ಬಂಟ್ವಾಳ ಗ್ರಾಮಾಂತರ ಇನ್ಸ್ ಪೆಕ್ಟರ್ ಶಿವಕುಮಾರ್, ಹಾಗೂ ಉಪನಿರೀಕ್ಷಕರಾದ ಹರೀಶ್ ಮತ್ತು ಮೂರ್ತಿ ಅವರ ಮಾರ್ಗದರ್ಶನ ದಲ್ಲಿ ಸಿಬ್ಬಂದಿ ಗಳಾದ ಗಣೇಶ್ ಪ್ರಸಾದ್, ಪುನೀತ್ ಕುಮಾರ್ , ವಿಜಯಕುಮಾರ್ , ರಂಜಾನ್ ಅವರು ಪುತ್ತೂರಿನಲ್ಲಿ ಬಂಧಿಸಿ , ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…